ಮುಖ್ಯ ರಸ್ತೆ ಅಗಲೀಕರಣ ಕಾರ್ಯ ಶೀಘ್ರ ಆರಂಭ: ತಿಪ್ಪಾರೆಡ್ಡಿ


Team Udayavani, Dec 2, 2018, 4:45 PM IST

cta-1.jpg

ಚಿತ್ರದುರ್ಗ: ಚಳ್ಳಕೆರೆ ಟೋಲ್‌ಗೇಟ್‌ನಿಂದ ಪ್ರವಾಸಿಮಂದಿರದವರೆಗಿನ ಮುಖ್ಯ ರಸ್ತೆ ಅಗಲೀಕರಣವನ್ನು ಶೀಘ್ರದಲ್ಲೇ ಆರಂಭಿಸಲಾಗುತ್ತದೆ. ಈಗಾಗಲೇ ತಾಲೂಕು ಕಚೇರಿ ಮತ್ತು ಪೊಲೀಸ್‌ ಠಾಣೆಯಿಂದ ಜಿಲ್ಲಾಧಿಕಾರಿಗಳ ವೃತ್ತದ ಮೂಲಕ ತುರುವನೂರು ರಸ್ತೆವರೆಗಿನ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ಇಲ್ಲಿನ ಪ್ರವಾಸಿಮಂದಿರದ ಮುಂಭಾಗ ರಸ್ತೆ, ಗುರುಭವನ, ಡಿಸಿ ಕಚೇರಿ ರಸ್ತೆಗಳ ಅಗಲೀಕರಣದ ಸಂಬಂಧ ಶನಿವಾರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ನಗರದ ಪ್ರಮುಖ ರಸ್ತೆ ಸೇರಿದಂತೆ ತಾಲೂಕು ಮತ್ತು ಜಿಲ್ಲಾಧಿಕಾರಿಗಳ ಕಚೇರಿ, ನ್ಯಾಯಾಲಯದ ಮುಂಭಾಗದ ರಸ್ತೆಗಳು ಕಿರಿದಾಗಿದ್ದು ಅಗಲೀಕರಣಕ್ಕೆ ಚಾಲನೆ ನೀಡಲಾಗಿದೆ. ಎಲ್ಲ ಸಂದರ್ಭದಲ್ಲಿ ನಾನೇ ಮುಂದೆ ನಿಂತು ಅಗಲೀಕರಣ ಮಾಡಿಸುತ್ತಿದ್ದೇನೆ. ಅಲ್ಲದೆ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಿದ್ದು ಎಲ್ಲೂ ಕಳಪೆಯಾಗದಂತೆ ಎಚ್ಚರ ವಹಿಸಲಾಗಿದೆ ಎಂದರು.

ಚಳ್ಳಕೆರೆ ಟೋಲ್‌ಗೇಟ್‌ ರಸ್ತೆಯಿಂದ ಸರ್ಕಾರಿ ವಿಜ್ಞಾನ ಕಾಲೇಜು ಮಾರ್ಗವಾಗಿ ಡಿಎಚ್‌ಒ ಆಫಿಸ್‌, ಮದಕರಿ ನಾಯಕ ವೃತ್ತ, ಅಂಬೇಡ್ಕರ್‌ ವೃತ್ತದ ಮೂಲಕ ಪ್ರವಾಸಿಮಂದಿರದವರೆಗೆ ದ್ವಿಪಥ ನಿರ್ಮಾಣಕ್ಕಾಗಿ 19.5 ಕೋಟಿ ರೂ. ಮೀಸಲಿಡಲಾಗಿದೆ. ಈ ಅನುದಾನದಲ್ಲಿ ಸಿಸಿ ರಸ್ತೆ, ಯುಜಿಡಿ, ಪುಟ್‌ಪಾತ್‌ ನಿರ್ಮಾಣ ಕಾರ್ಯ ಶುರು ಮಾಡಲಾಗಿದೆ. ಪ್ರವಾಸಿಮಂದಿರದಿಂದ ಜಿಲ್ಲಾಧಿಕಾರಿ ಕಚೇರಿ ವೃತ್ತಕ್ಕೆ ಮತ್ತು ಗುರುಭವನದಿಂದ ಕೋರ್ಟ್‌ ಮುಂಭಾಗ ತುರುವನೂರು ರಸ್ತೆವರೆಗೆ 2 ಕೋಟಿ ರೂ. ವೆಚ್ಚದಲ್ಲಿ ದ್ವಿಪಥ ನಿರ್ಮಾಣ ಮಾಡಲಾಗುತ್ತಿದೆ ಮತ್ತು 2 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಕಲಾ ಕಾಲೇಜು ಮತ್ತು ವಿಜ್ಞಾನ ಕಾಲೇಜು ಮಧ್ಯದ
ರಸ್ತೆಗಳ ಕಾಮಗಾರಿ ನಡೆಯುತ್ತಿದೆ. ನಗರದ ರಸ್ತೆಗಳ ಅಭಿವೃದ್ಧಿಗೆ ಅಧಿಕಾರಿಗಳಿಗೆ ನನ್ನ ಸಂಪೂರ್ಣ ಸಹಕಾರವಿದೆ. ಬಾಲಕಿಯರ ಸರ್ಕಾರಿ ಕಾಲೇಜು ಮುಂಭಾಗದ ಗೂಡಂಗಡಿಗಳನ್ನು ತೆರವುಗೊಳಿಸಿ ಸಹಕರಿಸಬೇಕು ಎಂದು ಶಾಸಕರು ಅಂಗಡಿ ಮಾಲೀಕರಿಗೆ ತಿಳಿಸಿದರು.

 ರಸ್ತೆ ನಿರ್ಮಾಣದ ಸಂದರ್ಭದಲ್ಲಿ ರಸ್ತೆ ಅಗಲೀಕರಣ ಮಾಡಲು ಅಗತ್ಯ ಇರುವ ಕಡೆ ಮರಗಳನ್ನು ತೆಗೆದು ಹೊಸ ಮರಗಳನ್ನು ಹಾಕಲಾಗುತ್ತದೆ. ನಗರದ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರು ಸ್ಪಂದಿಸಬೇಕು. ಉತ್ತಮ ರಸ್ತೆ ನಿರ್ಮಿಸಲು ಪಣ ತೊಟ್ಟಿದ್ದೇನೆ. ಯಾವ ಕಾರಣಕ್ಕೂ ನಿಲ್ಲಿಸುವುದಿಲ್ಲ. ಕೆಲವು ಕಡೆಗಳಲ್ಲಿ ಕಾಂಪೌಂಡ್‌ ಮತ್ತು ಮೆಟ್ಟಿಲುಗಳನ್ನು ತೆರವುಗೊಳಿಸುವಂತೆ ಆಸ್ತಿ ಮಾಲೀಕರ ಬಳಿ ಚರ್ಚಿಸಿದ್ದೇನೆ. ಅವರು ಸಹ ರಸ್ತೆ ಅಗಲೀಕರಣ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡುವುದರ ಜೊತೆಯಲ್ಲಿ ಸುಂದರ ನಗರ ಮಾಡಿ ಎಂದು ಹೇಳಿದ್ದಾರೆ. ರಸ್ತೆ ನಿರ್ಮಾಣ ಸಂದರ್ಭದಲ್ಲಿ ಜಲ್ಲಿ ಕಲ್ಲುಗಳನ್ನು ಹಾಕಿ ಹೆಚ್ಚು ದಿನಗಳ ಕಾಲ ಬಿಡಬೇಡಿ. ಜನರಿಗೆ ತೊಂದರೆ ಆಗುತ್ತದೆ. ರಸ್ತೆ ನಿರ್ಮಾಣ ಕಾರ್ಯ ವೇಗವಾಗಿ ನಡೆಯಬೇಕು. ಗುತ್ತಿಗೆದಾರರಿಂದ ಉತ್ತಮ ಕೆಲಸ ಪಡೆಯುವ ಹೊಣೆಗಾರಿಕೆ ಇಲಾಖೆ ಇಂಜಿನಿಯರ್‌ಗಳ ಮೇಲಿದೆ ಎಂದು ಎಚ್ಚರಿಸಿದರು.

ತಹಶೀಲ್ದಾರ್‌ ಟಿ.ಸಿ. ಕಾಂತರಾಜ್‌, ನಗರಸಭೆ ಪೌರಾಯುಕ್ತ ಚಂದ್ರಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೋಮಶೇಖರ್‌, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಸತೀಶ್‌ಬಾಬು, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಕೆ.ಜಿ. ಜಗದೀಶ್‌, ಹನುಮಂತಪ್ಪ, ಗುತ್ತಿಗೆದಾರ ಬಾಲರಾಮ ರೆಡ್ಡಿ ಮತ್ತಿತರರು ಇದ್ದರು. 

ಗುಣಮಟ್ಟದ ರಸ್ತೆ ನಿರ್ಮಾಣ ಕಾರ್ಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಅಂದಾಜು ಪಟ್ಟಿಯಲ್ಲಿ ಅನುಮೋದನೆ ಪಡೆದಿರುವ ರಸ್ತೆ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ.
ಜಿ.ಎಚ್‌. ತಿಪ್ಪಾರೆಡ್ಡಿ. ಶಾಸಕರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.