
ಕಾಂಗ್ರೆಸ್ ಏಕತ ಸಮಾವೇಶ: ನಾವು ಕನ್ನಡಿಗರು, ನಮ್ಮ ಕೈ ಹಿಡಿಯಿರಿ
ಕರ್ನಾಟಕದ ಅಸ್ಮಿತೆ ಹೆಸರಲ್ಲಿ ಬೆಂಬಲ ಕೋರಿದ ಖರ್ಗೆ
Team Udayavani, Jan 9, 2023, 7:00 AM IST

ಚಿತ್ರದುರ್ಗ: ಗುಜರಾತ್ ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿ ಪ್ರತೀ ಭಾಷಣದಲ್ಲೂ ನಾನು ಈ ಮಣ್ಣಿನ ಮಗ, ಈ ಊರಿನ ಮಗ, ನಮಗೆ ಆಶೀರ್ವದಿಸಿ ಎಂದು ಮಾತನಾಡುತ್ತಿದ್ದರು. ನಾನು ಈಗ ಎಐಸಿಸಿ ಅಧ್ಯಕ್ಷನಾಗಿ ಅದನ್ನೇ ಕೇಳುತ್ತಿದ್ದೇನೆ. ನಾನು ಈ ಮಣ್ಣಿನ ಮಗ. ನಮ್ಮ ಕೈ ಹಿಡಿಯಿರಿ…
-ಇದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೋರಿಕೆ. ರವಿವಾರ ಚಿತ್ರದುರ್ಗದ ಜಯದೇವ ಕ್ರೀಡಾಂಗಣದಲ್ಲಿ ಕೆಪಿಸಿಸಿ ಆಯೋಜಿಸಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಏಕತ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಗುಜರಾತ್ ನಾಯಕರನ್ನು ನಾವು ತಲೆ ಮೇಲೆ ಇರಿಸಿಕೊಂಡು ಮೆರೆದಿದ್ದೇವೆ. ಮಹಾತ್ಮಾ ಗಾಂಧೀಜಿ ರಾಷ್ಟ್ರಪಿತ. ಅವರನ್ನು ತಲೆ ಮೇಲೆ ಇರಿಸಿಕೊಂಡಿದ್ದೇವೆ. ಪಟೇಲರು ಗುಜರಾತಿನವರು. ಆದರೆ ಮೋದಿ ಅವರು ಗುಜರಾತ್ ಚುನಾವಣೆಯಲ್ಲಿ ಬೇರೆಯವರಿಗೆ ಮತ ಹಾಕಿದರೆ ಗುಜರಾತ್ ನಾಯಕರಿಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದರು.
ಗುಜರಾತ್ನಲ್ಲಿ ಮೋದಿ ಅವರು ತಮ್ಮನ್ನು ಆಶೀರ್ವದಿಸುವಂತೆ ಪ್ರತೀ ಭಾಷಣದಲ್ಲೂ ಮನವಿ ಮಾಡುತ್ತಿದ್ದರು. ಈಗ ನಾನೂ ಅದನ್ನೇ ಕೇಳುತ್ತಿದ್ದೇನೆ. ನಾನು ಈ ಮಣ್ಣಿನ ಮಗ. ನಾವೆಲ್ಲರೂ ಕರ್ನಾಟಕದವರು. ನಮ್ಮನ್ನು ಆಯ್ಕೆ ಮಾಡಿ. ಮುಂದಿನ ಅವಧಿಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಮನವಿ ಮಾಡಿದರು.
ಇದೇ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿಜೆಪಿಯ ಸುಳ್ಳಿನ ಕಂತೆಗೆ ನೀವು ಬಲಿಯಾಗಬೇಡಿ. ಸುಳ್ಳು ಅವರ ಮನೆ ದೇವರು. ಚುನಾವಣೆಯಲ್ಲಿ ಕೊಟ್ಟ ಭರವಸೆಯನ್ನು ಬಿಜೆಪಿ ಈಡೇರಿಸುತ್ತಿಲ್ಲ. ಬಿಜೆಪಿ ಭಾವನೆ ಮೇಲೆ ದೇಶ ಕಟ್ಟುವ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಬದುಕಿನ ಮೇಲೆ ದೇಶ ಕಟ್ಟಲಿದೆ ಎಂದರು.
ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಮೀಸಲಾತಿಗೆ ಕಾನೂನು ರಕ್ಷಣೆ ಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಜ. 30ರೊಳಗೆ ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸದಿದ್ದರೆ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡಲಿದೆ.
– ಸಿದ್ದರಾಮಯ್ಯ, ವಿಪಕ್ಷ ನಾಯಕ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Environment Day ಮುರುಘಾ ಮಠದ ಆಡಳಿತಾಧಿಕಾರಿ ವಿರುದ್ದ ಜನಾಕ್ರೋಶ

BJP ತತ್ ಕ್ಷಣವೇ ಶಾಸಕ ಎಂ.ಚಂದ್ರಪ್ಪ ರನ್ನು ಉಚ್ಚಾಟಿಸಬೇಕು: ದಸಂಸ

ಮತದಾರರನ್ನು ಭಿಕ್ಷುಕರ ಸಾಲಿನಲ್ಲಿ ನಿಲ್ಲಿಸಲು ಕಾಂಗ್ರೆಸ್ ಷಡ್ಯಂತ್ರ: ಎ.ನಾರಾಯಣಸ್ವಾಮಿ

Free Bus Pass ಕೊಡುವವರು ಮಹಿಳೆಯರ ರಕ್ಷಣೆ ಬಗ್ಗೆ ಯೋಚನೆ ಮಾಡುತ್ತಿಲ್ಲ: ವಿಜಯೇಂದ್ರ

ಸಿ.ಟಿ.ರವಿ ದುರಹಂಕಾರಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ: Minister Eshwar Khandre
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ಬಸ್ಗಳ ಮೇಲಾಟ: ವಿದ್ಯಾರ್ಥಿ ಸಾವು; ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹನಗೋಡಿನಲ್ಲಿ ಮತ್ತೆ ಕಾಣಿಸಿಕೊಂಡ ಹುಲಿ ಹೆಜ್ಜೆ; ಗ್ರಾಮಸ್ಥರಲ್ಲಿ ಆತಂಕ

Basangouda Patil Yatnal ಟ್ವೀಟ್ ಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

Viral Video: ಪಲ್ಟಿಯಾದ ಮದ್ಯ ತುಂಬಿದ ಲಾರಿ- ಬಾಟ್ಲಿಗಾಗಿ ಮುಗಿಬಿದ್ದ ಜನ!