ನವ ಭಾರತ ನಿರ್ಮಾಣಕ್ಕೆ ಮೋದಿ ಮತ್ತೆ ಪ್ರಧಾನಿಯಾಗಲಿ


Team Udayavani, Mar 29, 2019, 2:37 PM IST

cta-2
ಮೊಳಕಾಲ್ಮೂರು: ನವ ಭಾರತ ನಿರ್ಮಾಣಕ್ಕಾಗಿ ನುಡಿದಂತೆ ನಡೆಯುವ ನರೇಂದ್ರ ಮೋದಿಯವರನ್ನು ಮತ್ತೂಮ್ಮೆ
ದೇಶದ ಪ್ರಧಾನಿಯನ್ನಾಗಿಸಲು ಪಣ ತೊಡಬೇಕು ಎಂದು ಬಿಜೆಪಿ ಪ್ರಬುದ್ಧ ಗೋಷ್ಠಿಯ ರಾಜ್ಯಾಧ್ಯಕ್ಷ ಡಾ| ಜಿ. ಗಿರಿಧರ ಉಪಾಧ್ಯಾಯ ಕರೆ ನೀಡಿದರು.
ಪಟ್ಟಣದ ಪಾಂಡುರಂಗಸ್ವಾಮಿ ದೇವಸ್ಥಾನದ ಸಭಾಂಗಣದಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ “ಪ್ರಬುದ್ಧರೊಂದಿಗೆ
ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಕಾರ್ಯಕರ್ತರು ತಲೆ ಎತ್ತಿ ಪಕ್ಷಕ್ಕೆ ಮತ ಕೇಳುವಂತಹ ಕೆಲಸ ಮಾಡುತ್ತೇನೆಂದು ಭರವಸೆ ನೀಡಿದ್ದಾರೆ. ಅವರೊಬ್ಬ ರಾಜಕೀಯ ಮುತ್ಸದ್ಧಿಯಾಗಿದ್ದಾರೆ. ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ಜೊತೆಗೆ ಹೊಸ ಭಾರತ ಕಟ್ಟಲುಸಂಕಲ್ಪ ಮಾಡಬೇಕಿದೆ ಎಂದರು. ಬಿಜೆಪಿ ಒಬ್ಬ ವ್ಯಕ್ತಿಯ ಪರವಾಗಿರದೆ ಭಾರತ ಮಾತೆಯನ್ನು ವಿಶ್ವ ಮಾತೆಯಾಗಿಸುವ ಗುರಿಯನ್ನು ಹೊಂದಲಾಗಿದೆ. ಪ್ರಧಾನಿ ಮೋದಿಯವರು ಸಾಮಾನ್ಯರಲ್ಲಿ ಸಾಮಾನ್ಯರಾಗಿ ಯಾವುದೇ ಫಲಾಪೇಕ್ಷೆಯಿಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ. ಐದು ವರ್ಷಗಳ ಆಡಳಿತದಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡಿಲ್ಲ. ವಿರೋಧ ಪಕ್ಷಗಳು ಮೋದಿ ಮತ್ತೆ ಅಧಿ ಕಾರಕ್ಕೆ ಬಾರದಂತೆ ಮಾಡಲು ವಂಶ ಪಾರಂಪರ್ಯ ಆಡಳಿತಕ್ಕೆ ಮುಂದಾಗಿವೆ ಎಂದು ಆರೋಪಿಸಿದರು.
ಮೋದಿಯವರು ಬಡಜನತೆಗಾಗಿ ಆಯುಷ್ಮಾನ್‌ ಭಾರತ್‌, ಮುದ್ರಾ ಯೋಜನೆ, ಜೆನರಿಕ್‌ ಔಷ ಧ, ವಸತಿ ನಿರ್ಮಾಣದಲ್ಲಿ ಬಡ್ಡಿ ಇಳಿಕೆ ಹಾಗೂ ಸಬ್ಸಿಡಿ, ಸಂಕಷ್ಟದಲ್ಲಿರುವ ರೈತರಿಗೆ ಬೆಂಬಲ ಬೆಲೆ ಮತ್ತು ಅವರ ಖಾತೆಗೆ ವಾರ್ಷಿಕ 6 ಸಾವಿರ ರೂ. ಜಮಾ
ಮಾಡುವ ಯೋಜನೆ, ಶೌಚಾಲಯ ನಿರ್ಮಾಣ ಹಾಗೂ ನಾನಾ ಯೋಜನೆಗಳ ಮೂಲಕ ಪ್ರತಿಯೊಂದು ಖಾತೆಗೆ 15
ಲಕ್ಷ ರೂ.ಗಿಂತಲೂ ಹೆಚ್ಚು ಹಣವನ್ನು ಪರ್ಯಾಯವಾಗಿ ನೀಡಿದ್ದಾರೆ. ಆದರೆ ಯುಪಿಎ ಸರ್ಕಾರ ಲೂಟಿ ಮಾಡಿದ
ಕಂದಕಗಳನ್ನು ಮುಚ್ಚುವ ಕೆಲಸ ಮಾಡಿದ್ದಾರೆ. ಆದ್ದರಿಂದ ದೇಶಪ್ರೇಮಿ ನರೇಂದ್ರ ಮೋದಿಯವರಿಗೆ ಮತ್ತೂಮ್ಮೆ ದೇಶದ
ಚುಕ್ಕಾಣಿ ನೀಡಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಡಾ| ಬಿ.ಜಿ. ಜ್ಞಾನದೇವ್‌, ಡಾ| ಪಿ.ಎಂ. ಮಂಜುನಾಥ, ಡಿ.ಎಂ. ಈಶ್ವರಪ್ಪ, ಪಿ.ಎಂ. ಚಂದ್ರಶೇಖರ್‌,
ಟಿ.ಟಿ. ರವಿಕುಮಾರ್‌. ವಿನಯ್‌ಕುಮಾರ್‌, ಶಾಂತಾರಾಂ ಬಸಾಪತಿ, ಡಿಶ್‌ ರಾಜು, ಕೆ.ಪಿ. ಗೋಪಾಲ್‌ ಇದ್ದರು.
15 ಲಕ್ಷ ನೀಡೋದಾಗಿ ಮೋದಿ ಹೇಳಿಲ್ಲ ಮೋದಿಯವರು ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಅಗತ್ಯ ಸವಲತ್ತುಗಳನ್ನು ನೀಡಿದ್ದಾರೆ. ಕಳೆದ ಚುನಾವಣೆಯಲ್ಲಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ನೀಡುವುದಾಗಿ ಎಲ್ಲಿಯೂ ಹೇಳಿಲ್ಲ. ದೇಶದಲ್ಲಿರುವ
ಲೂಟಿಕೋರರು ಲೂಟಿ ಮಾಡಿದ ಹಣವನ್ನೆಲ್ಲಾ ಶೇಖರಿಸಿದರೆ ಎಲ್ಲರ ಖಾತೆಗೆ 15 ಲಕ್ಷ ರೂ. ಹಾಕಬಹುದು ಎಂದಷ್ಟೇ ಹೇಳಿದ್ದಾರೆ. ಆದರೆ ವಿರೋಧ ಪಕ್ಷದವರು ಈ ವಿಷಯದಲ್ಲಿ ವಿನಾಕಾರಣ ಆರೋಪ ಮಾಡುತ್ತಿವೆ ಎಂದು ಉಪಾಧ್ಯಾಯ ಆಕ್ಷೇಪಿಸಿದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.