ಶಾಂತಿ ಕದಡುತ್ತಿದೆ ಚೀನಾ: ಶಿಮುಶ


Team Udayavani, Jul 6, 2020, 10:42 AM IST

ಶಾಂತಿ ಕದಡುತ್ತಿದೆ ಚೀನಾ: ಶಿಮುಶ

ಚಿತ್ರದುರ್ಗ: ಭಾರತ ದೇಶ ಶಾಂತಿ ಪ್ರಧಾನ ದೇಶ. ಆದರೆ ಚೀನಾ ಭಾರತದ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗಡಿಗೆ ತೆರಳಿ ಸೈನಿಕರಿಗೆ ಧೈರ್ಯ ತುಂಬಿದ್ದಾರೆ ಎಂದು ಡಾ| ಶ್ರೀ| ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮತ್ತು ಎಸ್‌ಜೆಎಂ ಶಾಂತಿ ಮತ್ತು ಪ್ರಗತಿ ಫೌಂಡೇಶನ್‌ ಸಹಯೋಗದಲ್ಲಿ ನಡೆದ 30ನೇ ವರ್ಷದ 7ನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ಮಾತನಾಡಿದರು. ಕಾಲ್ಕೆರೆದು ಜಗಳ ಮಾಡುವ ಮೂಲಕ, ಶಾಂತಿ ಕದಡುವ ಕೆಲಸಮಾಡುವುದು ಚೀನಾ ದೇಶಕ್ಕೆ ಹಿಡಿದಿರುವ ಗ್ರಹಣ. ನಮ್ಮ ಮೇಲೆ ವಿನಾಕಾರಣ ಹಿಂಸಾತ್ಮಕವಾದ ದಾರಿ ತುಳಿದಿದ್ದು ಅದನ್ನು ನಾವೆಲ್ಲ ಖಂಡಿಸಬೇಕು ಎಂದರು.

ಸೂರ್ಯ-ಚಂದ್ರನಿಗೆ ಗ್ರಹಣ ಹಿಡಿದರೆ ಬಿಟ್ಟು ಹೋಗುತ್ತದೆ. ಆದರೆ ಮಾನವನ ಬದುಕಿಗೆ ಹಿಡಿದಿರುವ ಗ್ರಹಣ ಬಿಡಿಸುವುದು ಕಷ್ಟ. ಸಮಾಜದಲ್ಲಿರುವ ಅಸಮಾನತೆ, ಅಸ್ಪೃಶ್ಯತೆ ಮಾನವನ ಬದುಕನ್ನು ಕಾಡುವ ಗ್ರಹಣಗಳಾಗಿವೆ ಎಂದು ತಿಳಿಸಿದರು.

ಭಾನುವಾರ ಗುರುಪೂರ್ಣಿಮೆ ಹಾಗು ಚಂದ್ರಗ್ರಹಣ ನಡೆಯುತ್ತಿವೆ. ಈ ಅವ ಧಿಯಲ್ಲಿ ವಿವಾಹ ಮಹೋತ್ಸವ ಮಾಡುತ್ತಿರುವುದು ನಮಗೆ ಅಮಂಗಲ ಅಲ್ಲ. ಶುಭಮಂಗಲ. ಬ್ರಹ್ಮಾಂಡದಲ್ಲಿ ಸೂರ್ಯಗ್ರಹಣ, ಚಂದ್ರಗ್ರಹಣ ಆಗಾಗ ಸಂಭವಿಸುತ್ತವೆ. ಗ್ರಹಣ ಒಂದು ವಿಸ್ಮಯ. ಸೂರ್ಯ ಮತ್ತು ಚಂದ್ರರು ಗ್ರಹಣದ ಬಗ್ಗೆ ಯೋಚಿಸುವುದಿಲ್ಲ. ಕಿರಣಗಳಿಗೆ ಮಾತ್ರ ಗ್ರಹಣ. ಈ ಗ್ರಹಣ ವಿಮೋಚನೆ ಆಗುತ್ತದೆ ಎಂದರು.

ಭೂಮಿ ಇದ್ದಾಗಿನಿಂದಲೂ ಜನಾಂಗೀಯ ತಾರತಮ್ಯಗಳಿವೆ. ಬುದ್ಧ, ಬಸವಣ್ಣ, ದಾಸರು, ಗಾಂಧೀ ಜಿ, ಅಂಬೇಡ್ಕರ್‌ ಮತ್ತಿತರರು ಸಾಮಾಜಿಕ ಅಸಮಾನತೆ ದೂರ ಮಾಡಲು ಪ್ರಯತ್ನಿಸಿದ್ದಾರೆ. ಆಧುನಿಕ ಮಾನವನಲ್ಲಿ ಎಲ್ಲಿಲ್ಲದ ಅಸಮಾನತೆ, ಮೂರ್ಖತನದ ನಡವಳಿಕೆಗಳು, ಅಪ್ರಬುದ್ಧ ಚಿಂತನೆಗಳು ಕಾಡುತ್ತಿವೆ ಎಂದರು. ಸಾಮೂಹಿಕ ವಿವಾಹದಲ್ಲಿ ವೈಶ್ಯ ಜಾತಿಯ ವರ ಹಾಗೂ ಭೋವಿ ಜಾತಿಯ ವಧುವಿನ ಅಂತರ್ಜಾತಿ ವಿವಾಹದ ಜತೆಗೆ ಐದು ಜೋಡಿಗಳು ಭಾಗವಹಿಸಿದ್ದರು.

ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಸಿಇಒ ಎಂ.ಜಿ.ದೊರೆಸ್ವಾಮಿ, ಪ್ರೊ| ಸಿ.ಎಂ. ಚಂದ್ರಪ್ಪ, ಪ್ರೊ. ಜ್ಞಾನಮೂರ್ತಿ ಮತ್ತಿತರರಿದ್ದರು. ಜಮುರಾ ಕಲಾವಿದರು ವಚನ ಪ್ರಾರ್ಥನೆ ಮಾಡಿದರು. ವನಕಲ್‌ ಮಠದ ಶ್ರೀ ಬಸವ ರಮಾನಂದ ಸ್ವಾಮಿಗಳು ಸ್ವಾಗತಿಸಿದರು. ಬಸವರಾಜ ಶಾಸ್ತ್ರಿ ನಿರೂಪಿಸಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.