ಗಂಡು-ಹೆಣ್ಣು ಸಮಾನರೆಂಬ ಭಾವನೆ ಮೂಡಲಿ: ಶೀಲಾ


Team Udayavani, Mar 28, 2019, 3:08 PM IST

cta-1
ಚಿತ್ರದುರ್ಗ: ಗಂಡು ಹೇಳಿದಂತೆ ಹೆಣ್ಣು ಕೇಳಬೇಕೆಂದು ಯಾವ ಕಾನೂನಿನಲ್ಲೂ ಇಲ್ಲ. ಗಂಡು-ಹೆಣ್ಣು ಇಬ್ಬರೂ ಸರಿಸಮಾನರು ಎಂದು ಹಿರಿಯ ನ್ಯಾಯವಾದಿ ಡಿ.ಕೆ. ಶೀಲಾ ಹೇಳಿದರು. ನಗರದ ಸರ್ಕಾರಿ ಕಾಲೇಜಿನಲ್ಲಿ ಆಯೋಜಿಸಿದ್ದ ಮಹಿಳಾ ಸಬಲೀಕರಣ ಕೋಶ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ವೃತ್ತಿ ದೊಡ್ಡದು ಮತ್ತು ಚಿಕ್ಕದಲ್ಲ. ಪ್ರತಿಯೊಬ್ಬರೂ ತಮ್ಮದೇ ಆದ ಪ್ರಾಮುಖ್ಯತೆ ಹೊಂದಿರುತ್ತಾರೆ. ಮಹಿಳಾ ಸಬಲೀಕರಣ ಇದು ಒಂದು ಕುಟುಂಬಕ್ಕೆ ಸಂಬಂ ಧಿಸಿದ್ದಲ್ಲ, ಇಡೀ ದೇಶಕ್ಕೆ ಸಂಬಂಧಿಸಿದ್ದು. ಮಹಿಳೆ ಮತ್ತು ಪುರುಷರು
ಸಮಾನವಾಗಿ ಕೆಲಸ ಮಾಡಿದರೆ ಕುಟುಂಬ ಅಥವಾ ದೇಶ ಅಭಿವೃದ್ಧಿ ಆಗಲು ಸಾಧ್ಯ.
ಸ್ವಾತಂತ್ರ್ಯಾ ನಂತರ ಮಹಿಳೆಯರಿಗೆ ಕಾನೂನುಗಳು ಜಾರಿಗೆ ಬಂದರೂ ಹೆಚ್ಚು ಪರಿಣಾಮ ಬೀರಲಿಲ್ಲ. ಹೆಣ್ಣು ಮಗು 18 ವರ್ಷದ ಒಳಗೆ ಇದ್ದು ಬಾಲ್ಯ ಜೀವನ ನೀಡದಿದ್ದರೆ ಅವರಿಗೆ ಮಹಿಳಾ ಕಲ್ಯಾಣ ಇಲಾಖೆಯಿಂದ ಸರ್ಕಾರದ ಹಣದಲ್ಲಿ ಬೇಕಾದ ಸೌಲಭ್ಯ ನೀಡಿ ಬೆಳೆಸಬೇಕು ಎಂದರು.
ದೇಶದಲ್ಲಿ ಕಾನೂನಿನ ಪ್ರಕಾರ ಮಹಿಳಾ ಮತ್ತು ಪುರುಷರಿಗೆ ಸಮಾನ ಅವಕಾಶವಿದೆಯೇ ಎಂದು ಪ್ರಶ್ನಿಸಿದ ಅವರು, ಮೊದಲು ತಮ್ಮ ಕುಟುಂಬದಲ್ಲಿ ಮಗಳು ಮತ್ತು ಸೊಸೆಯನ್ನು ಒಂದೇ ರೀತಿಯಲ್ಲಿ ಕಾಣಬೇಕು. ಯಾರೇ ತಪ್ಪು ಮಾಡಿದರೂ ಒಂದೇ ರೀತಿಯಲ್ಲಿ ನೋಡಬೇಕು.
ಕೆಲವೊಂದು ಹಳೆಯ ಪದ್ಧತಿಗಳನ್ನು ಮುಂದುವರೆಸಿಕೊಂಡು ಬರುತ್ತಿರುವುದು ನೋವಿನ ಸಂಗತಿ. ಕುಟುಂಬದಲ್ಲಿ ಗಂಡಸರು
ತಪ್ಪು ಮಾಡಿದರೆ ಮಹಿಳೆಗೆ ಬೈಯುತ್ತಾರೆ. ಅದನ್ನು ಬಿಟ್ಟು ನೇರವಾಗಿ ಗಂಡುಮಕ್ಕಳಿಗೇ ಬೈಯಬೇಕು. ತಪ್ಪು ಮಾಡಿದ ಪುರುಷನನ್ನು ಸರಿ ದಾರಿಗೆ ತರುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಮಹಿಳಾ ಕೋಶ ಸಂಚಾಲಕಿ ಎಸ್‌.ಎಂ. ಭ್ರಮಾರಂಬ ಮಾತನಾಡಿ, ವಿದ್ಯಾರ್ಥಿಗಳನ್ನು ಪಠ್ಯ ಹೊರತುಪಡಿಸಿ ಬೆಳೆಸಬೇಕು. ಕೇವಲ ಪಠ್ಯಕ್ಕೆ ಒತ್ತು ನೀಡದೆ ಪಠ್ಯೇತರ ಚಟುವಟಿಕೆಯಿಂದ ವಿಶಾಲ ಮನೋಭಾವನೆಯಿಂದ ಯೋಚನೆ ಮಾಡಲು ಸಹಕಾರಿ ಆಗಲಿದೆ ಎಂದರು.
ಮಹಿಳೆ ಮುನ್ನಡೆದರೆ ಕುಟುಂಬ ಹಾಗೂ ರಾಷ್ಟ್ರ ಮುನ್ನಡೆಯುತ್ತದೆ. ಮಹಿಳೆ ಇಲ್ಲದ ಸಮಾಜವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಮಹಿಳೆ ಎಲ್ಲ ರಂಗಗಳಲ್ಲಿ ಪ್ರವೇಶ ಮಾಡಿ ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು. ಹಿರಿಯ ಉಪನ್ಯಾಸಕ ರಾಮ ರಾವ್‌, ಸಂಚಾಲಕ ಜಿ.ಬಿ. ಸುರೇಶ್‌, ಪ್ರಾಧ್ಯಾಪಕಿ ಮಂಜುಳ ಮತ್ತಿತರರು ಇದ್ದರು.
ವಿದ್ಯಾರ್ಥಿಗಳು ತಮ್ಮ ಜೀವನ ರೂಪಿಸಿಕೊಳ್ಳವುದಕ್ಕಿಂತ ಮೊದಲು ಪ್ರೀತಿ ಪ್ರೇಮ ಎಂದು ಜೀವನ ಹಾಳು ಮಾಡಿಕೊಳ್ಳಬೇಡಿ. ಸಾಧನೆ ಮಾಡಿದ ನಂತರ ಪ್ರೀತಿ, ಪ್ರೇಮ, ಮದುವೆ ಬಗ್ಗೆ ಚಿಂತನೆ ಮಾಡಿ.
 ಡಿ.ಕೆ. ಶೀಲಾ,ಹಿರಿಯ ನ್ಯಾಯವಾದಿ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.