ಮಹಾಸಾಧ್ವಿಯ ಕೊಡುಗೆ ಅಪಾರ: ಶ್ರೀರಾಮ ರೆಡ್ಡಿ ಬಣ್ಣನೆ
Team Udayavani, May 11, 2020, 5:07 PM IST
ಮೊಳಕಾಲ್ಮೂರು: ಪಟ್ಟಣದ ತಾಲೂಕು ಕಚೇರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು
ಮೊಳಕಾಲ್ಮೂರು: ರೆಡ್ಡಿ ಸಮುದಾಯದ ಏಳ್ಗೆಗೆ ಶ್ರಮಿಸಿದ ಹೇಮರೆಡ್ಡಿ ಮಲ್ಲಮ್ಮಳ ತತ್ವಾದರ್ಶಗಳನ್ನು ಪಾಲಿಸಿ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕೆಂದು ರೆಡ್ಡಿ ಸಮಾಜದ ತಾಲೂಕು ಅಧ್ಯಕ್ಷ ಕೆ.ಟಿ. ಶ್ರೀರಾಮ ರೆಡ್ಡಿ ಹೇಳಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 13ನೇ ಶತಮಾನದಲ್ಲೇ ರೆಡ್ಡಿ ಸಮುದಾಯದ ಕುರುಹು ಇತ್ತು ಎಂಬುದಲ್ಲೆ ಹೇಮರೆಡ್ಡಿ ಮಲ್ಲಮ್ಮಳೇ ಸಾಕ್ಷಿ. ರೆಡ್ಡಿ ಸಮುದಾಯಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾಳೆ. ಉತ್ತಮ ಗೃಹಿಣಿಯಾಗಿ ನೀಡಿದ ಕೆಲಸವನ್ನು ಶಿಸ್ತು ಮತ್ತು ಪ್ರಾಮಾಣಿಕವಾಗಿ ನಿರ್ವಹಿಸಿ ಇಡೀ ಸಮಾಜಕ್ಕೆ ಮಾದರಿಯಾಗಿದ್ದಾಳೆ ಎಂದರು.
ರೆಡ್ಡಿ ಸಮುದಾಯದ ಮುಖಂಡ ಸೋಮರೆಡ್ಡಿ ಮಾತನಾಡಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಮಾಜದ ಏಳ್ಗೆಗೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾಳೆ. ವಚನ ಸಾಹಿತ್ಯವನ್ನು ತನ್ನ ಮೈದುನನ ಮೂಲಕ ಸಮಾಜಕ್ಕೆ ತಿಳಿಸಿ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದಾಳೆ ಎಂದು ಸ್ಮರಿಸಿದರು.
ಉಪ ತಹಶೀಲ್ದಾರ್ ಏಳುಕೋಟಿ, ಶಿಕ್ಷಕ ಓಬಣ್ಣ, ಮುಖಂಡರಾದ ಶಿವಾ ರೆಡ್ಡಿ, ಹನುಮಂತ ರೆಡ್ಡಿ, ನರಸಿಂಹ ರೆಡ್ಡಿ, ಪಲ್ಲಕ್ಕಿ ರೆಡ್ಡಿ, ಭೀಮಾ ರೆಡ್ಡಿ, ಲಕ್ಷ್ಮಣ ರೆಡ್ಡಿ, ಸುರೇಶಬಾಬು, ಶಂಕರ್ ನಾಗ್, ನವೀನ್, ರಂಗನಾಥ, ತಾಲೂಕು ಕಚೇರಿ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು