ನೇಕಾರರಿಗೆ ಸರ್ಕಾರ ನೆರವು ನೀಡಲಿ

ನೇಕಾರ ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಸಿಎಂಗೆ ಪತ್ರ

Team Udayavani, Jan 13, 2021, 5:34 PM IST

Let the government help the weavers

ಚಳ್ಳಕೆರೆ: ಜಿಲ್ಲೆಯಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಕೈಮಗ್ಗ ನೇಕಾರರು ಉಣ್ಣೆ ಕೈಮಗ್ಗ ನೇಕಾರಿಯಿಂದಲೇ ತಮ್ಮ ಬದುಕನ್ನು ಕಂಡುಕೊಂಡಿದ್ದಾರೆ. ಕೋವಿಡ್‌ -19 ಹಿನ್ನೆಲೆಯಲ್ಲಿ ಹೆಚ್ಚಿನ ವಹಿವಾಟು ಇಲ್ಲದೆ ಎಲ್ಲಾ ಕುಟುಂಬಗಳು ಬಡತನದಿಂದ ನರಳುತ್ತಿದ್ದು, ನೇಕಾರ ಕುಟುಂಬಗಳಿಗೆ ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಜಿಲ್ಲೆಯ ಸಮಸ್ತ ನೇಕಾರರ  ಪರವಾಗಿ ಪತ್ರಬರೆಯುವುದಾಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಹೇಳಿದರು.

ಮಂಗಳವಾರ ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಳಿ ಇರುವ ರಾಜ್ಯ ಉಣ್ಣೆ ಕೈಮಗ್ಗ ನೇಕಾರರ ಸಹಕಾರಿ ಸಂಘದ ಕಾರ್ಯಾಲಯದ ಕಂಬಳಿ ಮಾರುಕಟ್ಟೆ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಉಣ್ಣೆ ಕೈಮಗ್ಗ ನೇಕಾರರ ಅಹವಾಲು, ಪರಿಹಾರ ಮತ್ತು ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯೂ ಸೇರಿದಂತೆ ರಾಜ್ಯದ ಉಣ್ಣೆ ಕೈಮಗ್ಗ ನಿಗಮ ಸೂಕ್ತ ಸೌಲಭ್ಯಗಳಿಲ್ಲದೆ ಸೊರಗುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಣ್ಣೆ ಕೈಮಗ್ಗ ನೇಕಾರಿಕೆಗೆ ಹೆಚ್ಚು ಉತ್ತೇಜನ ನೀಡುವ ಭರವಸೆ ನೀಡಿ ಕಾರ್ಯೋನ್ಮುಖರಾಗಿದ್ದರು. ಅಷ್ಟರಲ್ಲಿ ಸರ್ಕಾರ ಇಲ್ಲದ ಪ್ರಯುಕ್ತ ಹೆಚ್ಚು ಸೌಲಭ್ಯ ಪಡೆಯಲು ಸಾಧ್ಯವಾಗಲಿಲ್ಲ. ರಾಜ್ಯದಲ್ಲಿ ಮೊಳಕಾಲ್ಮೂರು ರೇಷ್ಮೆ ಸೀರೆ ವಿಶ್ವದ ಗಮನ ಸೆಳೆದಿದೆ. ಅದನ್ನು ಸಹ ಮಗ್ಗದಲ್ಲೇ ಹೆಣೆಯಲಾಗುತ್ತದೆ. ಅದೇ ರೀತಿ ಉಣ್ಣೆ ಕಂಬಳಿಯನ್ನು ಸಹ ಇಲ್ಲಿನ ಸಾವಿರಾರು ನೇಕಾರರು ಹೆಣೆದು ಮಾರುಕಟ್ಟೆಗೆ ತರುತ್ತಾರೆ. ಆದರೆ ಮಾರುಕಟ್ಟೆಯಲ್ಲಿ ಅದನ್ನು ಖರೀದಿಸುವವರ ಸಂಖ್ಯೆ ಅತ್ಯಂತ ಕಡಿಮೆ. ಹಾಗಾಗಿ ಕೈಮಗ್ಗ ನೇಕಾರರ ಬದುಕು ಕಷ್ಟದ ಸ್ಥಿತಿಯಲ್ಲಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಹೆಚ್ಚಿನ ಆರ್ಥಿಕ ನೆರವು ನೀಡುವ ಮೂಲಕ ಲಕ್ಷಾಂತರ ಕೈಮಗ್ಗ ನೇಕಾರರಿಗೆ ಸಹಾಯಕ್ಕೆ ಬರಬೇಕು ಎಂದರು.

ಇದನ್ನೂ ಓದಿ:ಮಂಡಲ ಪಂಚಾಯತ್‌ ವ್ಯವಸ್ಥೆ ಸಂಪೂರ್ಣ ಹಾಳು ಮಾಡಿದ್ದೇ ಕಾಂಗ್ರೆಸ್‌; ಕಾರಜೋಳ

ಪ್ರಾಸ್ತಾವಿಕವಾಗಿ ಮಾತನಾಡಿದ ಕೈಮಗ್ಗ ಮತ್ತು ಜವಳಿ ಇಲಾಖೆ ಜಿಲ್ಲಾ ಉಪನಿರ್ದೇಶಕ ನೆಗಳೂರ್‌ ಮಾತನಾಡಿ, ರಾಜ್ಯ ಸರ್ಕಾರ ನೇಕಾರ ಕುಟುಂಬಗಳಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ. ಕಳೆದ ವರ್ಷ ಉಣ್ಣೆ ಕೈಮಗ್ಗ ನೇಕಾರರ ಸಾಲವನ್ನು ಸರ್ಕಾರ ಮನ್ನಾ ಮಾಡಿತ್ತು. ನೇಕಾರಿಕೆಯಲ್ಲೂ ಸಹ ನೂತನ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳುವ ಹಿನ್ನೆಲೆಯಲ್ಲಿ ತರಬೇತಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ಕೈಮಗ್ಗ ಮತ್ತು ಜವಳಿ ನಿಗಮದ ವತಿಯಿಂದ ನೇಕಾರರಿಗೆ ಇನ್ನೂ ಹಲವಾರು ಸವಲತ್ತು ಕಲ್ಪಿಸಲು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು. ಹಿರಿಯ ಸಹಕಾರಿ ಧುರೀಣ ಆರ್‌. ಮಲ್ಲೇಶಪ್ಪ ಮಾತನಾಡಿ, ಕೈಮಗ್ಗ ನೇಕಾರರ ಹಲವಾರು ಸಮಸ್ಯೆಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಉಣ್ಣೆ ಖರೀದಿಸಿ ಕಂಬಳಿ ತಯಾರಿಸಿ ಮಾರುಕಟ್ಟೆಗೆ ತಂದರೆ ಅದನ್ನು ಕೊಳ್ಳುವ ಸ್ಥಿತಿಯಲ್ಲಿ ಯಾರೂ ಇಲ್ಲ.

ನೇಕಾರರ ಸ್ಥಿತಿ ಅತ್ಯಂತ ಹೀನಾಯವಾಗಿದೆ. ರಾಜ್ಯ ಸರ್ಕಾರ ಕೈಮಗ್ಗ ನೇಕಾರಿಕೆ ಬಗ್ಗೆ ನಿರ್ಲಕ್ಷé ವಹಿಸಿದರೆ ಲಕ್ಷಾಂತರ ನೇಕಾರರ ಬಡಕುಟುಂಬಗಳು ಬೀದಿಪಾಲಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದರು. ಮೊಳಕಾಲ್ಮೂರು ತಾಲ್ಲೂಕು ಅಧ್ಯಕ್ಷ ರವೀಂದ್ರ, ಕೈಮಗ್ಗ ಮತ್ತು ಜವಳಿ ಇಲಾಖೆ ತಿಪ್ಪೇಸ್ವಾಮಿ, ಉಣ್ಣೆ ಕೈಮಗ್ಗ ನಿಗಮದ ಮಾಜಿ ಅಧ್ಯಕ್ಷ ಟಿ. ಮಲ್ಲಿಕಾರ್ಜುನ್‌, ಸಹಕಾರ್ಯದರ್ಶಿ ಗಂಗಾಧರ, ಕಂದಿಕೆರೆ ಸುರೇಶ್‌ಬಾಬು ಮುಂತಾದವರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.