ಮುರುಘಾ ಮಠದ ಸೊಬಗು ಪ್ರವಾಸಿಗರ ಬೆರಗು


Team Udayavani, Aug 16, 2022, 7:30 AM IST

Add thumb-2

ನಾಡಿನ ಮಠ ಪರಂಪರೆಗಳಲ್ಲಿ ಅಗ್ರ ಸ್ಥಾನದಲ್ಲಿರುವ ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠ ದಿನೇ-ದಿನೇ ಭಕ್ತರ ಜೊತೆಗೆ ಪ್ರವಾಸಿಗರಿಗೂ ಅಚ್ಚುಮೆಚ್ಚಿನ ತಾಣವಾಗುತ್ತಿದೆ.

ಧಾರ್ಮಿಕ ನೇತೃತ್ವದ ಜೊತೆ ಜೊತೆಗೆ ಡಾ|ಶ್ರೀ ಶಿವಮೂರ್ತಿ ಮುರುಘಾ ಶರಣರು, ಹಿಂದುಳಿದ ಚಿತ್ರದುರ್ಗ ಜಿಲ್ಲೆಯನ್ನು ಅತ್ಯುತ್ತಮ ಪ್ರವಾಸಿ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡು ಅನುಷ್ಠಾನಕ್ಕೆ ತರುತ್ತಿದ್ದಾರೆ.

ಚಿತ್ರದುರ್ಗದ ಐತಿಹಾಸಿಕ ಕೋಟೆಯ ವೀಕ್ಷಣೆಗೆ ಬರುವ ಪ್ರವಾಸಿಗರು ಮುರುಘಾ ಮಠದ ಶ್ರೀಗಳ ಆಶೀರ್ವಾದ ಹಾಗೂ ಅದರ ಸೊಬಗ ಸವಿಯುವುದನ್ನು ಮರೆಯದಂತೆ ಮಠ ರೂಪುಗೊಂಡಿದೆ. ಶ್ರೀಗಳು ದೇಶ-ವಿದೇಶಗಳಲ್ಲಿ ಪ್ರವಾಸ ಮಾಡುವ ವೇಳೆ ಉತ್ತಮ ಸಂಗತಿಗಳನ್ನು ಪಟ್ಟಿ ಮಾಡಿಕೊಂಡು ಬಂದು ಇಲ್ಲಿ ಅಳವಡಿಸುವ ಮೂಲಕ ಮಧ್ಯ ಕರ್ನಾಟಕದಲ್ಲಿರುವ ಹೆಮ್ಮೆಯ ಮುರುಘಾ ಮಠ ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತೆ ಮಾಡಿದ್ದಾರೆ.

ಮುರುಘಾ ಶ್ರೀ ಮ್ಯೂಸಿಯಂ: ಮುರುಘಾ ಶ್ರೀಗಳ ವಿಶಿಷ್ಟ ಆಲೋಚನೆಯ ಫಲವಾಗಿ ದೇಶದಲ್ಲೇ ಅತ್ಯುತ್ತಮ ಎನ್ನಿಸುವಂತಹ ವಸ್ತು ಸಂಗ್ರಹಾಲಯ ಮಠದ ಆವರಣದಲ್ಲಿ ಮೈದಳೆದು ನಿಂತಿದೆ. ಮಠದಲ್ಲಿದ್ದ ಹಾಗೂ ಶ್ರೀಗಳು ಪ್ರವಾಸದ ಸಂದರ್ಭದಲ್ಲಿ ಸಂಗ್ರಹಿಸಿದ ವಸ್ತುಗಳೂ ಒಳಗೊಂಡಂತೆ ಎಲ್ಲ ಪ್ರಾಚ್ಯ ವಸ್ತುಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಶ್ರೀಗಳು ರೂಪಿಸಿರುವ ಮ್ಯೂಸಿಯಂ ಒಂದು ಅಧ್ಯಯನ ಕೇಂದ್ರವೂ ಆಗಿದೆ.

ಕ್ರಿ.ಶ. 1 ರಿಂದ 16ನೇ ಶತಮಾನದವರೆಗಿನ ನಾಣ್ಯಗಳು, ಪಂಚಲೋಹದಲ್ಲಿ ತಯಾರಾದ ಶಿವ ಪಾರ್ವತಿಯರ ಜತೆಗೆ ಗಣೇಶನಿರುವ ಶಿಲ್ಪ, ದುರ್ಗಾದೇವಿ, ಸರಸ್ವತಿ, ಲಕ್ಷ್ಮೀ, ವಿಷ್ಣು, ಲಕ್ಷ್ಮೀ ನರಸಿಂಹ, ಕುದುರೆಗಳು, ಚಲಿಸುವ ಭಂಗಿಯ ಆನೆಗಳು, ವೀರಗಲ್ಲು, ಮಾಸ್ತಿಕಲ್ಲು, ನಂದಿ, ಸಪ್ತ ಮಾತೃಕೆಯರು, ಬೃಹತ್‌ ಗಾತ್ರದ ಬಾಗಿಲು, ಮಂಚ, ಹಿಂದಿನ ಶ್ರೀಗಳು ಬಳಕೆ ಮಾಡಿರುವ ಅಮೂಲ್ಯವಾದ ವಸ್ತುಗಳು, ಹಲವು ಹಸ್ತಪ್ರತಿಗಳು, ಆಯುಧಗಳು ಹೀಗೆ ನೂರಾರು ವಸ್ತುಗಳು ಮ್ಯೂಸಿಯಂನ ಅಂದವನ್ನು ಹೆಚ್ಚಿಸಿವೆ.

ಮುರುಘಾ ಮಠದ ಉದ್ಯಾನದಲ್ಲಿ ಆದಿ ಮಾನವನಿಂದ ಆಧುನಿಕ ಮಾನವನ ಹಂತದವರೆಗೆ ನಡೆದು ಬಂದ ವಿಕಾಸ ಪ್ರಕ್ರಿಯೆ ಹಾಗೂ ಕಾಯಕ ಸಂಸ್ಕೃತಿಯನ್ನು ಬಿಂಬಿಸುವ ಹತ್ತಾರು ಕಲಾಕೃತಿಗಳನ್ನು ಸೃಷ್ಟಿಸಲಾಗಿದೆ. 2010ರ ದಸರೆಯಲ್ಲಿ ಔಪಚಾರಿಕವಾಗಿ ಉದ್ಘಾಟನೆಯಾದ ಮುರುಘಾ ವನಕ್ಕೆ ಈಗ ದಶಕ ತುಂಬಿದೆ. ಜೀವ ಸಂಕುಲದ ವಿಕಾಸ ಪಕ್ರಿಯೆ, ಶರಣ ಪರಂಪರೆ ಹಾಗೂ ಕಾಯಕ ಸಂಸ್ಕೃತಿಯನ್ನು ಬಿಂಬಿಸುವ ಹತ್ತಾರು ಕಲಾಕೃತಿಗಳ ಮೂಲಕ ನೂರಾರು ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ. “ಅಂದಿನಿಂದ-ಇಂದಿನವರೆಗೆ’ ಎಂಬ ಪರಿಕಲ್ಪನೆಯಲ್ಲಿ ಮೂಡಿ ಬಂದಿರುವ ಇಲ್ಲಿನ ಕಲಾಕೃತಿಗಳಲ್ಲಿ ಕ್ರಿಸ್ತ ಪೂರ್ವ ಮತ್ತು ನಂತರದ ಜೀವ ವಿಕಾಸದ ಬೆಳವಣಿಗೆಯ ಮಜಲುಗಳನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ.

ಅವನತಿ ಹೊಂದಿದ ಪ್ರಾಣಿಗಳು (ಡೈನೋಸಾರ್‌) ಆದಿ ಮಾನವರ ಜೀವನ ಕ್ರಮಗಳನ್ನು ಬಿಂಬಿಸುವ ಸಿಮೆಂಟಿನ ಕಲಾಕೃತಿಗಳನ್ನು ನಿರ್ಮಿಸಿರುವ ಕಲಾವಿದರು ಅವುಗಳಿಗೆ ಜೀವ ತುಂಬಿದ್ದಾರೆ. ಮಾನವನ ಜೀವನ ವಿಕಾಸದ ವಿವಿಧ ಮಜಲುಗಳನ್ನು ಕಟ್ಟಿಕೊಡುವ ಸಿಮೆಂಟಿನ ಕಲಾಕೃತಿಗಳು ಇಲ್ಲಿ ಅತ್ಯಂತ ಆಕರ್ಷಕವಾಗಿವೆ. ಸಾವಿರಾರು ವರ್ಷಗಳ ಹಿಂದೆ ಇದ್ದ ದೈತ್ಯಾಕಾರದ ಡೈನೋಸಾರ್‌ಗಳು, ದನ ಕರುಗಳು, ಹಳ್ಳಿಕಾರ್‌ ತಳಿಯ ಹಾಲುಣಿಸುತ್ತಿರುವ ಹಸು, ಜಿಂಕೆ, ನವಿಲು, ಮೊಸಳೆ, ಜಿರಾಫೆ ಮತ್ತಿತರ ಪ್ರಾಣಿ, ಪಕ್ಷಿಗಳ ಜತೆಯಲ್ಲಿ ಸಹಜೀವನ ಸಂದೇಶ ಸಾರುವ ಹಾವುಗಳ ಹಲವಾರು ಕಲಾಕೃತಿಗಳಿವೆ. ಕದಳೀವನಕ್ಕೆ ಹೊರಟುನಿಂತ ಅಕ್ಕ ಮಹಾದೇವಿ, ಶರಣನೊಬ್ಬನ ಮಾತು ಕೇಳುತ್ತಿರುವ ಗ್ರಾಮೀಣ ಜನರು ಹಾಗೂ ಗ್ರಾಮೀಣ ದೈನಂದಿನ ಬದುಕನ್ನು ಬಿಂಬಿಸುವ ಹಲವು ಕಲಾಕೃತಿಗಳು ಉದ್ಯಾನದಲ್ಲಿ ನಿರ್ಮಾಣಗೊಂಡಿವೆ.

ಕೂಡಲಸಂಗಮದ ಐಕ್ಯಮಂಟಪ, ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡುತ್ತಿರುವ ಮೊಸಳೆ, ಪೆಂಗ್ವಿನ್‌, ನೀರಾನೆ ಹಾಗೂ ವಿವಿಧ ಪ್ರಭೇದಗಳ ಕೊಕ್ಕರೆಗಳನ್ನು ನಿರ್ಮಿ ಸಲಾಗಿದೆ. ಸಮೀಪದ ಮರದ ಮೇಲೆ ಗೂಬೆ, ಹದ್ದು, ಗಿಡುಗ, ಪಾರಿವಾಳ ಸೇರಿದಂತೆ ಪಕ್ಷಿಗಳ ಸಮೂಹವಿದೆ. ಇವೆಲ್ಲ ಜೀವಂತ ಹಕ್ಕಿಗಳೇನೋ ಎನ್ನಿಸುವಷ್ಟು ಸಹಜತೆಯಿಂದ ಈ ಕಲಾಕೃತಿಗಳು ಆಕರ್ಷಿಸುತ್ತವೆ. ಬಿಜಾಪುರ ಜಿಲ್ಲೆಯ ಮುದ್ದೇಬಿಹಾಳದ ಕಲಾವಿದ ಸಂಗಮೇಶ ಕತ್ತಿ ಮತ್ತು ಅವರ ಸಂಗಡಿಗರಾದ ಹದಿನೈದು ಕಲಾವಿದರು ಕಳೆದ ಒಂದೂವರೆ ವರ್ಷ ನಿರಂತರವಾಗಿ ದುಡಿದು ಈ ಕಲಾಕೃತಿಗಳನ್ನು ನಿರ್ಮಿಸಿದ್ದಾರೆ. ಡಾ|ಶಿವಮೂರ್ತಿ ಮುರುಘಾ ಶರಣರ ಕಲ್ಪನೆ ಮತ್ತು ಮಾರ್ಗದರ್ಶನದಲ್ಲಿ ಈ ಕಲಾವಿದರು ಸಿಮೆಂಟಿನ ಕಲಾಕೃತಿ ರೂಪಿಸಿದ್ದು, ಪ್ರವಾಸಿಗರ ಕಣ್ಮನ ಸೆಳೆಯುತ್ತಿವೆ.

ನವ ಮುರುಘಾವನಕ್ಕೆ ದಶಕದ ಸಂಭ್ರಮ
ಚಿತ್ರದುರ್ಗದ ಮುರುಘಾ ಮಠವೆಂದರೆ ಅದು ಪ್ರಕೃತಿಯ ಮಧ್ಯದಲ್ಲಿರುವ ಪ್ರಶಾಂತ ತಾಣ. ಸದಾ ಹಚ್ಚ ಹಸಿರು ವಾತಾವರಣ. ಪ್ರಾಣಿ, ಪಕ್ಷಿಗಳ ಕಲರವ. ಮನಸ್ಸಿಗೆ ನೆಮ್ಮದಿ ನೀಡುವ ತಾಣ. ಇದೇ ಜಾಗಕ್ಕೆ ಡಾ| ಶಿವಮೂರ್ತಿ ಮುರುಘಾ ಶರಣರು ಒಂದಿಷ್ಟು ಹೊಸ ಟಚ್‌ ಕೊಟ್ಟಿದ್ದು, ಈ ವಾತಾವರಣದಲ್ಲಿ ಓಡಾಡುತ್ತಾ ಮನಸ್ಸಿಗೆ ಮುದ ನೀಡುವ, ಮನುಷ್ಯನ ವಿಕಾಸವನ್ನು ಅಧ್ಯಯನ ಮಾಡುವ, ಮಕ್ಕಳಿಗೆ ಮನರಂಜನೆ ನೀಡುವ ಥೀಮ್‌ ಪಾರ್ಕ್‌ ರೂಪಿಸಿದ್ದಾರೆ.

-ತಿಪ್ಪೇಸ್ವಾಮಿ ನಾಕೀಕೆರೆ

 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.