ಸರ್ಕಾರದ ಸೌಲಭ್ಯ ಕೇಳಿ ಪಡೀರಿ: ಅಲ್ಲಾಭಕ್ಷ್
Team Udayavani, Jan 30, 2019, 9:44 AM IST
ಚಿತ್ರದುರ್ಗ: ಅವಕಾಶ ವಂಚಿತರು ಸರ್ಕಾರದ ಸೌಲಭ್ಯಗಳನ್ನು ಕೇಳಿ ಪಡೆಯಬೇಕು ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯ್ಯದ್ ಅಲ್ಲಾಭಕ್ಷ್ ಹೇಳಿದರು.
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಜನಸಂಕರ್ಪ ಸಭೆಯಲ್ಲಿ ಸಂಧ್ಯಾಸುರಕ್ಷಾ ವೇತನಕ್ಕಾಗಿ ಮಹಿಳೆಯರಿಂದ ಅರ್ಜಿ ಸ್ವೀಕರಿಸಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರಿಗಾಗಿ ಜಾರಿಗೆ ತಂದಿರುವ ಹಲವಾರು ಯೋಜನೆಗಳನ್ನು ದಲಿತರು, ಅಲ್ಪಸಂಖ್ಯಾತರು, ಶೋಷಿತರು, ಹಿಂದುಳಿದವರಿಗೆ ತಲುಪಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಸೇರಿದಂತೆ ಸರ್ಕಾರದ ಹತ್ತು ಹಲವಾರು ಯೋಜನೆಗಳಿಗಾಗಿ ಅರ್ಜಿ ಸಲ್ಲಿಸುವವರನ್ನು ಸಂಬಂಧಪಟ್ಟ ಇಲಾಖೆಗೆ ಕರೆದುಕೊಂಡು ಹೋಗಿ ಸರ್ಕಾರದ ಸವಲತ್ತುಗಳನ್ನು ದೊರಕಿಸುವ ಕೆಲಸ ಮಾಡಿಕೊಂಡು ಬರಲಾಗುತ್ತಿದೆ. ಹಿಂದಿನ ಸರ್ಕಾರದ ಎಲ್ಲಾ ಯೋಜನೆಗಳು ಈಗಿನ ಸಮ್ಮಿಶ್ರ ಸರ್ಕಾರದಲ್ಲೂ ಮುಂದುವರೆಯುತ್ತಿವೆ. ಹಾಗಾಗಿ ಯಾರೂ ಆತಂಕಕ್ಕೆ ಒಳಗಾಗುವುದು ಬೇಡ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಾಂದ್ಪೀರ್, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಹಸನ್ ತಾಹೀರ್, ನಾಸಿರುದ್ದಿನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ