‘ಸಾಯೋರು ಎಲ್ಲಾದರೂ ಸಾಯಲಿ’ : ಶಾಸಕ ಚಂದ್ರಪ್ಪ
Team Udayavani, May 16, 2021, 4:57 PM IST
ಚಿತ್ರದುರ್ಗ : ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ನಿರ್ಮಾಣದ ವಿಚಾರವಾಗಿ ಹೊಳಲ್ಕೆರೆ ಬಿಜೆಪಿ ಶಾಸಕ ಹಾಗೂ ಸಾರಿಗೆ ನಿಗಮ ಅಧ್ಯಕ್ಷ ಎಂ.ಚಂದ್ರಪ್ಪ ಅವರು ಡಿಹೆಚ್ಓ ಡಾ.ಪಾಲಾಕ್ಷ ಜೊತೆ ಮಾತಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಇದರಲ್ಲಿ ಶಾಸಕರು, ‘ನಾನು ಇಲ್ಲಿ ಆಸ್ಪತ್ರೆ ಮಾಡೋದಿಲ್ಲ, ಅದು ನನಗೆ ಅವಶ್ಯಕತೆ ಇಲ್ಲ, ಸಾಯೋರು ಎಲ್ಲಾದರೂ ಸಾಯಲಿ’ ಎಂದು ನುಡಿದಿದ್ದಾರೆ.
ಹೊಳಲ್ಕೆರೆ ಪಟ್ಟಣದ ಪ್ರವಾಸಿ ಮಂದಿರ ಬಳಿ ಶಾಸಕರು ಹಾಗೂ ಡಿಎಚ್ಒ ನಡುವೆ ಈ ವಾಗ್ವಾದ ನಡೆದಿದೆ.
ಯಾವ ವಿಚಾರಕ್ಕೆ ?
ಹೊಳಲ್ಕೆರೆ ತಾಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಬೆಡ್ ಕೊವಿಡ್ ವಾರ್ಡ್ ನಿರ್ಮಾಣ ಮಾಡುವಂತೆ ಸೂಚಿಸಲಾಗಿತ್ತು. ಆದರೆ, ಕೇವಲ 10 ಆಕ್ಸಿಜನ್ ಬೆಡ್ ನಿರ್ಮಾಣ ಮಾಡಿರುವುದಾಗಿ ಡಿಹೆಚ್ಓ ಮಾಹಿತಿ ನೀಡಿದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಶಾಸಕರು, 50 ಆಕ್ಸಿಜನ್ ಬೆಡ್ ನಿರ್ಮಿಸಿ ಇಲ್ಲವಾದರೆ ಏನೂ ಬೇಡ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ