ಸೋರುತಿಹುದು ಶಾಲೆ ಛಾವಣಿ


Team Udayavani, Jun 3, 2018, 5:19 PM IST

cta-1.jpg

ಹೊಳಲ್ಕೆರೆ: ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂ. ವ್ಯಯಿಸುತ್ತಿದ್ದರೂ ಶಾಲೆಗಳಿಗೆ ಸರ್ಕಾರಿ
ಸೌಲಭ್ಯ ಮರೀಚಿಕೆಯಾಗಿದೆ. ಅಂತಹ ಮೂಲ ಸೌಕರ್ಯ ವಂಚಿತ ಶಾಲೆಗಳಲ್ಲಿ ತಾಲೂಕಿನ ರಾಮಗಿರಿ ಹೋಬಳಿಯ
ರಂಗಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಒಂದು.

ಮುರಿದು ಹೋದ ಮೇಲ್ಛಾವಣಿ, ತುಂಡಾಗಿರುವ ಹೆಂಚು, ಬಿರುಕು ಬಿಟ್ಟ ಗೋಡೆ, ಗಾಳಿ ಬಂದರೆ ಅಲ್ಲಾಡುವ ಕಿಡಕಿ ಬಾಗಿಲು, ನೀರಿಲ್ಲದ ಶೌಚಾಲಯ ಮತ್ತಿತರ ಸಮಸ್ಯೆಗಳು ಈ ಶಾಲೆಯಲ್ಲಿ ಜೀವಂತವಾಗಿವೆ. 1ರಿಂದ7 ನೇ ತರಗತಿವರೆಗೆ 104 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಆದರೆ ಮೂಲ ಸೌಲಭ್ಯಗಳು ಮಾತ್ರ ಅವರಿಗೆ ದೊರೆತಿಲ್ಲ. ಎಡೆಬಿಡದೆ ಸುರಿಯುತ್ತಿರುವ ಮಳೆ ಶಾಲೆಯ ವಿದ್ಯಾರ್ಥಿಗಳಿಗೆ ಶಾಪವಾಗಿ ಪರಿಣಮಿಸಿದೆ. ಮಳೆ ಸುರಿದರೆ ಶಿಥಿಲಗೊಂಡ ಕೊಠಡಿಗಳ ಮೇಲ್ಛಾವಣಿಯಿಂದ ನೀರು ಸುರಿಯಲಾರಂಭಿಸುತ್ತದೆ. ಹಾಗಾಗಿ ಪಾಠ ಕೇಳಲು ಶಾಲೆಗೆ ಹೋಗುವ ವಿದ್ಯಾರ್ಥಿಗಳು ಶಾಲಾ ಕೊಠಡಿಗಳಲ್ಲಿ ನಿಂತಿರುವ ನೀರನ್ನು ಹೊರ ಹಾಕಲು ಹರಸಾಹಸಪಡುವಂತಾಗಿದೆ.

ಈ ಶಾಲೆಯಲ್ಲಿ ಒಟ್ಟು ಒಂಭತ್ತು ಕೊಠಡಿಗಳಿವೆ. ಗೋಡೆಗಳು ಸಂಪೂರ್ಣ ಶಿಥಿಲಗೊಂಡಿದ್ದು, ಹೆಂಚುಗಳು ಮುರಿದು ಹೋಗಿದ್ದರಿಂದ ನೀರು ಶಾಲೆಯೊಳಗೆ ಹರಿಯುತ್ತವೆ. 104 ವಿದ್ಯಾರ್ಥಿಗಳಿಗೆ ಬೇಕಾದಷ್ಟು ಕೊಠಡಿಗಳಿವೆ ಎನ್ನುವ ಸಮಾಧಾನವಿದ್ದರೂ ಕೊಠಡಿಯಲ್ಲಿರುವ ಸೂರು ವಿದ್ಯಾರ್ಥಿಗಳ ತಲೆಯ ಮೇಲೆ ಯಾವಾಗ ಬೀಳುತ್ತದೆಯೋ ಎನ್ನುವ ಆತಂಕವೂ ಕಾಡುತ್ತಿದೆ.

ಎಲ್ಲಾ ಕೊಠಡಿಗಳೂ ಶಿಥಿಲಾವಸ್ಥೆ ತಲುಪಿ ಹಲವಾರು ವರ್ಷಗಳಾಗಿದ್ದರೂ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ದುರಸ್ತಿಗೆ ಮುಂದಾಗದೇ ಇರುವುದು ಮಾತ್ರ ವಿಪರ್ಯಾಸ. ಶಾಲೆಯ ಗೋಡೆಗಳು ಹಾಗೂ ಮೇಲ್ಛಾವಣಿಯ ಮರದ ತೊಲೆಗಳು ಶಕ್ತಿ ಕಳೆದುಕೊಂಡಿವೆ. ರೀಪುಗಳು ಮುರಿದು ಹೋಗಿ ಹೆಂಚುಗಳು ಒಡೆದಿವೆ.

ಮಳೆಗಾಲದಲ್ಲಿ ಕೊಠಡಿಗಳು ಸೋರುತ್ತವೆ. ನೀರಿನಿಂದ ತೊಯ್ದ ಗೋಡೆಗಳು, ಡೆಸ್ಕ್ಗಳು ಕುಸಿಯುವಂತಿವೆ. ದೊಡ್ಡ
ಅನಾಹುತ ಸಂಭವಿಸುವ ಮೊದಲು ಸಂಬಂಧಿಸಿದವರು ಎಚ್ಚೆತ್ತುಕೊಂಡು ಶಾಲೆಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು
ಎಂಬುದು ರಂಗಾಪುರ ಗ್ರಾಮಸ್ಥರ ಒತ್ತಾಯ.

ರಂಗಾಪುರ ಶಾಲೆಯ ಮೇಲ್ಛಾವಣಿಗೆ ಹಳೆದಾಗಿರುವುದರಿಂದ ನೀರು ಸೋರಿದೆ. ಮೇಲ್ಛಾವಣೆ ರಿಪೇರಿಗೆ 2 ಲಕ್ಷ ರೂ.
ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಾಕಷ್ಟು ಕೊಠಡಿಗಳಿರುವುದರಿಂದ ಹೊಸ ಕೊಠಡಿ ನೀಡಿರಲಿಲ್ಲ. ಈಗ ಸೋರುತ್ತಿರುವುದರಿಂದ ಹೊಸ ಕೊಠಡಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. 
 ಜಗದೀಶ್‌, ಕ್ಷೇತ್ರಶಿಕ್ಷಣಾಧಿಕಾರಿ.

ಉತ್ತಮ ಶಾಲೆ ಎಂಬ ಖ್ಯಾತಿ ಗಳಿಸಿದ್ದರೂ ಸರಕಾರ ಶಾಲೆಗೆ ಬೇಕಾದ ಸೌಲಭ್ಯ ಕಲ್ಪಿಸಿಲ್ಲ. ಶಾಲಾ ಕೊಠಡಿಗಳು
ಶಿಥಿಲಗೊಂಡ ಬಗ್ಗೆ ಹಲವಾರು ಬಾರಿ ಶಿಕ್ಷಣ ಇಲಾಖೆಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಸೌಲಭ್ಯ ಸಿಕ್ಕಿಲ್ಲ. 
 ಜಿ.ಆರ್‌. ರವಿಕುಮಾರ್‌, ಎಸ್‌ಡಿಎಂಸಿ ಅಧ್ಯಕ್ಷ.

„ಎಸ್‌. ವೇದಮೂರ್ತಿ

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.