ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಅಡುಗೆ ಮನೆಯ ಪಾತ್ರೆಗಳ ನಡುವೆ ಬಚ್ಚಿಟ್ಟುಕೊಂಡ ಚಿರತೆ!
Team Udayavani, May 8, 2021, 9:30 AM IST
ಚಿತ್ರದುರ್ಗ: ತಾಲೂಕಿನ ಮುದ್ದಾಪುರ ಗ್ರಾಮದ ಮನೆಯೊಂದಕ್ಕೆ ನಸುಕಿನಲ್ಲೇ ಚಿರತೆಯೊಂದು ನುಗ್ಗಿ ಲಾಕ್ ಆಗಿದೆ.
ಬೆಳಗ್ಗೆ 5.30 ರ ವೇಳೆಗೆ ಮುದ್ದಾಪುರದ ಚಿದಾನಂದ ಎಂಬುವವರ ಮನೆಗೆ ನುಗ್ಗಿದ ಚಿರತೆ, ಅಡುಗೆ ಮನೆಯ ಶೆಲ್ಫ್ ಮೇಲೆ ಪಾತ್ರೆ, ಡಬ್ಬಗಳ ನಡುವೆ ಬಚ್ಚಿಟ್ಟುಕೊಂಡಿದೆ.
ನೋಡಲು ಸಣ್ಣದಾಗಿರುವ ಚಿರತೆ ಕಂಡು ಮನೆಯವರು ಆತಂಕಗೊಂಡು, ಹೊರಗೆ ಓಡಿ ಬಂದು ಬಾಗಿಲು ಬಂದ್ ಮಾಡಿದ್ದಾರೆ.
ಚಿರತೆ ನೋಡಲು ಜನ ಬಂದು ಮನೆ ಮುಂದೆ ಜಮಾಯಿಸಿದ್ದಾರೆ. ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ.
ಗ್ರಾಮಕ್ಕೆ ಭೇಟಿ ನೀಡಿರುವ ಅರಣ್ಯ ಇಲಾಖೆ ಸಿಬ್ಬಂದಿ ಮನೆಯೊಳಗೆ ಚಿರತೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದಾರೆ.
ಬೆಳ್ಳಂ ಬೆಳಗ್ಗೆ ಮನೆಗೆ ಬಂದು ಅವಿತಿರುವ ಅಪರೂಪದ ಅತಿಥಿ ಕಂಡು ಇಡೀ ಮುದ್ದಾಪುರ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ತುರುವನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ