ಜಾನಪದ ಕಲೆ ರಕ್ಷಣೆಗೆ ಪ್ರತಿಯೊಬ್ಬರೂ ಶ್ರಮಿಸಲಿ: ಮಂಜುಳಾ
ಗಡಿ ಭಾಗದ ಸಮಸ್ಯೆಗಳು ಇಂದಿಗೂ ಜೀವಂತವಾಗಿವೆ.
Team Udayavani, Jun 13, 2022, 6:01 PM IST
ಹಿರಿಯೂರು: ಗ್ರಾಮೀಣ ಸೊಗಡಿನ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಲು ಎಲ್ಲರೂ ಶ್ರಮಿಸಬೇಕು ಎಂದು ಮಸ್ಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ವೀರೇಶ್ ಕರೆ ನೀಡಿದರು.
ತಾಲೂಕಿನ ಮಸ್ಕಲ್ ಗ್ರಾಮದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿ ಕಾರ ಬೆಂಗಳೂರು ಹಾಗೂ ಬಹುಮುಖೀ ಕಲಾ ಕೇಂದ್ರ ಚಿತ್ರದುರ್ಗ ಇವುಗಳ ಸಂಯುಕ್ತಾಶ್ರಯದಲ್ಲಿ 75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗೆ ಆಯೋಜಿಸಿದ್ದ ಗೀತ ಗಾಯನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬೀಸುವಾಗ, ಭತ್ತ ಕುಟ್ಟುವಾಗ, ನಾಟಿ ಮಾಡುವಾಗ ಹಾಡುವ ಹಾಡುಗಳು, ಉಯ್ನಾಲೆ ಪದ, ಕೋಲಾಟ, ತಮಟೆ ವಾದ್ಯ, ಗೊರವರ ಕುಣಿತ, ವೀರಗಾಸೆ, ದೊಡ್ಡಾಟ, ಸಣ್ಣಾಟ, ಬೀಸುವ ಕಲ್ಲಿನ ಪದ, ಸೋಬಾನೆ, ದೇವರನಾಮ ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಜೀವಂತವಾಗಿವೆ. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಅವುಗಳ ಅನಾವರಣ ಸಾಧ್ಯ. ಆದ್ದರಿಂದ ಸರ್ಕಾರಗಳು ಇನ್ನೂ ಹೆಚ್ಚು ಪ್ರೋತ್ಸಾಹ ನೀಡುವುದರ ಮೂಲಕ ಕಲೆ ಮತ್ತು
ಕಲಾವಿದರನ್ನು ಗೌರವಿಸಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ. ನಾಗರಾಜ್ ಮಾತನಾಡಿ, ಕಲೆಗೆ ತಕ್ಕ ಪ್ರೋತ್ಸಾಹ ನೀಡಿದರೆ ಕಲಾವಿದರ ಬದುಕು ಹಸನಾಗುತ್ತದೆ. ಕಲೆಗೋಸ್ಕರ ಜೀವಮಾನವಿಡೀ ದುಡಿಯುವ ಕಲಾವಿದರನ್ನು ಸರ್ಕಾರ, ಸಂಘ-ಸಂಸ್ಥೆಗಳು ಪೋಷಿಸಬೇಕೆಂದು ತಿಳಿಸಿದರು.
ನ್ಯಾಯವಾದಿ ಕೆ. ರಾಜಪ್ಪ ಮಾತನಾಡಿ, ಗಡಿ ಭಾಗದ ಸಮಸ್ಯೆಗಳು ಇಂದಿಗೂ ಜೀವಂತವಾಗಿವೆ. ನಾಡಿನ ಪ್ರಜ್ಞಾವಂತರು ಬರಹಗಾರರು, ರಾಜಕಾರಣಿಗಳು
ಸೌಹಾರ್ದತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ವಿ.ಎಲ್. ಗೌಡ, ಆರ್. ಕಲಾವತಿ, ಸ್ವಾಮಿ ವಿವೇಕಾಕಾನಂದ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಎಸ್.ಜಿ. ರಂಗಸ್ವಾಮಿ ಸಕ್ಕರ, ಬಹುಮುಖೀ ಕಲಾ ಕೇಂದ್ರದ ಕಾರ್ಯದರ್ಶಿ ಟಿ. ಮಧು, ಯುವ ಮುಖಂಡರಾದ ವೀರೇಶ್, ಪಾತಲಿಂಗಪ್ಪ, ಕಲಾವಿದರಾದ ಸರಸ್ವತಿ, ಚಂದ್ರಪ್ಪ ಆಯಿತೋಳ್, ಗೋವಿಂದಪ್ಪ, ಶ್ರೀನಿವಾಸಮೂರ್ತಿ ಇನ್ಫೆಂಟ್ ವಿನಯ್ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
MUST WATCH
ಹೊಸ ಸೇರ್ಪಡೆ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ