ಅನಾರೋಗ್ಯದ ಕಾರಣಕ್ಕೆ ಹೆತ್ತ ಕಂದನನ್ನು ನೀರಿನಲ್ಲಿ ಮುಳುಗಿಸಿ ಕೊಂದು ನೇಣಿಗೆ ಶರಣಾದ ತಾಯಿ
Team Udayavani, Feb 25, 2020, 10:48 AM IST
ಚಿತ್ರದುರ್ಗ: ಹೆತ್ತ ತಾಯಿಯೇ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಹೊಳಲ್ಕೆರೆ ತಾಲೂಕಿನ ಐನಹಳ್ಳಿಯಲ್ಲಿ ನಡೆದಿದೆ.
ಹತ್ತು ತಿಂಗಳ ಹೆಣ್ಣು ಮಗುವನ್ನು ನೀರಿನ ಟಬ್ ನಲ್ಲಿ ಮುಳುಗಿಸಿ ಕೊಂದ ಬಳಿಕ ತಾನೂ ನೇಣಿಗೆ ಶರಣಾಗಿದ್ದಾಳೆ.
ಹೆರಿಗೆ ಬಳಿಕ ಆಗಾಗ ಕಾಣಿಸಿಕೊಳ್ಳುತ್ತಿದ್ದ ನೋವು ಹಾಗೂ ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತ ಆಶಾಬಾಯಿ (24) ಡೆತ್ ನೋಟ್ ಬರೆದಿಟ್ಟಿದ್ದಾರೆ.
ತನ್ನ ಸಾವಿನ ಬಳಿಕ ಮಗು ಅನಾಥವಾಗಬಾರದು ಎಂಬ ಕಾರಣಕ್ಕೆ ಮಗುವನ್ನು ಹತ್ಯೆ ಮಾಡುತ್ತಿರುವುದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಹೊಳಲ್ಕೆರೆ ಲಂಬಾಣಿಹಟ್ಟಿಯ ಹೇಮಂತ್ ಜತೆ ಎರಡು ವರ್ಷದ ಹಿಂದೆ ಆಶಾಬಾಯಿ ಪ್ರೀತಿಸಿ ಮದುವೆಯಾಗಿದ್ದರು.
ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ