ವೈಚಾರಿಕ ದಸರಾಕ್ಕೆ ಮುರುಘಾ ಮಠ ಸಜ್ಜು


Team Udayavani, Oct 2, 2019, 4:22 PM IST

cd-tdy-1

ಚಿತ್ರದುರ್ಗ: ಮಧ್ಯ ಕರ್ನಾಟಕದ “ವೈಚಾರಿಕಾ ದಸರಾ’ ಎಂದೇ ಹೆಸರಾಗಿರುವ ಶರಣ ಸಂಸ್ಕೃತಿ ಉತ್ಸವಕ್ಕೆ ಮುರುಘಾ ಮಠ ಸಜ್ಜಾಗಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.

ಮಂಗಳವಾರ ಶ್ರೀಮಠದ ಆವರಣದಲ್ಲಿ ಉತ್ಸವದ ಪೂರ್ವಸಿದ್ಧತೆ ವೀಕ್ಷಿಸಿ ಶರಣರು ಮಾತನಾಡಿದರು. ಹಿಂದೆ ಮುರುಘಾ ಮಠದಲ್ಲಿ ವಿಜಯದಶಮಿ, ದಸರಾ ಆಚರಣೆ ನಡೆಯುತ್ತಿತ್ತು. ಆದರೆ 30 ವರ್ಷಗಳಿಂದೀಚೆಗೆ ಇದಕ್ಕೆ ಹೊಸ ಸ್ವರೂಪ ನೀಡಿ ಸೈದ್ಧಾಂತಿಕ ಹಿನ್ನೆಲೆಯಲ್ಲಿ ಶರಣ ಸಂಸ್ಕೃತಿ ಉತ್ಸವವನ್ನಾಗಿ ಆಚರಿಸಲಾಗುತ್ತಿದೆ. ಸರ್ವ ಧರ್ಮದವರನ್ನು ಒಟ್ಟುಗೂಡಿಸಿಕೊಂಡು ಈ ಉತ್ಸವವನ್ನು ಆಚರಿಸುತ್ತಿದ್ದೇವೆ ಎಂದರು.

ಅಲ್ಲಮ ಪ್ರಭುದೇವರು ಶೂನ್ಯಪೀಠದ ಪ್ರಥಮ ಅಧ್ಯಕ್ಷರಾಗಿದ್ದರು. ಮುರಿಗೆ ಶಾಂತವೀರ ಸ್ವಾಮಿಗಳು ಈ ಪ್ರಾಂತ್ಯಕ್ಕೆ ಬಂದಾಗ ಭರಮಣ್ಣ ನಾಯಕರನ್ನು ಆಶೀರ್ವದಿಸಿದ್ದರು. ಇಲ್ಲಿ ಮಠ ಸ್ಥಾಪಿಸಲು ಸಹಕರಿಸಿದ್ದರು ಎಂದು ಸ್ಮರಿಸಿದರು.

ಈ ವರ್ಷದ ಶರಣ ಸಂಸ್ಕೃತಿ ಉತ್ಸವದಲ್ಲಿ ವಿಶೇಷವಾಗಿ ಈಶಾನ್ಯ ರಾಜ್ಯಗಳ ಕಲಾ ಪ್ರದರ್ಶನ, ದಕ್ಷಿಣ ವಲಯ ತಂಜಾವೂರಿನ ಕಲಾವಿದರಿಂದ ವಿಶೇಷ ಜಾನಪದ ಕಲೆಗಳ ಪ್ರದರ್ಶನ, ಅಂತಾರಾಷ್ಟ್ರೀಯ ಮಟ್ಟದ ಅಕ್ರೋಬಾಟಿಕ್‌ ಪ್ರದರ್ಶನ, ಶಬರಿ ಗ್ಲೋ ಆರ್ಟ್‌ಎಲ್‌ಇಡಿ ಆ್ಯಕ್ಟ್, ಬ್ಯಾಲೆನ್ಸ್‌ ಆ್ಯಕ್ಟ್, ಚಂಡೆ ಪ್ರದರ್ಶನ ಹಾಗು ಬಾಹುಬಲಿ ನೃತ್ಯ ಪ್ರದರ್ಶನಗಳನ್ನು ಆಯೋಜಿಸಲಾಗಿದೆ ಎಂದರು.

ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ವಿಚಾರಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಈ ವಿಚಾರಗೋಷ್ಠಿಗಳಲ್ಲಿ ಭಾವೈಕ್ಯ ಸಮಾವೇಶ, ಇಸ್ರೇಲ್‌ ಮಾದರಿ ಕೃಷಿ ಮತ್ತು ಸ್ಥಳೀಯ ನೀರಾವರಿ ಯೋಜನೆ ಪರಾಮರ್ಶೆ, ಮುರುಘಾ ಪರಂಪರೆ ಉಂಟು ಮಾಡಿರುವ ಸಮಾಜೋಧಾರ್ಮಿಕ ಪರಿವರ್ತನೆಗಳು, ಹೊಸ ಶಿಕ್ಷಣ ನೀತಿ, ಗಾಂ ಧಿವಾದದ ಪ್ರಸ್ತುತತೆ, ರಾಜಕೀಯ ಅಸ್ಥಿರತೆ ಮತ್ತು ಸಂವಿಧಾನಿಕ ಬದ್ಧತೆ, ಬಸವತತ್ವ ವಿಶ್ವ ತತ್ವ, ಯುವಜನರ ಮುಂದಿನ ಸವಾಲುಗಳು ಮತ್ತು ಮಾರ್ಗೋಪಾಯಗಳು, ಜಗತ್ತು ಎತ್ತ ಸಾಗುತ್ತಿದೆ, ಸಮಕಾಲೀನ ಚಿಂತನೆ ಮತ್ತಿತರೆವಿಷಯಗಳ ಕುರಿತು ವಿಷಯ ಮಂಡನೆ, ಸಂವಾದ ನಡೆಯಲಿವೆ ಎಂದರು.

ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ| ಹನುಮಲಿ ಷಣ್ಮುಖಪ್ಪ, ಪಟೇಲ್‌ ಶಿವಕುಮಾರ್‌, ಡಿ.ಎಸ್‌. ಮಲ್ಲಿಕಾರ್ಜುನ್‌, ಶ್ರೀನಿವಾಸ್‌, ಎಸ್‌.ಜೆ.ಎಂ ವಿದ್ಯಾಪೀಠ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ. ದೊರೆಸ್ವಾಮಿ, ಮಹಡಿ ಶಿವಮೂರ್ತಿ ಮತ್ತಿತರು ಇದ್ದರು. ಶರಣ ಸಂಸ್ಕೃತಿ ಉತ್ಸವದ ಕಾರ್ಯಾಧ್ಯಕ್ಷ ಡಾ| ಹನುಮಲಿ ಷಣ್ಮುಖಪ್ಪ ಮತ್ತು ಎಲ್‌. ಪುಷ್ಪಾವತಿ ದಂಪತಿ ಶರಣ ಸಂಸ್ಕೃತಿ ಉತ್ಸವದ ಮಹಾದಾಸೋಹಕ್ಕೆ 25 ಕೆಜಿ ತೂಕದ 1150 ಪ್ಯಾಕೆಟ್‌ ಅಕ್ಕಿಯನ್ನು ಇದೇ ಸಂದರ್ಭದಲ್ಲಿ ಸಮರ್ಪಿಸಿದರು.

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.