ಒನಕೆ ಓಬವ್ವ ಸ್ಮಾರಕ ನಿರ್ಮಾಣವಾಗಲಿ


Team Udayavani, Nov 12, 2018, 4:02 PM IST

cta-1.jpg

ಚಿತ್ರದುರ್ಗ: ದುರ್ಗದ ಕಲ್ಲಿನ ಕೋಟೆಯಲ್ಲಿನ ಓಬವ್ವ ಕಿಂಡಿ ಅಜರಾಮರವಾಗಲು ವೀರವನಿತೆ ಒನಕೆ ಓಬವ್ವ ಕಾರಣ ಎಂದು ವೀರವನಿತೆ ಒನಕೆ ಓಬವ್ವ ಸಂರಕ್ಷಣಾ ಸಮಿತಿ ಸದಸ್ಯೆ ಹಾಗೂ ಕಾನೂನು ವಿದ್ಯಾರ್ಥಿನಿ ಎನ್‌.ಬಿ. ಭಾರ್ಗವಿ ದ್ರಾವಿಡ್‌ ಹೇಳಿದರು.

ಇಲ್ಲಿನ ಕಲ್ಲಿನ ಕೋಟೆಯಲ್ಲಿರುವ ವೀರವನಿತೆ ಒನಕೆ ಓಬವ್ವ ಸಮಾಧಿಯಬಳಿ ಭಾನುವಾರ ಹಮ್ಮಿಕೊಂಡಿದ್ದ ಓಬವ್ವ ಜಯಂತ್ಯುತ್ಸವ ಹಾಗೂ ಸಮಾಧಿ ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗದ ಚರಿತ್ರೆ, ಇತಿಹಾಸವನ್ನು ವಿಶ್ವವಿಖ್ಯಾತಗೊಳಿಸಿದ ಕೀರ್ತಿ ಓಬವ್ವಗೆ ಸಲ್ಲುತ್ತದೆ. ಸಮಾಧಿ ದುರಸ್ತಿ ಹಾಗೂ ನಾಮಫಲಕ ಅಳವಡಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದೇವೆ. ಆದರೂ ಆ ಕೆಲಸ ಆಗಿಲ್ಲ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಓಬವ್ವ ಸ್ಮಾರಕ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ಚಿತ್ರದುರ್ಗದಿಂದ ಸಾವಿರಾರು ಮಹಿಳೆಯರು ಒನಕೆ ಹಿಡಿದು “ವಿಧಾನಸೌಧ
ಚಲೋ’ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸರ್ಕಾರ ಅನೇಕ ಜಯಂತಿಗಳನ್ನು ಆಚರಿಸುತ್ತಿದೆ. ಆದರೆ ಒನಕೆ ಓಬವ್ವ ಜಯಂತಿ ಆಚರಿಸುತ್ತಿಲ್ಲ. ಜಿಲ್ಲಾ ಪೊಲೀಸ್‌
ಓಬವ್ವ ಪಡೆ ಹೆಸರಿನಲ್ಲಿ ಮಹಿಳೆಯರ ರಕ್ಷಣೆ ಮಾಡುತ್ತಿರುವುದು ಸಂತಸದ ವಿಷಯ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ಮಾಲತೇಶ್‌ ಅರಸ್‌ ಮಾತನಾಡಿ, ಸರ್ಕಾರ ವೀರವನಿತೆ ಒನಕೆ ಓಬವ್ವ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು. ಇದರಿಂದ ಅನೇಕ ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. 

ಅಲ್ಲದೆ ಸೂಕ್ತ ಸಂರಕ್ಷಣೆ ಮಾಡುವ ಕೆಲಸವೂ ಆಗಬೇಕು. ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಜಾತ್ಯತೀತವಾಗಿ
ಆಚರಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಮದಕರಿ ನಾಯಕ, ಒನಕೆ ಓಬವ್ವ ಸೇರಿದಂತೆ ಮತ್ತಿತರ ಸಾಧಕರ ಅಧ್ಯಯನ ಮತ್ತು ಸಂಶೋಧನೆ ಮಾಡಲು ಅಧ್ಯಯನ ಕೇಂದ್ರ ಆರಂಭವಾಗಬೇಕು. ಸರ್ಕಾರ ಚಿತ್ರದುರ್ಗದ ಕೋಟೆ ಅಭಿವೃದ್ಧಿಪಡಿಸುವ ಜತೆಗೆ ಸಮಾಧಿಯನ್ನು ಸ್ಮಾರಕವಾಗಿಸಿ ಎಲ್ಲರಿಗೂ ತಿಳಿಯುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮ ಆಯೋಜಕ ಎಚ್‌.ಡಿ. ನವೀನ್‌ ಮಾತನಾಡಿ, ಕೋಟೆ ಮೇಲ್ಭಾಗದಲ್ಲಿ ಓಬವ್ವ ಸ್ಮಾರಕ ನಿರ್ಮಿಸಿ ವಿವಿಧ
ಸಂಘಟನೆಗಳ ಆಶ್ರಯಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ. ಜಿಲ್ಲಾಧಿಕಾರಿ ಕಚೇರಿ ಸಮೀಪ ಇರುವ ಓಬವ್ವಳ ಪುತ್ಥಳಿ ಎದುರು ಸಮಾರಂಭ ಆಯೋಜಿಸೋಣ ಎಂದರು.

ಒನಕೆ ಓಬವ್ವಳ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸಿಹಿ ವಿತರಿಸಲಾಯಿತು. ನಂತರ ಅಭಿಮಾನಿಗಳು ರಾಜವೀರ
ಮದಕರಿ ನಾಯಕ ಹಾಗೂ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಬಳಿಯ ಒನಕೆ ಓಬವ್ವ ವೃತ್ತದಲ್ಲಿರುವ ಓಬವ್ವ ಪುತ್ಥಳಿಯನ್ನು ಸ್ವತ್ಛಗೊಳಿಸಿ ಮಾಲಾರ್ಪಣೆ ಮಾಡಲಾಯಿತು. ವೀರವನಿತೆ ಓಬವ್ವ ಸಮಿತಿ ಮುಖಂಡರಾದ ಭೂತೇಶ್‌, ಕೃಷ್ಣಮೂರ್ತಿ, ಛಲವಾದಿ ಮಹಾಸಭಾ ಸಮಿತಿ ಮುಖಂಡ ಅಣ್ಣಪ್ಪ ಸ್ವಾಮಿ, ಶ್ರೀನಿವಾಸಬಾಬು, ಧರ್ಮ ಜಾಗೃತಿ ಸಮಿತಿಯ ಪ್ರಸನ್ನ, ಹನುಮಂತರಾಯ, ನಿಷಾ, ನೀತು, ಕಾವ್ಯ, ಓಬವ್ವ ಯುವಕ ಸಂಘದ ಮುರಳೀಧರ,
ಶಿವಕುಮಾರ್‌ ಮತ್ತಿತರರು ಇದ್ದರು. 

ಶತ್ರುಗಳಿಂದ ಕೋಟೆ ರಕ್ಷಣೆ ಮಾಡಿದ ಓಬವ್ವಳ ಸಮಾಧಿ ಕೋಟೆಯಲ್ಲಿ ಎಲ್ಲಿದೆ ಎಂದು ಹುಡುಕಬೇಕಾದ ದುಸ್ಥಿತಿ ಬಂದಿದೆ.
ವೀರ ಮರಣ ಹೊಂದಿದ ಸ್ಥಳದಲ್ಲಿ ಒನಕೆ ಓಬವ್ವ ಸಮಾಧಿ ಎಂದು ನಾಮಫಲಕ ಹಾಕಲಿ. ಅಧಿಕಾರಿಗಳು ಈ ಕೆಲಸ ಮಾಡದಿದ್ದರೆ ಅಭಿಮಾನಿಗಳಾದ ನಾವೇ ಅದನ್ನು ಮಾಡುತ್ತೇವೆ.
 ಗೋವರ್ಧನ್‌ ಪಿಲಾಲಿ, ನ್ಯಾಯವಾದಿ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.