ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ
Team Udayavani, Jul 4, 2020, 1:24 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೊಂಡ್ಲಹಳ್ಳಿ: ಪ್ರತಿ 20 ಕೂಲಿ ಕಾರ್ಮಿಕರಿಗೆ ಒಬ್ಬರು ಮೇಟಿಯನ್ನು ಗುರುತಿಸಬೇಕು ಎಂದು ಜಿಪಂ ಮುಖ್ಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಟಿ.ಯೋಗೀಶ್ ಹೇಳಿದರು.
ಕೊಂಡ್ಲಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಉದ್ಯೋಗ ಖಾತ್ರಿ ಯೋಜನೆಯ ಬದು ನಿರ್ಮಾಣ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು. ಕಾಮಗಾರಿಗಳಲ್ಲಿ ಮತ್ತಷ್ಟು ಮಹಿಳೆಯರಿಗೆ ಅವಕಾಶ ನೀಡಬೇಕು. ಮೇಟಿಗಳಿಗೆ ಅಗತ್ಯ ತರಬೇತಿ ಕೊಡಬೇಕು. ಪಿಡಿಒಗಳು ಉತ್ತಮವಾಗಿ ಸ್ಪಂದಿಸಬೇಕು ಎಂದರು. ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ತಾಲೂಕು ಸಂಚಾಲಕಿ ಲಕ್ಷ್ಮೀ ಮಾತನಾಡಿ, ಪ್ರತಿ ಪಂಚಾಯಿತಿಯಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡಿ 8-10 ದಿನದೊಳಗೆ ಕೂಲಿ ಮೊತ್ತ ಪಾವತಿಸಬೇಕೆಂದು ಒತ್ತಾಯಿಸಿದರು.
ನರೇಗಾ ಪ್ರಗತಿ, ಖಾತಾ ಪರಿಶೀಲನೆಗೆ ಗ್ರಾಪಂ ಕಚೇರಿಗೆ ಜಿಪಂ ಸಿಇಒ ಭೇಟಿ ನೀಡಿದ್ದರು. ಗ್ರಾಮ ಪಂಚಾಯತ್ದಲ್ಲಿ ಇ- ಸ್ವತ್ತಿಗೆ ಸಂಬಂ ಧಿಸಿದ ಶುಲ್ಕದ ಹೊರೆಯನ್ನು ಕಡಿಮೆ ಮಾಡುವಂತೆ ಜಿ.ಎಸ್. ಲೋಕೇಶ್ ಮನವಿ ಮಾಡಿದರು. ಈ ವಿಷಯವನ್ನು ತಾಪಂ ಇಒ ಗಮನಕ್ಕೆ ತರುವಂತೆ ಸೂಚಿಸಿದರು. ತಾಪಂ ಇಒ ಪ್ರಕಾಶ್, ಗ್ರಾಪಂ ಪಿಡಿಒ ಪ್ರಹ್ಲಾದ್, ಇಂಜಿನಿಯರ್ ಸೌಮ್ಯ, ವಕೀಲ ಪ್ರದೀಪ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ