ಚಿತ್ರದುರ್ಗಕ್ಕೆ ಭೇಟಿ ನೀಡಿದ ನರೇಂದ್ರ ಮೋದಿ ಪತ್ನಿ ಜಶೋದಾ ಬೆನ್
Team Udayavani, Mar 4, 2020, 10:33 AM IST
ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋದಾ ಬೆನ್ ಬುಧವಾರ ಬೆಳಗ್ಗೆ ನಗರದ ನೀಲಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಶಿವಮೊಗ್ಗ ಜಿಲ್ಲೆ ರಾಮಚಂದ್ರಾಪುರ ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುವ ವೇಳೆ ಮಾರ್ಗ ಮಧ್ಯೆ ಚಿತ್ರದುರ್ಗಕ್ಕೆ ಭೇಟಿ ನೀಡಿದರು.
ನೀಲಕಂಠೇಶ್ವರ ದೇವರಿಗೆ ಅಭಿಷೇಕ, ಅಷ್ಟೋತ್ತರ, ಮಹಾ ಮಂಗಳಾರತಿ ಪಡೆದರು. ಈ ವೇಳೆ ಮೋದಿ ಸೇರಿದಂತೆ ಇಡೀ ಪರಿವಾರಕ್ಕೆ ದೇವರ ಅನುಗ್ರಹ ಬೇಡಿದರು ಎನ್ನಲಾಗಿದೆ.
ನೀಲಕಂಠೇಶ್ವರ ದೇವರ ದರ್ಶನದ ನಂತರ ನಗರದ ಪ್ರವಾಸಿ ಮಂದಿರಕ್ಕೆ ತೆರಳಿ ಉಪಹಾರ ಸೇವನೆ ಮಾಡಿದರು.
ಶಿವನ ದರ್ಶನವಾಗದೆ ನೀರೂ ಕುಡಿಯಲ್ಲ:
ಜಶೋದಾ ಬೆನ್ ಪ್ರತಿ ದಿನ ಬೆಳಗ್ಗೆ ಶಿವನ ದರ್ಶನ ಮಾಡದ ಹೊರತು ಒಂದು ಹನಿ ನೀರನ್ನೂ ಸೇವಿಸುವುದಿಲ್ಲವಂತೆ. ಜಶೋದಾ ಬೆನ್ ಜತೆ ಕಾರಿನಲ್ಲಿ ಆಗಮಿಸಿದವರು ದೇವಸ್ಥಾನದ ಎದುರು ಕಾರು ನಿಲುತ್ತಿದ್ದಂತೆ ಇದು ಶಿವನ ದೇವಸ್ಥಾನವಾ ಎಂದು ಖಚಿತಪಡಿಸಿಕೊಂಡರು. ನೀಲಕಂಠೇಶ್ವರ ದೇವಸ್ಥಾನ ಎಂದು ತಿಳಿಸಿದಾಗ, ಜಶೋದಾ ಅವರು ಶಿವನ ದರ್ಶನ ಮಾಡದೆ ಏನನ್ನೂ ಸೇವಿಸುವುದಿಲ್ಲ, ನೀರನ್ನೂ ಕುಡಿಯುವುದಿಲ್ಲ ಎಂದು ತಿಳಿಸಿದರು.
ದೇವರ ದರ್ಶನದ ನಂತರ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಜಶೋದಾ ಬೆನ್ ಉಪಹಾರ ಸೇವನೆಗೆ ಮುನ್ನಾ ಅರಳಿ ಮರಕ್ಕೆ ಪ್ರದಕ್ಷಿಣೆ ಮಾಡಲು ಪ್ರವಾಸಿ ಮಂದಿರದ ಆವರಣದಲ್ಲಿ ಮರಕ್ಕೆ ಹುಡುಕಾಡಿದರು. ಕೊನೆಗೆ ಪ್ರವಾಸಿ ಮಂದಿರದ ಹಿಂಭಾಗದಲ್ಲಿದ್ದ ಹತ್ತಿ ಮರಕ್ಕೆ ಕೈ ಮುಗಿದು ಉಪಹಾರ ಸೇವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು