ಬಿಜೆಪಿ ಸಾಮಾನ್ಯ ಕಾರ್ಯಕರ್ತನ ಗುರುತಿಸುವ ಪಕ್ಷ


Team Udayavani, Feb 27, 2021, 3:59 PM IST

MP A Narayanaswami

ಚಳ್ಳಕೆರೆ: ವಿರೋಧ ಪಕ್ಷಗಳ ಸುಳ್ಳು ಆರೋಪದ ನಡುವೆಯೂ ಸಹ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರಾಗಿದ್ದು, ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ದಾಖಲಿಸುವ ಹಾದಿಯಲ್ಲಿ ಕಾರ್ಯಕರ್ತರ ಪಡೆ ಕಾರ್ಯನಿರ್ವಹಿಸಬೇಕು ಎಂದು ಸಂಸದ ಎ.ನಾರಾಯಣಸ್ವಾಮಿ ತಿಳಿಸಿದರು.

ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ 2ನೇ ಕಾರ್ಯಕಾರಿ ಸಮಿತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಗೆಲುವು ಸಾಧಿ ಸಬೇಕಾದರೆ ಆ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಜನಸಾಮಾನ್ಯರಲ್ಲಿ ಹೆಚ್ಚಿನ ಅರಿವು ಮೂಡಬೇಕಿದೆ. ಜನರು ಬಯಸುವಂತಹ ಆಡಳಿತವನ್ನು ನೀಡಬೇಕಿದೆ. ಅರಿವು ಮೂಡಿಸುವ ಕಾರ್ಯದಲ್ಲಿ ಕಾರ್ಯಕರ್ತರು ಮುಖಂಡರು ಕಾರ್ಯನಿರ್ವಹಿಸುವಂತೆ ಉತ್ತಮ ಆಡಳಿತಕ್ಕಾಗಿ ಚುನಾಯಿತ ಪಕ್ಷದ ಎಲ್ಲಾ ಸದಸ್ಯರು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ರಾಜ್ಯ ಬಿಜೆಪಿ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ತುಳಸಿಮುನಿರಾಜು ಮಾತನಾಡಿ, ಬಿಜೆಪಿ ಜನಪ್ರಿಯ ಕಾರ್ಯಕ್ರಮಗಳು ಎಲ್ಲಾ ಮತದಾರರ ಅಂತರಂಗದಲ್ಲಿ ಭದ್ರವಾಗಿ ನೆಲೆಯೂರಿವೆ. ಕಳೆದ ಹಲವಾರು ದಶಕಗಳಿಂದ ಬಿಜೆಪಿ ಸಮಾಜದ ಎಲ್ಲಾ ವರ್ಗಗಳ ಹಿತವನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ನಿರತವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸದಾಕಾಲ ಜನಪರ ಯೋಜನೆಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಡಳಿತದಲ್ಲಿ ರಾಷ್ಟ್ರದಲ್ಲಿ ನಡೆದ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿ ಸಿದೆ ಎಂದರು.

ರಾಜ್ಯ ಕಾರ್ಯದರ್ಶಿ ಕೆ.ಎಸ್‌.ನವೀನ್‌ ಮಾತನಾಡಿ, ಹದಿನೈದು ದಿನಗಳ ಒಳಗೆ ಜಿಲ್ಲಾ, ತಾಪಂ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಮಾರ್ಗದರ್ಶನದಲ್ಲಿ ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿದೆ ಎಂದರು.

ಹಿರಿಯ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಮಾತನಾಡಿ, ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಸಾಧಿ ಸಿದ ಗೆಲುವು ಜಿಲ್ಲಾ ಹಾಗೂ ತಾಪಂ ಚುನಾವಣೆಗೆ ರಹದಾರಿಯಾಗಿದೆ. ಪಕ್ಷಕ್ಕಾಗಿ ನಿರಂತರವಾಗಿ ದುಡಿದ ಕಾರ್ಯಕರ್ತರಿಗೆ ಟಿಕೇಟ್‌ ನೀಡಬೇಕೆಂದು ನಾನು ಪಕ್ಷವನ್ನು ಒತ್ತಾಯಿಸುತ್ತೇನೆ ಎಂದರು. ಹೊಸದುರ್ಗ ಶಾಸಕ ಗೂಳಿಹಟ್ಟಿಶೇಖರ್‌ ಮಾತನಾಡಿದರು. ಜಿಲ್ಲಾಧ್ಯಕ್ಷ ಎ.ಮುರಳಿ ಯಾದವ್‌ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಪಿ.ಜಯಪಾಲಯ್ಯ, ಸುರೇಶ್‌, ರಾಜೇಶ್‌, ಸೂರನಹಳ್ಳಿ ಶ್ರೀನಿವಾಸ್‌, ಶಂಕರಣ್ಣ, ವಿಭಾಗೀಯ ಉಸ್ತುವಾರಿ ಜಿ.ಎಂ.ಸುರೇಶ್‌, ನಗರಸಭಾ ಸದಸ್ಯರಾದ ಎಸ್‌.ಜಯಣ್ಣ, ಇಂದುಮತಿ ಜಗದೀಶ್‌, ಸಿ.ಎಸ್‌.ಪ್ರಸಾದ್‌, ಡಿ.ಎಂ.ತಿಪ್ಪೇಸ್ವಾಮಿ, ಮೋಹನ್‌, ಶಿವಕುಮಾರ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.