ಹೂವು, ತರಕಾರಿ ಬೆಳೆಗಾರರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್
Team Udayavani, Apr 18, 2020, 2:35 PM IST
ಚಿತ್ರದುರ್ಗ: ಹೂವು, ತರಕಾರಿ ಬೆಳೆಗಾರರಿಗೆ ಆಗಿರುವ ಸರ್ಕಾರದಿಂದ ಪರಿಹಾರ ನೀಡಲು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.
ಚಿತ್ರದುರ್ಗದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೇರೆ ಜಿಲ್ಲೆ, ರಾಜ್ಯಕ್ಕೆ ತರಕಾರಿ, ಹಣ್ಣು ಸಾಗಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದರು. ಹೊರ ರಾಜ್ಯಕ್ಕೆ ಹಣ್ಣು, ತರಕಾರಿ, ಸರಬರಾಜು ಮಾಡುವ ಲಾರಿ ಪರೀಕ್ಷಿಸುವಂತಿಲ್ಲ ಎಂದು ಸ್ಪಷ್ಟ ಪಡಿಸಿದರು.
ಸಾಮೂಹಿಕ ನಮಾಜ್ ಮಾಡುವಂತಿಲ್ಲ.
ರಂಜಾನ್ ವೇಳೆ ಮನೆಯಲ್ಲಿಯೇ ನಮಾಜ್ ಮಾಡಲು ಸರ್ಜಾರ ಕಟ್ಟುನಿಟ್ಟಾಗಿ ಸೂಚಿಸಿದೆ ಎಂದು ಹೇಳಿದರು. ದೆಹಲಿ ತಬ್ಲೀಘಿ ಜಮಾತ್ ಗೆ ಹೋಗಿ ಬಂದವರು ಕಡ್ಡಾಯವಾಗಿ ಚಿಕಿತ್ಸೆಗೆ ಒಳಪಡಬೇಕು ಎಂದರು.
ರೈತರಿಗೆ ಗ್ರೀನ್ ಪಾಸ್
ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಗ್ರೀನ್ ಪಾಸ್ ನೀಡಲಾಗುತ್ತಿದೆ. ಈ ವಿಚಾರದಲ್ಲಿ ಡೂಪ್ಲಿಕೇಟ್ ಪಾಸ್ ಕಂಡು ಬಂದಲ್ಲಿ ಕೂಡಲೇ ಬಂಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಾರ್, ತೆರೆದರೆ ಸಾಮಾಜಿಕ ಅಂತ ಕಾಯ್ದುಕೊಳ್ಳುವುದು ಅಸಾಧ್ಯ. ಸರ್ಕಾರದ ಬೊಕ್ಕಸಕ್ಕೆ ನಷ್ಟವಾದರೂ ಸಹ ತೆರೆಯುವ ತೀರ್ಮಾನವಿಲ್ಲ ಎಂದರು. ಚಿತ್ರದುರ್ಗದಲ್ಲಿ ಮುರುಘಾ ಮಠ, ಎಪಿಎಂಸಿ ಹಾಗೂ ಡಿಸಿಸಿ ಬ್ಯಾಂಕಿಗೆ ಭೇಟಿ ನೀಡಿ ದಾವಣಗೆರೆಗೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ