ಡಿಸಿಎಂ ಹುದ್ದೆ ಮಾಧ್ಯಮಗಳ ಸೃಷ್ಟಿ
Team Udayavani, May 10, 2018, 6:45 AM IST
ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ): ಬಿಜೆಪಿ ಸರಕಾರದಲ್ಲಿ ನಾನು ಉಪಮುಖ್ಯಮಂತ್ರಿಯಾಗಲಿದ್ದೇನೆ ಎಂಬುದು ಮಾಧ್ಯಮಗಳ ಸೃಷ್ಟಿ ಎಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ಸಮೀಪದ ನಲಗೇತನಹಟ್ಟಿಯಲ್ಲಿ ನಡೆದ ಚುನಾ ವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಸದ್ಯಕ್ಕೆ ಪಕ್ಷದ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸಲು ಸಿದ್ಧನಿದ್ದೇನೆ ಎಂದರು.
ಶ್ರೀರಾಮುಲು ತಂಗಿದ್ದ ಹೊಟೇಲ್ ಮೇಲೆ ಐಟಿ ದಾಳಿ: ಬಾದಾಮಿಯಲ್ಲಿ ಚುನಾವಣಾ ಅಧಿಕಾರಿಗಳು ಶ್ರೀರಾಮುಲು ವಾಸ್ತವ್ಯ ಹೂಡುತ್ತಿದ್ದ ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ. ಬಾದಾಮಿ ಹೊರವಲ ಯದಲ್ಲಿರುವ ಹೊಟೇಲ್ನಲ್ಲಿ ಮಂಗಳವಾರ ತಡರಾತ್ರಿ ಅ ಧಿಕಾರಿಗಳು ಪರಿಶೀಲನೆ ನಡೆಸಿದರು. ಹೊಟೇಲ್ ನೋಂದಣಿ ಮಾಡಿದ ಬಗ್ಗೆ ಚುನಾವಣಾಧಿಕಾರಿ ಪಿ.ರಮೇಶಕುಮಾರ ನೇತೃತ್ವ ದಲ್ಲಿ ಪರಿಶೀಲನೆ ನಡೆಸಲಾಯಿತು. ಹೋಟೆಲ್ ರೂಂ ನಲ್ಲಿರುವ ಬೆಡ್ ಸಹಿತ ಎಲ್ಲೆಡೆ ಅಧಿಕಾರಿಗಳು ಜಾಲಾಡಿದರು. ಆದರೆ, ನಗದು ಸಿಕ್ಕಿರುವ ಮಾಹಿತಿ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ