ಲೋಕ ಚುನಾವಣೆ ಮತ ಎಣಿಕೆಗೆ ಸಿದ್ಧತೆ

•ಚುನಾವಣಾ ಆಯೋಗದ ಸೂಚನೆಯನ್ನು ಅಭ್ಯರ್ಥಿಗಳು-ಏಜೆಂಟರು ಪಾಲಿಸಿ: ಜಿಲ್ಲಾಧಿಕಾರಿ

Team Udayavani, May 21, 2019, 8:34 AM IST

cd-tdy-1..

ಚಿತ್ರದುರ್ಗ: ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 23 ರಂದು ಬೆಳಿಗ್ಗೆ 8 ಗಂಟೆಯಿಂದ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಹೊಸ ಕಟ್ಟಡದಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿನೋತ್‌ ಪ್ರಿಯಾ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭೆ ಚುನಾವಣೆಯ ಮತ ಎಣಿಕೆ ಮಾರ್ಗಸೂಚಿಗಳ ಕುರಿತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಸೋಮವಾರ ಏರ್ಪಡಿಸಲಾಗಿದ್ದ ಮಾಹಿತಿ ನೀಡಿಕೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಅನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ನಡೆಸಲು ಚುನಾವಣಾ ಆಯೋಗ ಸೂಚಿಸಿರುವ ನಿಯಮಗಳನ್ನು ಅಭ್ಯರ್ಥಿಗಳು ಹಾಗೂ ಏಜೆಂಟರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.

ಮತ ಎಣಿಕೆಯ ದಿನದಂದು ಅಭ್ಯರ್ಥಿಗಳು ಅಥವಾ ಅಭ್ಯರ್ಥಿಗಳ ಚುನಾವಣಾ ಏಜೆಂಟರು ಅನುಸರಿಸಬೇಕಾದ ನಿಯಮಗಳ ಬಗ್ಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಅದರ ಅನ್ವಯ ಅಭ್ಯರ್ಥಿಗಳು ಅಥವಾ ಏಜೆಂಟರು ಮೊಬೈಲ್, ಪೇಜರ್‌, ಎಲೆಕ್ಟ್ರಾನಿಕ್‌ ಗ್ಲಾಡ್‌ಗೇಟ್ಸ್‌ಗಳು, ಕ್ಯಾಲ್ಕುಲೇಟರ್‌, ಬೀಡಿ, ಸಿಗರೇಟ್, ಬೆಂಕಿಪೊಟ್ಟಣ, ಲೈಟರ್‌, ನೀರಿನ ಬಾಟಲಿ, ಛತ್ರಿ, ಯಾವುದೇ ಹರಿತವಾದ ಆಯುಧಗಳು, ಸ್ಫೋಟಕ ವಸ್ತುಗಳು, ಸಿಡಿಮದ್ದು, ಬೆಂಕಿ ಹತ್ತುವ ಪದಾರ್ಥಗಳು ಮತ್ತು ಇಂಕ್‌ ಪೆನ್‌ ಇವುಗಳನ್ನು ಮತ ಎಣಿಕೆ ಕೇಂದ್ರದೊಳಗೆ ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು.

ಮತ ಎಣಿಕೆ ಕೇಂದ್ರಗಳಿಗೆ ಅಭ್ಯರ್ಥಿಗಳ ಪರವಾಗಿ ಏಜೆಂಟರು ತಮಗೆ ನಿಗದಿಪಡಿಸಿದ ವಿಧಾನಸಭಾ ಸೆಗ್ಮೆಂಟ್ ಕೊಠಡಿ ಬಿಟ್ಟು ಬೇರೆ ಕೊಠಡಿಗಳಿಗೆ ಓಡಾಡುವುದು, ಏರಿದ ಧ್ವನಿಯಲ್ಲಿ ಮಾತನಾಡುವುದು, ಅನಗತ್ಯವಾಗಿ ಏಜೆಂಟರ ನಡುವೆ ಮಾತನಾಡಿ ಚರ್ಚಿಸುವಂತಿಲ್ಲ. ಮತ ಎಣಿಕೆ ನಂತರ ಪ್ರತಿ ವಿಧಾನಸಭಾ ಸೆಗ್ಮೆಂಟ್‌ನ 5 ಮತಗಟ್ಟೆಗಳ ವಿವಿ ಪ್ಯಾಟ್‌ಗಳನ್ನು ರ್‍ಯಾಂಡಮ್‌ ಆಗಿ ಆಯ್ಕೆ ಮಾಡಿ ಮತ ಎಣಿಕೆ ಮಾಡಲಾಗುವುದು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಕೆ. ಅರುಣ್‌ ಮಾತನಾಡಿ, ಮತ ಎಣಿಕೆ ಕೇಂದ್ರದ ಬಳಿ ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಗೆದ್ದ ಅಭ್ಯರ್ಥಿ ಮೆರವಣಿಗೆ, ವಿಜಯೋತ್ಸವ, ರ್ಯಾಲಿ ಮಾಡುವುದು ಹಾಗೂ ಪಟಾಕಿ ಹೊಡೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಮತ ಎಣಿಕೆ ಕೇಂದ್ರದ ಕಾಲೇಜು ಮೈದಾನದಲ್ಲಿ ಪ್ರತಿ ಸುತ್ತಿನ ಮತ ಎಣಿಕೆಯ ವಿವರವನ್ನು ಧ್ವನಿವರ್ಧಕದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಉಪವಿಭಾಗಾಧಿಕಾರಿ ವಿಜಯಕುಮಾರ್‌, ಸಹಾಯಕ ಚುನಾವಣಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಗಳು, ಅಭ್ಯರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.