ಜನಸಾಮಾನ್ಯರಲ್ಲಿ ಕೊರೊನಾ ಜಾಗೃತಿ ಮೂಡಿಸಿ
Team Udayavani, Apr 7, 2020, 4:29 PM IST
ಮೊಳಕಾಲ್ಮೂರು: ಆಶಾ ಕಾರ್ಯಕರ್ತೆಯರಿಗೆ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ ಕರಪತ್ರ ವಿತರಿಸಿದರು.
ಮೊಳಕಾಲ್ಮೂರು: ತಾಲೂಕಿನ ಸಾರ್ವಜನಿಕ ಬಸ್ ನಿಲ್ದಾಣ, ಆಸ್ಪತ್ರೆಗಳು, ಅಂಗನವಾಡಿ ಕೇಂದ್ರಗಳು
ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ವೈರಸ್ನ ಭಿತ್ತಿ ಪತ್ರ ಹಚ್ಚುವ ಜೊತೆಗೆ ಕರ ಪತ್ರಗಳನ್ನು ಮನೆ ಮನೆಗೆ ಹಂಚುವ ಮೂಲಕ ಜನಸಾಮಾನ್ಯರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ ತಿಳಿಸಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಕೊರೊನಾ ವೈರಸ್ ಸೋಂಕಿನ ಬಿತ್ತಿ ಪತ್ರ ಮತ್ತು ಕರಪತ್ರ ತಾಲೂಕಿನ ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರಿಗೆ ವಿತರಿಸಿ ಅವರು ಮಾತನಾಡಿದರು. ತಾಲೂಕಿನ ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಕೊರೊನಾ ವೈರಸ್ ನ ಕರಪತ್ರಗಳನ್ನು ಹಂಚಿ, ಕೊರೊನಾ ವೈರಸ್ ಹರಡದಂತೆ ಜಾಗೃತಿ ಮೂಡಿಸುವುದು ಆದ್ಯ ಕರ್ತವ್ಯವಾಗಿದೆ. ಜಾಗೃತಿ ಮೂಡಿಸುವಾಗ ಸಾಮಾಜಿಕ ಅಂತರ ಕಾಪಾಡುವಂತೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ಗ್ರಾ.ಪಂಗಳಲ್ಲಿ 14ನೇ ಹಣಕಾಸಿನ ಅನುದಾನ ಬಳಸಿ 60 ವರ್ಷದವರು ಮತ್ತು ದೀರ್ಘ ಕಾಯಿಲೆಯವರಿಗೆ ಉಚಿತ ಮಾಸ್ಕ್ ಸೌಲಭ್ಯ ಕಲ್ಪಿಸಬಹುದಾಗಿದೆ. ತಾಲೂಕಿನಲ್ಲಿ ಸರ್ವೇ ಮಾಡಿಸಿ 1,469ರ ಜನರ ಮೇಲೆ ನಿಗಾ ವಹಿಸಲಾಗಿದೆ. ತಾಲೂಕಿಗೆ ವಿದೇಶದಿಂದ ಬಂದ 5 ಜನರ ಕ್ವಾರೆಂಟೈನ್ ಅವಧಿ ಮುಗಿದಿದೆ. ಹೊರಜಿಲ್ಲೆಗಳಿಂದ ಹಾಗೂ ಹೊರರಾಜ್ಯಗಳಿಂದ 1,469 ಜನರು ಬಂದಿದ್ದು, ಅವರ ಮೇಲೆ ನಿಗಾವಹಿಸಲಾಗುವುದು ಎಂದು ತಿಳಿಸಿದರು. ಪ್ರಭಾರೆ ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕರಾದ ತಿಪ್ಪೇಸ್ವಾಮಿ, ಶ್ರೀನಿವಾಸ್, ಆಶಾ ಮೇಲ್ವಿಚಾರಕಿ ಉಷಾ, ಎಲ್.ಎಚ್.ಎಂ. ಸವಿತಾ, ಆರ್ಬಿಎಸ್ಕೆ ವೈದ್ಯಾಧಿಕಾರಿ ಡಾ| ಗೋವಿಂದರಾಜು, ಡಾ| ರಾಘವೇಂದ್ರ ಬಾಬು, ಆರೋಗ್ಯ ಸಹಾಯಕರು ಮತ್ತು ಆಶಾ ಸುಗಮಕಾರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ