ಅನುದಾನ ಹಂಚಿಕೆಗೆ ಸದಸ್ಯರ ಅಸಮಾಧಾನ

ಚಳ್ಳಕೆರೆ ನಗರಸಭೆಯ ಎಲ್ಲಾ 31 ವಾರ್ಡ್‌ಗಳಿಗೂ ಸಮನಾಗಿ ಹಂಚಲು ಪಕ್ಷ ಭೇದ ಮರೆತು ಒತ್ತಾಯ

Team Udayavani, May 26, 2022, 3:31 PM IST

kushtagi

ಚಳ್ಳಕೆರೆ: ನಗರಸಭೆ ಸಾಮಾನ್ಯ ಸಭೆ ಅಧ್ಯಕ್ಷೆ ಸುಮಕ್ಕ ಆಂಜಿನಪ್ಪ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಪೌರಾಯುಕ್ತೆ ಕೆ.ಲೀಲಾವತಿ ಸ್ವಾಗತಿಸಿ ಮಾತನಾಡಿ, ಸಭೆಯಲ್ಲಿ ಒಟ್ಟು 24 ವಿವಿಧ ವಿಷಯಗಳ ಚರ್ಚೆಗೆ ಅವಕಾಶ ನೀಡಲಾಗಿದೆ. ಪಾವಗಡ ರಸ್ತೆಯ ಮಹಾಲಕ್ಷ್ಮೀ ಚಿತ್ರಮಂದಿರದ ಬಗ್ಗೆ ಸರ್ವೋತ್ಛ ನ್ಯಾಯಾಲಯ ನೀಡಿರುವ ಆದೇಶವನ್ನು ಜಾರಿಗೆ ತರುವ ಕುರಿತು ಸದಸ್ಯರು ಸಭೆಯಲ್ಲಿ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಮನವಿ ಮಾಡಿದರು.

ಆಡಳಿತ ಪಕ್ಷದ ಸದಸ್ಯರಾದ ಸುಮಾ ಭರಮಣ್ಣ, ವಿರೂಪಾಕ್ಷಿ, ಜಯಲಕ್ಷ್ಮೀ, ಕವಿತಾ ಬೋರಯ್ಯ, ಟಿ. ಮಲ್ಲಿಕಾರ್ಜುನ್‌, ಸಿ. ಶ್ರೀನಿವಾಸ್‌, ವಿ.ವೈ. ಪ್ರಮೋದ್‌, ಎಸ್‌. ಜಯಣ್ಣ, ಶಿವಕುಮಾರ್‌, ಎಂ. ನಾಗವೇಣಿ ಮತ್ತಿತರರು ನಗರಸಭೆಯ ಅನುದಾನ ಹಂಚಿಕೆ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರ ವಿವಿಧ ಯೋಜನೆಗಳಲ್ಲಿ ಅನುದಾನ ಬಿಡುಗಡೆ ಮಾಡುತ್ತಿದ್ದು ಎಲ್ಲಾ 31 ವಾರ್ಡ್‌ಗಳಿಗೂ ಸಮನಾಗಿ ಹಂಚಿಕೆ ಮಾಡಬೇಕಿದೆ. ಕೆಲವೊಂದು ವಾರ್ಡ್‌ಗಳಲ್ಲಿ ಮಾತ್ರ ಸಾರ್ವಜನಿಕರಿಗೆ ಅವಶ್ಯವಾಗಿ ಬೇಕಾದ ಕಾಮಗಾರಿಗಳಿಗೆ ಮಾತ್ರ ಅಗತ್ಯ ಬಿದ್ದರೆ ಹೆಚ್ಚು ಅನುದಾನ ನೀಡಬೇಕು. ಆಡಳಿತ ಪಕ್ಷದ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಅಧ್ಯಕ್ಷೆ ಸುಮಕ್ಕ ಆಂಜಿನಪ್ಪ ತಾವು ಪ್ರತಿನಿಧಿಸುವ 17ನೇ ವಾರ್ಡ್ ಗೆ 70 ಲಕ್ಷ ಅನುದಾನವನ್ನು ಮೀಸಲಿಟ್ಟಿರುವುದು ಸರಿಯಲ್ಲ. ನಗರದ ಯಾವುದೇ ವಾರ್ಡ್‌ ಈ ಪ್ರಮಾಣದ ಹಣ ಬಿಡುಗಡೆಯಾಗಿಲ್ಲ. ಕೆಲವೊಂದು ವಾರ್ಡ್‌ಗಳಿಗೆ ಹಣ ಮೀಸಲಿಟ್ಟಿಲ್ಲ. ಕೆಲವು ವಾರ್ಡ್ ಗಳಿಗೆ ಅತಿ ಕಡಿಮೆ ಅನುದಾನ ನಿಗದಿಪಡಿಸಿದ್ದೀರಿ. ಇದರಿಂದ ಬೇರೆ ಸದಸ್ಯರಿಗೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅಡ್ಡಿಯಾಗುತ್ತದೆ ಎಂದು ಅಧ್ಯಕ್ಷರ ಕಾರ್ಯವೈಖರಿಯ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಸಹಾಯಕ ಇಂಜಿನಿಯರ್‌ ಲೋಕೇಶ್‌ರವರನ್ನು ತರಾಟೆಗೆ ತೆಗೆದುಕೊಂಡಕೆಲ ಸದಸ್ಯೆಯರು, ಯಾವುದೇ ಕಾಮಗಾರಿಯ ಬಗ್ಗೆ ಮಾಹಿತಿ ಕೇಳಿದರೆ ನಿಮ್ಮ ಪತಿಗೆ ತಿಳಿಸಿರುವುದಾಗಿ ಹೇಳುತ್ತಾರೆ. ಆದರೆ ಇನ್ನು ಮುಂದೆ ನೇರವಾಗಿ ಸದಸ್ಯರಿಗೆ ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದರು. ಪೌರಾಯುಕ್ತೆ ಟಿ. ಲೀಲಾವತಿ ಮಾತನಾಡಿ, ಅನುದಾನ ಹಂಚಿಕೆ ಕುರಿತಂತೆ ಯಾರೂ ಅಸಮಾಧಾನಗೊಳ್ಳಬಾರದು. ಮುಂದಿನ ದಿನಗಳಲ್ಲಿ ಎಲ್ಲರೂ ಸರಿಸಮಾನವಾಗಿ ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಪಾವಗಡ ರಸ್ತೆಯ ಮಹಾಲಕ್ಷ್ಮೀ ಚಿತ್ರಮಂದಿರದ ಸಮಸ್ಯೆಯ ಬಗ್ಗೆ ಸರ್ವೋಚ್ಛ ನ್ಯಾಯಾಲಯ ನೀಡಿರುವ ಆದೇಶವನ್ನು ನಗರಸಭೆ ಪಾಲಿಸಬೇಕಿದೆ. ನಿಯಮಗಳ ಪ್ರಕಾರ ಸದರಿ ಸ್ವತ್ತನ್ನು ಬಹಿರಂಗ ಹರಾಜು ಮೂಲಕ ನೀಡುವುದು ಸೂಕ್ತ. ಕಾನೂನುಬದ್ಧವಾಗಿ ಹರಾಜು ನಡೆಸುವಂತೆ ಸದಸ್ಯರಾದ ಶ್ರೀನಿವಾಸ್‌, ರಮೇಶ್‌ ಗೌಡ, ಕೆ. ವೀರಭದ್ರಪ್ಪ ಮುಂತಾದವರು ಒತ್ತಾಯಿಸಿದರು.

ಈ ಬಗ್ಗೆ ಸ್ಪಷ್ಟನೆ ನೀಡಿದ ಪೌರಾಯುಕ್ತೆ, ಮಹಾಲಕ್ಷ್ಮೀ ಚಿತ್ರಮಂದಿರದ ಸಮಸ್ಯೆ ಸಂಬಂಧಪಟ್ಟಂತೆ ಬಿ. ವನಿತಾ ಕೋಂ ಯೋಗಾನಂದ ಅರ್ಜಿ ನೀಡಿ ನಗರಸಭೆಯ ನಿಯಮಗಳ ಪ್ರಕಾರ 21 ಮೀಟರ್‌ ಬಿಟ್ಟು ಮಾರುಕಟ್ಟೆ ಮೌಲ್ಯಕ್ಕೆ ಸದರಿ ನಿವೇಶನವನ್ನು ಮಂಜೂರು ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸದಸ್ಯರ ಅಭಿಪ್ರಾಯವನ್ನು ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.

ಉಪಾಧ್ಯಕ್ಷೆ ಆರ್‌. ಮಂಜುಳಾ, ಸ್ಥಾಯಿ ಸಮಿತಿ ಅಧ್ಯಕ್ಷ ರುದ್ರನಾಯಕ, ವೈ. ಪ್ರಕಾಶ್‌, ಸುಜಾತಾ ಪಾಲಯ್ಯ, ಎಂ.ಜೆ. ರಾಘವೇಂದ್ರ, ತಿಪ್ಪಮ್ಮ, ಚಳ್ಳಕೆರೆಯಪ್ಪ, ಪಾಲಮ್ಮ, ಸಾವಿತ್ರಮ್ಮ, ಜೈತುಂಬಿ, ನಿರ್ಮಲಾ, ನಾಮನಿರ್ದೇಶನ ಸದಸ್ಯರಾದ ಹೊಸಮನೆ ಮನೋಜ್‌, ವೀರೇಶ್‌, ಇಂದ್ರೇಶ್‌, ಜಗದಾಂಬ, ವ್ಯವಸ್ಥಾಪಕ ಲಿಂಗರಾಜು, ಕಂದಾಯಾಧಿಕಾರಿ ವಿ. ಈರಮ್ಮ, ಎಇಇ ವಿನಯ್‌ ಮತ್ತಿತರರು ಉಪಸ್ಥಿತರಿದ್ದರು.

ಪೌರಕಾರ್ಮಿಕರಿಗೆ ನೂತನ ತಾಂತ್ರಿಕತೆಯಿಂದ ಕೂಡಿದ ರಕ್ಷಾ ಕವಚಗಳನ್ನು ವಿತರಿಸಲಾಗುವುದು. ಪ್ರಸ್ತುತ ಪ್ರತಿನಿತ್ಯ ನೀಡುವ ಉಪಹಾರದ ಬದಲು ಎಲ್ಲಾ ಪೌರಕಾರ್ಮಿಕರಿಗೆ ವಿಶೇಷ ಊಟದ ವ್ಯವಸ್ಥೆ ಮಾಡಲಾಗುತ್ತದೆ. ಕೆಲಸದ ನಂತರ ವಿಶ್ರಾಂತಿ ಪಡೆಯಲು 30 ಲಕ್ಷ ರೂ. ವೆಚ್ಚದಲ್ಲಿ ನಾಲ್ಕು ಕಡೆ ವಿಶ್ರಾಂತಿ ಗೃಹ ನಿರ್ಮಿಸಲಾಗುವುದು. -ಟಿ. ಲೀಲಾವತಿ, ಪೌರಾಯುಕ್ತರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.