ಜನವಸತಿಗೆ ಕಂಟಕವಾದ ಕಲ್ಲು ಸ್ಪೋಟ!

ರೈಲ್ವೆ ಅಂಡರ್‌ಪಾಸ್‌ ಕಾಮಗಾರಿಗೆ ಕಲ್ಲು ಸ್ಫೋಟಿಸಿದ್ದರಿಂದ ಕಟ್ಟಡ-ಮನೆಗಳಲ್ಲಿ ಬಿರುಕು

Team Udayavani, Feb 29, 2020, 12:40 PM IST

29-February-11

ಮೊಳಕಾಲ್ಮೂರು: ಪಟ್ಟಣದ ಜನವಸತಿ ಬಡಾವಣೆಯೊಂದರ ಬಳಿ ರೈಲ್ವೆ ಅಂಡರ್‌ಪಾಸ್‌ ಕಾಮಗಾರಿ ನಡೆಯುತ್ತಿದೆ. ಆದರೆ ಆ ಸ್ಥಳದಲ್ಲಿ ಕಲ್ಲುಗಳನ್ನು ಒಡೆಯಲು ಅನುಮತಿ ಪಡೆಯದೇ ಸಿಡಿಮದ್ದು ಸಿಡಿಸಿದ್ದರಿಂದ ಭೂಮಿ ಕಂಪಿಸಿ ಕಲ್ಲುಗಳು ಮನೆಗಳ ಮೇಲೆ ಬಿದ್ದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಾಸದ ಮನೆಗಳು ಮತ್ತು ವ್ಯಾಪಾರಿ ಮಳಿಗೆಗಳು ಹಾನಿಗೊಳಗಾಗಿವೆ.

ಸ್ಥಗಿತಗೊಂಡಿದ್ದ ಅಂಡರ್‌ಪಾಸ್‌ ಕಾಮಗಾರಿಯನ್ನು ರೈಲ್ವೆ ಇಲಾಖೆಯವರು ಮತ್ತೆ ಆರಂಭಿಸಿದ್ದರು. ಆದರೆ ಈ ಕಾಮಗಾರಿ ಸ್ಥಳದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುಮತಿ ಪಡೆಯದೆ ಫೆ.24 ರಂದು ಸಿಡಿಮದ್ದನ್ನು ಬಳಸಿ ಕಲ್ಲು ಗುಂಡು ಸಿಡಿಸಿದ್ದರಿಂದ ಭೂಮಿ ಕಂಪಿಸಿತ್ತು. ಅಲ್ಲದೆ ಸಿಡಿದ ಕಲ್ಲುಗಳು ಸ್ಥಳೀಯರ ಮನೆಗಳ ಮೇಲೆ ಬಿದ್ದ ಪರಿಣಾಮ ಗೋಡೆಗಳು ಬಿರುಕು ಬಿಟ್ಟು ಹೆಚ್ಚಿನ ಪ್ರಮಾಣದಲ್ಲಿ ಹಾನಿಗೀಡಾಗಿವೆ.

ಜನವಸತಿ ಪ್ರದೇಶದಲ್ಲಿ ಸಿಡಿಮದ್ದನ್ನು ಬಳಸುವಂತಿಲ್ಲ ಎಂಬ ನಿಯಮ ಉಲ್ಲಂಘಿಸಿ ಸಿಡಿಮದ್ದು ಸಿಡಿಸಿದ್ದರಿಂದ ಭೂಕಂಪನ ಉಂಟಾಗಿ ಕಲ್ಲುಗಳು ಮನೆಗಳಿಗೆ ಬಿದ್ದಿವೆ. ಕಲ್ಲು ಒಡೆಯಲು ಉತ್ತಮ ತಂತ್ರಜ್ಞಾನದ ಮಿಷನ್‌ಗಳಿದ್ದರೂ ಅವುಗಳನ್ನು ಬಳಸದೆ ಸಿಡಿಮದ್ದು ಸಿಡಿಸಿರುವುದು ಹಾನಿಗೆ ಕಾರಣವಾಗಿದೆ.

ಮಳೆಗಾಲದಲ್ಲಿ ಮಳೆ ನೀರು ಇಳಿದು ಗೋಡೆಗಳಲ್ಲಿ ಬಿರುಕು ಮೂಡಿದರೆ ಕಟ್ಟಡವೇ ಕುಸಿದರೂ ಅಚ್ಚರಿ ಇಲ್ಲ. ರೈಲ್ವೆ ಅಂಡರ್‌ ಪಾಸ್‌ ಕಲ್ಲು ಸಿಡಿತದಿಂದ ಸಮೀಪದ ಎನ್‌.ಐ. ಬಡಾವಣೆ ನಿವಾಸಿಯಾದ ದೈಹಿಕ ಶಿಕ್ಷಕ ಕೆ. ಶಾಂತವೀರಣ್ಣರವರ ಲಕ್ಷಾಂತರ ರೂ. ಮೌಲ್ಯದ ಮನೆ, ಹೀರೋ ಹೊಂಡಾ ಬೈಕ್‌ ಶೋರೂಂಗಳ ಕಟ್ಟಡ ಹಾಗೂ ವ್ಯಾಪಾರೋದ್ಯಮಿ ಅಬ್ದುಲ್‌ ಖಾದರ್‌ ವಾಸದ ಮನೆ ಮತ್ತು ವ್ಯಾಪಾರಿ ಮಳಿಗೆಗಳಿಗೆ ಸಾಕಷ್ಟು ಹಾನಿಯಾಗಿವೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಅಭಿಯಂತರ ಜಗದೀಶ್‌ ಭೇಟಿ ನೀಡಿ ಪರಿಶೀಲಿಸಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದೆಂದು ಭರವಸೆ ನೀಡಿದ್ದಾರೆ.

ಸಿಡಿಮದ್ದು ಬಳಸದಂತೆ ತಹಶೀಲ್ದಾರರು ಸೂಚನೆ ನೀಡಿದ್ದರೂ ಸಿಡಿಮದ್ದು ಬಳಸಿ ಕಟ್ಟಡಗಳ ಹಾನಿಗೆ ಕಾರಣವಾಗಿರುವ ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿ ಪರಿಶೀಲಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ರೈಲ್ವೆ ಇಲಾಖೆಯ ಗುತ್ತಿಗೆದಾರರಿಗೆ ಸಿಡಿಮದ್ದನ್ನು ಬಳಸದೆ ಕಾಮಗಾರಿ ಮಾಡುವಂತೆ ಸೂಚಿಸಿದ್ದರೂ ಗುತ್ತಿಗೆದಾರರು ಸಿಡಿಮದ್ದನ್ನು ಬಳಸಿದ್ದಾರೆ. ಇದರಿಂದ ಸ್ಥಳೀಯರ ವಾಸದ ಮನೆ ಮತ್ತು ವ್ಯಾಪಾರಿ ಮಳಿಗೆಗಳಿಗೆ ಹಾನಿಯಾಗಿದ್ದು, ಕೂಡಲೇ ಮೇಲಾಧಿ ಕಾರಿಗಳಿಗೆ ವರದಿ ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಜಗದೀಶ್‌,
ರೈಲ್ವೆ ಇಲಾಖೆ ಅಭಿಯಂತರರು, ಚಿತ್ರದುರ್ಗ

ಸಿಡಿಮದ್ದಿನಿಂದ ಮನೆ ಹಾನಿಗೊಳಗಾಗಿರುವುದು ಇಡೀ ಕುಟುಂಬವನ್ನು ದಿಗ್ಭ್ರಾಂತವನ್ನಾಗಿಸಿದೆ. ಜನವಸತಿ ಪ್ರದೇಶದಲ್ಲಿ ಸಿಡಿಮದ್ದನ್ನು ಬಳಸಬಾರದೆಂಬ ನಿಯಮವಿದ್ದರೂ ರೈಲ್ವೆ ಇಲಾಖೆಯವರು ಅದನ್ನು ಉಲ್ಲಂಘಿಸಿ ಸಿಡಿಮದ್ದನ್ನು ಸಿಡಿಸಿ ಲಕ್ಷಾಂತರ ರೂ. ಮೌಲ್ಯದ ಕಟ್ಟಡಗಳ ಹಾನಿಗೆ ಕಾರಣವಾಗಿರುವುದು ಆತಂಕಕ್ಕೀಡು ಮಾಡಿದೆ.
ಕೆ.ಶಾಂತವೀರಣ್ಣ,
 ದೈಹಿಕ ಶಿಕ್ಷಕರು

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.