ಮೊಳಕಾಲ್ಮೂರು: ಹೊರ ರಾಜ್ಯದಿಂದ ಬಂದ 6 ಜನರಿಗೆ ಸಾಂಸ್ಥಿಕ ಕ್ವಾರಂಟೈನ್
Team Udayavani, May 18, 2020, 12:58 PM IST
ಸಾಂದರ್ಭಿಕ ಚಿತ್ರ
ಮೊಳಕಾಲ್ಮೂರು: ತಾಲೂಕಿಗೆ ಹೊರ ರಾಜ್ಯಗಳಿಂದ ಆಗಮಿಸಿದ್ದ 6 ಜನ ಸ್ಥಳೀಯರನ್ನು ತಾಲೂಕು ಆಡಳಿತ ಪಟ್ಟಣದ ಆರ್.ಎಂ.ಎಸ್.ಎ ಬಾಲಕಿಯರ ವಸತಿನಿಲಯದಲ್ಲಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿಟ್ಟಿದೆ.
ಚಳ್ಳಕೆರೆ ತಾಲೂಕು ಕೋಡಿಹಳ್ಳಿಯಲ್ಲಿ ಪತ್ತೆಯಾಗಿರುವ ಸೋಂಕಿತ ವ್ಯಕ್ತಿ, ತಾಲೂಕಿನ ವಿವಿಧ ಗ್ರಾಮಗಳಿಗೆ ಬಂದಿರುವ ಭೀತಿಯ ಬೆನ್ನಲ್ಲೇ ಹೊರ ರಾಜ್ಯಗಳಿಂದ ಬಂದ 6 ಜನ ಸ್ಥಳೀಯರನ್ನು ತಾಲೂಕು ಆಡಳಿತ ಪತ್ತೆ ಹಚ್ಚಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿಟ್ಟಿದೆ. ಆಂಧ್ರಪ್ರದೇಶದ ಧರ್ಮವರಂನಿಂದ ಮಹಿಳೆ, ಪೆರಗುಪಾಳ್ಯದಿಂದ ಒಬ್ಬ ಪುರುಷ, ಹೈದರಾಬಾದ್ ನಿಂದ ಒಬ್ಬ ಪುರುಷ, ದೆಹಲಿಯಿಂದ ಇಬ್ಬರು ಪುರುಷರು ಹಾಗೂ ಚೆನ್ನೈನಿಂದ ಒಬ್ಬ ಪುರುಷ ಸೇರಿದಂತೆ ಒಟ್ಟು 6 ಜನರು ಮೇ 16 ರಂದು ಆಗಮಿಸಿದ್ದರು. ಈ ಮಾಹಿತಿ ಆಧರಿಸಿ ತಹಶೀಲ್ದಾರ್ ಎಂ. ಬಸವರಾಜ್ ಹಾಗೂ ಸಿಬ್ಬಂದಿ ಪೊಲೀಸರ ಸಹಕಾರದೊಂದಿಗೆ ಅವರೆಲ್ಲರನ್ನೂ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇಟ್ಟಿದ್ದಾರೆ. ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ, ಜಿಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ, ಕ್ಷೇತ್ರ ಶಿಕ್ಷಣಾ ಧಿಕಾರಿ ಎನ್. ಸೋಮಶೇಖರ್, ಅಕ್ಷರ ದಾಸೋಹದ ಪಾತಲಿಂಗಪ್ಪ, ಕೆ.ಎಚ್. ಸಣ್ಣಯಲ್ಲಪ್ಪ, ಜಿಲ್ಲಾ ಆರೋಗ್ಯ ಮೇಲ್ವಿಚಾರಕರಾದ ಶ್ರೀನಿವಾಸ್, ತಿಪ್ಪೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ