ಜಯವಿಭವ ಮುರುಘರಾಜೇಂದ್ರ ಸ್ವಾಮೀಜಿ ಸ್ಮರಣೆ


Team Udayavani, May 22, 2021, 11:30 AM IST

ಜಯವಿಭವ ಮುರುಘರಾಜೇಂದ್ರ ಸ್ವಾಮೀಜಿ ಸ್ಮರಣೆ

ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಶುಕ್ರವಾರಲಿಂಗೈಕ್ಯ ಶ್ರೀ ಜಗದ್ಗುರು ಜಯವಿಭವ ಮುರುಘರಾಜೇಂದ್ರ ಸ್ವಾಮಿಗಳ ಸ್ಮರಣೆ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಡಾ. ಶಿವಮೂರ್ತಿ ಮುರುಘಾ ಶರಣರು ಮಾತನಾಡಿ,ಜಯದೇವ ಶ್ರೀಗಳು ಲಿಂಗೈಕ್ಯರಾದ ನಂತರಜಯವಿಭವ ಸ್ವಾಮಿಗಳು ಪೀಠಾಧ್ಯಕ್ಷರಾಗಿಆಯ್ಕೆಯಾದರು. ಇವರ ಪೂರ್ವಾಶ್ರಮದ ಹೆಸರು ಶಿವಲಿಂಗದೇವರು. ಮೊದಲು ಅಥಣಿಗಚ್ಚಿನಮಠದಲ್ಲಿ ಮುರುಘೇಂದ್ರ ಶ್ರೀಗಳ ಕಾರುಣ್ಯದ ಜತೆ ಕಾರ್ಯಾರಂಭ ಮಾಡಿದರು.

ಮುಳಗುಂದದ ಬಾಲಲೀಲ ಶ್ರೀಗಳವರಮತ್ತು ಮುರುಘೇಂದ್ರ ಶಿವಯೋಗಿಗಳವರಆಶೀರ್ವಾದ ಇದ್ದುದನ್ನು ನೋಡಿದಜಯದೇವ ಶ್ರೀಗಳು ಶಿವಲಿಂಗ ದೇವರನ್ನುಹೆಚ್ಚಿನ ವಿದ್ಯಾಭ್ಯಾಸಕ್ಕೆ ಕಾಶಿಗೆ ಕಳುಹಿಸುತ್ತಾರೆ. ಇವರ ಜತೆ ಮಲ್ಲಿಕಾರ್ಜುನ ಜಗದ್ಗುರುಗಳುಸಹ ಕಾಶಿ ಪೀಠದಲ್ಲಿ ಜೊತೆಯಾಗಿ ಇಬ್ಬರುಒಂದೇ ಕೊಠಡಿಯಲ್ಲಿ ಇದ್ದು ವಿದ್ಯಾಭ್ಯಾಸ ಮಾಡಿದ್ದರು.

ಜಯವಿಭವ ಶ್ರೀಗಳಲ್ಲಿ ಕೃಷಿ ಆಸಕ್ತಿಯ ಜತೆಗೆ ಪಾಕಪ್ರವೀಣರಾಗಿದ್ದರು. ಪೀಠಾಧಿಶರಾದ ಮೇಲೆ ಪಶುಪಾಲನೆಗೆ ಹೆಚ್ಚಿನ ಆದ್ಯತೆ ನೀಡಿದರು. ಯಾವ ಮಠವು ಗೋಶಾಲೆ ಮಾಡದ ಸಂದರ್ಭದಲ್ಲಿ ಜಯವಿಭವ ಸ್ವಾಮಿಗಳು ಗೋಶಾಲೆ ಮಾಡಿದ್ದರು. ಸಾವಿರಾರು ದನಕರುಗಳು ಇದ್ದವು. ಮಠದೊಳಗೆ ಇರುವ ತೆಂಗಿನ ಮರಗಳು ಸಹ ಅವರೇ ಹಾಕಿಸಿದ್ದು.

ಸಾಧನೆ ಮಾಡಿದವರುಲಿಂಗೈಕ್ಯರಾಗಬಹುದು ಆದರೆ ಅವರ ಸಾಧನೆಗೆ ಸಾವಿರುವುದಿಲ್ಲ. ದವಳಿ ಹೊಂಡದತೋಟವು ಸಹ ಅವರೇ ಹಾಕಿ ಬೆಳೆಸಿದ್ದು.ಜಯದೇವ ಶ್ರೀಗಳು ಹಾಗು ಜಯವಿಭವ ಶ್ರೀಗಳ ಮಧ್ಯೆ ಹಾರ್ದಿಕವಾದ ಸ್ಪರ್ಧೆ ಇತ್ತು. ಸಾತ್ವಿಕರು, ಸಂಪನ್ನರು. ಬಹಳ ಕಾಲ ಪೀಠಾಧ್ಯಕ್ಷರಾಗಿರಲಿಲ್ಲ. ಅನಾರೋಗ್ಯದಿಂದ ಅಲ್ಪಕಾಲದಲ್ಲಿಯೇ ಲಿಂಗೈಕ್ಯರಾದರು. ಕಡಿಮೆ ಅವಧಿಯಲ್ಲಿ ಶ್ರೀಮಠದ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು. ಇಂದು ಹಣ ಸಂಪಾದನೆಗಿಂತಪ್ರಾಣ ಸಂಪಾದನೆ ಮುಖ್ಯ. ನಮ್ಮ ಜೀವವನ್ನುನಾವೇ ಉಳಿಸಿಕೊಳ್ಳಬೇಕಿದೆ ಎಂದು ಹೇಳಿದರು.

ವೀರಶೈವ ಸಮಾಜದ ಮುಖಂಡ ಕೆಇಬಿ ಷಣ್ಮುಖಪ್ಪ ಮಾತನಾಡಿ, 1956 ರಿಂದ 65 ರವರೆಗೆ ಶ್ರೀಮಠದ ಪೀಠಾಧ್ಯಕ್ಷರಾಗಿದ್ದ ಜಯವಿಭವ ಶ್ರೀಗಳಿಗೆ ಕೃಷಿಯ ಬಗ್ಗೆ ಅಪಾರ ಪ್ರೀತಿ. 1962 ರಲ್ಲಿ ಚೀನಾ ಯುದ್ಧವಾದಾಗ ನಿಜಲಿಂಗಪ್ಪ ಮುಖ್ಯಮಂತ್ರಿಗಳಾಗಿದ್ದರು. ಆ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಲೆಂದು ಪರಂಪರಾಗತರಾಗಿ ಬಂದಿದ್ದಂತಹ ಕಿರೀಟವನ್ನು ಭಾರತ ಸರ್ಕಾರಕ್ಕೆ ಕೊಟ್ಟ ಉದಾರಿಗಳು ಎಂದು ಸ್ಮರಿಸಿದರು.

ವೀರಶೈವ ಬ್ಯಾಂಕ್‌ ಅಧ್ಯಕ್ಷ ಪಟೇಲ್‌ಶಿವಕುಮಾರ್‌, ಮುಖಂಡರಾದ ಎಂ.ಟಿ. ಮಲ್ಲಿಕಾರ್ಜುನಸ್ವಾಮಿ, ವೀರಶೈವಮಹಾಸಭಾ ಜಿಲ್ಲಾಧ್ಯಕ್ಷ ಮಹಡಿಶಿವಮೂರ್ತಿ, ಎಸ್‌.ಜೆ.ಎಂ. ವಿದ್ಯಾಪೀಠದಕಾರ್ಯದರ್ಶಿ ಎ.ಜೆ. ಪರಮಶಿವಯ್ಯ ಇದ್ದರು. ಉಮೇಶ ಪತ್ತಾರ ಪ್ರಾರ್ಥಿಸಿದರು. ಕೆ.ಎಂ.ವೀರೇಶ್‌ ವಂದಿಸಿದರು. ವೀರೇಂದ್ರಕುಮಾರ್‌ ನಿರೂಪಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.