ಪ್ರತಿಯೊಬ್ಬರೂ ಕಾಯಕ ಪ್ರಜ್ಞೆ ಮೈಗೂಡಿಸಿಕೊಳ್ಳಿ

ಆರೋಗ್ಯದಲ್ಲಿನ ಸಣ್ಣ ಪ್ರಮಾಣದ ನಿರ್ಲಕ್ಷ ಕೂಡ ದೊಡ್ಡ ಆಪತ್ತು ತಂದೊಡ್ಡಬಹುದು.

Team Udayavani, Jun 13, 2022, 5:56 PM IST

ಪ್ರತಿಯೊಬ್ಬರೂ ಕಾಯಕ ಪ್ರಜ್ಞೆ ಮೈಗೂಡಿಸಿಕೊಳ್ಳಿ

ಚಿತ್ರದುರ್ಗ: ಆಧುನಿಕ ಜಗತ್ತಿನಲ್ಲಿ ಒತ್ತಡ ಅನಿವಾರ್ಯವಾಗಿದ್ದು, ಎಲ್ಲರೂ ಪರಿಶ್ರಮದ ಮೂಲಕ ಹೆಚ್ಚು ಬೆವರು ಹರಿಸಿ ಆರೋಗ್ಯ ಹಾಗೂ ಆಯಸ್ಸನ್ನು ವೃದ್ಧಿಸಿಕೊಳ್ಳಬೇಕು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಇಂಡಿಯಾನಾ ಎಸ್‌ಜೆಎಂ ಹಾರ್ಟ್‌ ಸೆಂಟರ್‌ ಸಹಯೋಗದಲ್ಲಿ ಆಯೋಜಿಸಿದ್ದ ಹೃದಯ ತಪಾಸಣಾ ಶಿಬಿರದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಕಾಯಕದ ಮೂಲಕ ಶರೀರಕ್ಕೆ ಬೀಳುವ ಒತ್ತಡವನ್ನು ಕಡಿಮೆ ಮಾಡಬಹುದಾಗಿದೆ. ಪತ್ರಕರ್ತರು ಹೆಚ್ಚು ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಇದರಿಂದ ಆಯಸ್ಸು ಕಡಿಮೆಯಾಗುತ್ತದೆ. ಜಪಾನೀಯರು ದಿನದಲ್ಲಿ 14ರಿಂದ 16 ಗಂಟೆ ಶ್ರಮದಾಯಕ ಕೆಲಸ ಮಾಡುವುದರಿಂದ ಅವರ ಆಯಸ್ಸು 100 ವರ್ಷ ದಾಟುತ್ತಿದೆ. ನಮ್ಮ ದೇಶದಲ್ಲಿ ಮನುಷ್ಯನ ಸರಾಸರಿ ಜೀವಿತಾವಧಿ 64 ವರ್ಷಗಳಷ್ಟಿದೆ. ಇಲ್ಲಿ ಶ್ರಮವೂ ಕಡಿಮೆಯಾಗಿದೆ ಎಂದರು.

ಕಾಯಕದಿಂದ ಮಾತ್ರ ಕೈಲಾಸ ಕಾಣಲು ಸಾಧ್ಯ. ಆದರೆ ಇಂದು ಬಹುತೇಕರು ಕಾಯಕ ಬಿಟ್ಟು ಕೈಲಾಸದ ಆಸೆಯನ್ನು ಮಾತ್ರ ಕಾಣುತ್ತಾರೆ. ಇಂದು ವೈದ್ಯಕೀಯ ತಂತ್ರಜ್ಞಾನ ಕೂಡ ಮುಂದುವರೆದಿದೆ. ಯಾವುದೇ ರೋಗಕ್ಕೂ ಚಿಕಿತ್ಸೆ, ಆಪರೇಷನ್‌ ಸಿಗುತ್ತಿದೆ. ಇದೇ ವೇಳೆ ಚಿತ್ರದುರ್ಗದಲ್ಲಿ ಬಸವೇಶ್ವರ ಆಸ್ಪತ್ರೆಯನ್ನೂ ಮೇಲ್ದರ್ಜೆಗೇರಿಸಲಾಗಿದೆ. ತುರ್ತು ಚಿಕಿತ್ಸೆಗಳು ಇಲ್ಲಿ ಲಭ್ಯವಿವೆ. ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕಿದೆ.

ಇದರ ಹೊರತು ಮೆಡಿಕಲ್‌ ಕಾಲೇಜು ತೆರೆಯುವುದರಿಂದ ಭಾರೀ ಬದಲಾವಣೆಗಳೇನು ಆಗುವುದಿಲ್ಲ. ಮೆಡಿಕಲ್‌ ಕಾಲೇಜು ಬಂದರೆ 200 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಆದರೆ ಆಸ್ಪತ್ರೆ ಮೇಲ್ದರ್ಜೆಗೇರಿದರೆ ಸಾವಿರಾರು ರೋಗಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ಇಂದಿನ ಜೀವನ ಪದ್ಧತಿಯಲ್ಲಿ ಎಲ್ಲರೂ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು.

ಆರೋಗ್ಯದಲ್ಲಿನ ಸಣ್ಣ ಪ್ರಮಾಣದ ನಿರ್ಲಕ್ಷ ಕೂಡ ದೊಡ್ಡ ಆಪತ್ತು ತಂದೊಡ್ಡಬಹುದು. ತಂತ್ರಜ್ಞಾನ ಮುಂದುವರೆದಿದೆ. ನಮ್ಮ ದೇಶದ ವೈದ್ಯರು ಸಾಕಷ್ಟು ಬುದ್ಧಿವಂತರಾಗಿದ್ದಾರೆ. ಈ ಹಿಂದೆ ವಿದೇಶಗಳಿಗೆ ಹೋಗಿ ಚಿಕಿತ್ಸೆ ಪಡೆಯಬೇಕಾಗಿತ್ತು. ಆದರೆ ಇಂದು ಅತ್ಯಾಧುನಿಕ ಚಿಕಿತ್ಸೆ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಲಭ್ಯವಾಗುತ್ತಿದೆ ಎಂದು ತಿಳಿಸಿದರು.

ಹೃದಯ ತಜ್ಞ ಡಾ| ಕಾರ್ತಿಕ್‌ ಮಾತನಾಡಿ, ಸದ್ಯದ ಪರಿಸ್ಥಿತಿಯಲ್ಲಿ ಶೇ. 40ರಿಂದ 60ರಷ್ಟು ಸಾವು ಹೃದಯಕ್ಕೆ ಸಂಬಂಧಿ ಸಿಯೇ ಇರುತ್ತದೆ. ರೋಗ ಬಂದಾಗ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರುವುದಕ್ಕಿಂತ ಮುಂಚೆಯೇ ಚಿಕಿತ್ಸೆ ಅಥವಾ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು ಎಂದು ಸಲಹೆ ನೀಡಿದರು.

ಪತ್ರಕರ್ತರ ಸಂಘದ ಉಪಾಧ್ಯಕ್ಷ ತಿಪ್ಪೇಸ್ವಾಮಿ ನಾಕೀಕೆರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸವೇಶ್ವರ ಆಸ್ಪತ್ರೆಯ ಡೀನ್‌ ಡಾ| ಪ್ರಶಾಂತ್‌, ಇಂಡಿಯಾನ ಎಸ್‌.ಜೆ.ಎಂ ಹಾರ್ಟ್‌ ಸೆಂಟರ್‌ನ ಸಿಇಒ ರೂಪೇಶ್‌ ಶೆಟ್ಟಿ, ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್‌ ಗೌಡಗೆರೆ, ಪ್ರಧಾನ ಕಾರ್ಯದರ್ಶಿ ಎಸ್‌. ಸಿದ್ದರಾಜು, ಖಜಾಂಚಿ ಕುಮಾರಸ್ವಾಮಿ ವೇದಿಕೆಯಲ್ಲಿದ್ದರು. ಪತ್ರಕರ್ತ ರವಿ ಉಗ್ರಾಣ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಪತ್ರಕರ್ತ ಅಂಜಿನಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು.

ಸರ್ಕಾರಿ ಸೌಲಭ್ಯ ಸದ್ಬಳಕೆಯಾಗಲಿ
ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ದೇಶದ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಸರ್ಕಾರದ ಸೌಲಭ್ಯಗಳನ್ನು ಜನತೆ ಬಳಕೆ ಮಾಡಿಕೊಳ್ಳಬೇಕು. ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ಖರ್ಚು ಮಾಡುತ್ತಿದೆ. ಇದರೊಟ್ಟಿಗೆ ಎಲ್ಲರಿಗೂ ಆರೋಗ್ಯ ವಿಮೆ ಮಾಡಿಸಿದರೆ ಹೆಚ್ಚು ಅನುಕೂಲವಾಗಲಿದೆ. ಚಿತ್ರದುರ್ಗದಲ್ಲಿ ಶೀಘ್ರದಲ್ಲೇ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭವಾಗಲಿದೆ. ಇದರಿಂದ ಜಿಲ್ಲೆಯ ಜನತೆಗೆ
ಅನುಕೂಲವಾಗಲಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ತಿಳಿಸಿದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.