ಕೃಷಿ ಉತ್ಪನ್ನಕ್ಕೆ ಲಾಭದಾಯಕ ಬೆಲೆ ದೊರೆಯಲಿ; ಕಿಸಾನ್‌ ಸಂಘ

ಇಡೀ ಮನುಕುಲಕ್ಕೆ ಆಹಾರ ಉತ್ಪಾದನೆ ಮಾಡುವ ರೈತನ ಬದುಕು ಸುಧಾರಣೆ ಆಗಿಲ್ಲ.

Team Udayavani, Jan 12, 2022, 6:21 PM IST

ಕೃಷಿ ಉತ್ಪನ್ನಕ್ಕೆ ಲಾಭದಾಯಕ ಬೆಲೆ ದೊರೆಯಲಿ; ಕಿಸಾನ್‌ ಸಂಘ

ಚಿತ್ರದುರ್ಗ: ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡುವಂತೆ ಒತ್ತಾಯಿಸಿ ಭಾರತೀಯ ಕಿಸಾನ್‌ ಸಂಘದಿಂದ ಮಂಗಳವಾರ ತಾಲೂಕು ಆಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಕಳೆದಿವೆ. ಈವರೆಗೆ ಭಾರತ ಅನೇಕ ಸಾಧನೆ ಮಾಡಿದೆ. ಮಂಗಳ ಗ್ರಹಕ್ಕೂ ಕಾಲಿಟ್ಟು ಬಂದಿದೆ. ಆದರೆ ಎಲ್ಲರ ಬದುಕಿಗೆ ಅತ್ಯಂತ ಅಗತ್ಯವಾಗಿ ಬೇಕಾಗಿರುವ ಆಹಾರ ಧಾನ್ಯಗಳನ್ನು ಉತ್ಪಾಸುವ ತಂತ್ರಜ್ಞಾನ ಕಂಡು ಹಿಡಿಯುವುದು ಸಾಧ್ಯವಾಗಿಲ್ಲ.

ಇಡೀ ಮನುಕುಲಕ್ಕೆ ಆಹಾರ ಉತ್ಪಾದನೆ ಮಾಡುವ ರೈತನ ಬದುಕು ಸುಧಾರಣೆ ಆಗಿಲ್ಲ. ಈ ಕ್ಷೇತ್ರದಲ್ಲಿ ಆಗಿರುವ ಹಿನ್ನಡೆಯನ್ನು ಸರಿಪಡಿಸುವುದು ಇಂದಿನ ಆದ್ಯತೆಯಾಗಬೇಕಿದೆ. ಸಾಕಷ್ಟು ಜನ ಕೃಷಿ ಲಾಭದಾಯಕವಲ್ಲ ಎಂದು ಬೇಸಾಯದಿಂದ ವಿಮುಖರಾಗುತ್ತಿದ್ದಾರೆ. ಕೃಷಿ ಬಿಟ್ಟು ನಗರಗಳ ಕಡೆಗೆ ವಲಸೆ ಹೋಗುತ್ತಿದ್ದಾರೆ. ರೈತ ಬೆವರು ಸುರಿಸಿ ಬೆಳೆದ ಬೆಳೆಗೆ ಸರಿಯಾದ ಬೆಲೆ ಇಲ್ಲದ ಸ್ಥಿತಿ ಇದೆ. ಹಾಕಿದ ಬಂಡವಾಳವೂ ಕೈಗೆ ಸಿಗದ ಸಂಕಷ್ಟದ ಪರಿಸ್ಥಿತಿಯಲ್ಲಿ
ರೈತ ಇದ್ದಾನೆ. ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಸಿಗದ ಕಾರಣ ಕೃಷಿಯನ್ನು ಬಿಡಬೇಕಾಗಿದೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಆಹಾರ ಧಾನ್ಯಗಳನ್ನು ಕೃಷಿ ಹೊರತುಪಡಿಸಿ ಬೇರೆ ಯಾವ ಮೂಲಗಳಿಂದಲೂ ಉತ್ಪಾದನೆ ಮಾಡಲು ಸಾಧ್ಯವಿಲ್ಲ. ಇತರೆ ಎಲ್ಲಾ ವಸ್ತುಗಳಿಗೂ ಉತ್ಪಾದನೆ ಮಾಡಿದವರೇ ನಿ ರ್ದಿಷ್ಟ ದರ ನಿಗದಿ ಮಾಡುತ್ತಾರೆ. ಆದರೆ ಕೃಷಿ ಉತ್ಪನ್ನಗಳನ್ನು ಮಾತ್ರ ಬೀದಿಯಲ್ಲಿಟ್ಟು ಹರಾಜು ಹಾಕುವ ಸ್ಥಿತಿ ಶೋಚನೀಯವಾಗಿದೆ. ರೈತ ಬೆಳೆದ ಬೆಳೆಗೆ ಬೆಲೆಯನ್ನು ರೈತ ನಿಗದಿ ಮಾಡದೇ ಮಧ್ಯವರ್ತಿಗಳು ನಿಗಮಾಡುವುದರಿಂದ ರೈತ ಬಡವನಾಗುತ್ತಿದ್ದಾನೆ.

ಇದರಿಂದ ಕೃಷಿ ಕ್ಷೇತ್ರ ಸೊರಗುತ್ತಿದೆ. ಕೃಷಿ ನಾಶವಾದರೆ ಆಹಾರದ ಅಭಾವ ಉಂಟಾಗುತ್ತದೆ. ಆದ್ದರಿಂದ ರೈತರ ಉತ್ಪಾದನೆ ವೆಚ್ಚದ ಮೇಲೆ ಲಾಭದಾಯಕ ಬೆಲೆ ದೊರೆಯುವಂತಾಗಬೇಕು ಎಂದು ಒತ್ತಾಯಿಸಲಾಗಿದೆ. ಭಾರತೀಯ ಕಿಸಾನ್‌ ಸಂಘದ ತಾಲೂಕು ಅಧ್ಯಕ್ಷ ಜ್ಞಾನೇಶ್‌, ಕಾರ್ಯದರ್ಶಿ ವೆಂಕಟೇಶ್‌, ವೇಮದೇವ ರೆಡ್ಡಿ, ತಾಯಣ್ಣ, ವೀರೇಶ್‌ ಮತ್ತಿತರರು ಇದ್ದರು.

ಪ್ರಮುಖ ಬೇಡಿಕೆಗಳು;
ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸಿ ಖರೀದಿ ಗ್ಯಾರಂಟಿ ನೀಡಿ ಘೋಷಿತ ಬೆಲೆಗಿಂತ ಕಡಿಮೆಗೆ ಖರೀದಿಯಾಗದಂತೆ ನೋಡಿಕೊಳ್ಳಬೇಕು. ಪ್ರತಿ ವರ್ಷ ಬೆಲೆ ಘೋಷಣೆಯು ಹಣದುಬ್ಬರದ ದರಕ್ಕೆ ಅನುಗುಣವಾಗಿರಬೇಕು. ಮಂಡಿ ಒಳಗೆ ಅಥವಾ ಹೊರಗೆ ಘೋಷಿತ ಬೆಲೆಗಿಂತ ಕಡಿಮೆ ದರದಲ್ಲಿ ಖರೀದಿ ಮಾಡುವುದನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.