ಭರವಸೆಯಂತೆ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಲಿ


Team Udayavani, Aug 4, 2018, 5:12 PM IST

cta-1.jpg

ಚಿತ್ರದುರ್ಗ: ಯಾವ ರೈತರಿಗೆ ಸಾಲ ಮನ್ನಾ ಯೋಜನೆ ದೊರೆಯುತ್ತದೆ ಎನ್ನುವ ವಿಚಾರದಲ್ಲಿ ರಾಜ್ಯ ಸರ್ಕಾರದ ಕಾರ್ಯ ವೈಖರಿ ಪ್ರಶ್ನಿಸುವಂತಾಗಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ತಾಲೂಕಿನ ಅನ್ನೇಹಾಳ್‌ ಗ್ರಾಮದ ಹಳೇ ವಿದ್ಯಾರ್ಥಿಗಳ ಸಂಘದಿಂದ ಶಾಸಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಹಾಗೂ ಕೃಷಿ, ತೋಟಗಾರಿಕೆ, ಬೆಸ್ಕಾಂ ಇಲಾಖೆ ಮುಖ್ಯಸ್ಥರೊಂದಿಗೆ ನಡೆದ ಸಂವಾದದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ರೈತರ ಸಾಲ ಮನ್ನಾ ಕುರಿತ ಸ್ಪಷ್ಟ ಮೂಡಿಸಬೇಕು. ಚುನಾವಣೆ ಪೂರ್ವದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದಂತೆ ಎಲ್ಲ ರೈತರ ಸಾಲ ಮನ್ನಾ ಮಾಡಲಿ ಎಂದು ಒತ್ತಾಯಿಸಿದರು.
 
ನನ್ನ ರಾಜಕೀಯ ಜೀವನದಲ್ಲಿ ಯಾರಿಗೂ ತೊಂದರೆ ನೀಡಿಲ್ಲ. ಸಾಧ್ಯವಾದಷ್ಟು ಮಟ್ಟಿಗೆ ಒಳ್ಳೆಯದನ್ನೇ ಮಾಡಿದ್ದೇನೆ. ಯಾರ ವಿರುದ್ಧವೂ ಪೊಲೀಸ್‌ಗೆ ದೂರು ನೀಡಿ ತೊಂದರೆ ನೀಡುವಂತೆ ಹೇಳಿಲ್ಲ. ಮುಂದೆಯೂ ಯಾರಿಗೂ
ತೊಂದರೆ ನೀಡುವುದಿಲ್ಲ ಎಂದರು. 

ಅನ್ನೆಹಾಳ್‌ ಭಾಗದಲ್ಲಿ ವಿದ್ಯುತ್‌ ತೊಂದರೆಯಾಗಿದ್ದು ಸಬ್‌ ಸ್ಟೇಷನ್‌ ನಿರ್ಮಾಣ ಮಾಡಲು ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ. ಈಗಾಗಲೇ ಕಾಮಗಾರಿಗೆ ಟೆಂಡರ್‌ ಕರೆಯಲಾಗಿದೆ. ಮುಂದಿನ ಮಾರ್ಚಿ ಒಳಗಾಗಿ ಕಾಮಗಾರಿ ಮುಗಿಯುವ ನೀರೀಕ್ಷೆ ಇದೆ ಎಂದು ತಿಳಿಸಿದರು.

ಈ ಭಾಗ ತಾಲೂಕಿನ ಗಡಿ ಪ್ರದೇಶವಾಗಿದ್ದು, ಶಾಲಾ ಕೊಠಡಿಗಳ ಕೊರೆತೆ ಇದ್ದು ಸಮಸ್ಯೆ ಇದ್ದು ಶಾಸಕರ ಅನುದಾನದಲ್ಲಿ ಕೊಠಡಿ ನಿರ್ಮಿಸಲಾಗುವುದು. ವಾಣಿ ವಿಲಾಸ ಸಾಗರಕ್ಕೆ ಶೀಘ್ರ ನೀರು ತರುವ ಕಾರ್ಯ ಆಗಲಿದೆ.
ಮುಂದಿನ ದಿನಗಳಲ್ಲಿ ಚಿತ್ರದುರ್ಗ ತಾಲೂಕಿಗೆ ನೀರು ಬರಲಿದೆ ಎಂದು ಹೇಳಿದರು.

ವಿಧಾನಸಭೆ ಇತಿಹಾಸದಲ್ಲೇ 104 ಶಾಸಕ ಬಲಹೊಂದಿ ವಿರೋಧ ಪಕ್ಷವಾಗಿದೆ. ವಿರೋಧ ಪಕ್ಷ ಬಲಿಷ್ಠವಾಗಿದ್ದು, ಸರ್ಕಾರ ಅಷ್ಟು ಸುಲಭವಾಗಿ ಜನತೆಯನ್ನು ಮೋಸ ಮಾಡಲು ಬಿಡುವುದಿಲ್ಲ. ಜನತೆಯ ಪರವಾಗಿ ಬಿಜೆಪಿ
ಹೋರಾಟ ಮಾಡುತ್ತದೆ ಎಂದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮನೆ ಮತ್ತು ನಿವೇಶನ ಇಲ್ಲದವರ ಪಟ್ಟಿ ತಯಾರು ಮಾಡುವಂತೆ ಸೂಚನೆ ನೀಡಲಾಗಿದೆ. ಪಿಡಿಒಗಳು ಪೂರ್ಣ ಪ್ರಮಾಣದ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ರವಾನೆ ಮಾಡಲಿದ್ದು ಕೇಂದ್ರ ಸರ್ಕಾರ ಪ್ರತಿಯೊಬ್ಬರಿಗೂ ನಿವೇಶನ, ಮನೆ ನೀಡಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ 24 ಲೋಕಸಭಾ ಸೀಟು ಗೆಲುವ ಗುರಿ ಇಟ್ಟುಕೊಳ್ಳಲಾಗಿದೆ. ಮತದಾರರು ಸಹಕಾರ ನೀಡಿ ಮೋದಿ ಮತ್ತೇ ದೇಶದ ಪ್ರಧಾನಮಂತ್ರಿ ಆಗಬೇಕು. ಲೋಕಸಭಾ ಚುನಾವಣೆ ವೇಳೆಗೆ ಸರ್ಕಾರ ಬಿದ್ದರೂ ಆಶ್ಚರ್ಯ ಇಲ್ಲ. ಆಕಸ್ಮಾತ್‌ ಸರ್ಕಾರ ಬೀಳದಿದ್ದರೆ ಎಂ.ಪಿ ಚುನಾವಣೆಯ ನಂತರ ಸರ್ಕಾರ ಬೀಳಲಿದ್ದು ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಯಾಗಿ ರೈತರ
ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಹೇಳಿದರು.

ಬೆಸ್ಕಾಂ ಎಇಇ ರಮೇಶ್‌, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ದೇವರಾಜ್‌, ಕೃಷಿ ಅಧಿಕಾರಿ ತಿಪ್ಪೇಸ್ವಾಮಿ, ಅನ್ನೇಹಾಳ್‌ ಗ್ರಾಪಂ ಅಧ್ಯಕ್ಷ ವರದ, ಸದಸ್ಯರಾದ ಪ್ರಕಾಶ, ಶಿಮಮೂರ್ತಿ, ಮಂಜಣ್ಣ, ಮಹಾಲಿಂಗಪ್ಪ ಹಳೆ
ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸಿದ್ದಪ್ಪ, ಮಾಜಿ ಸದಸ್ಯ ಕೆಂಗಣ್ಣ ಇತರರು ಇದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.