ಮುತ್ತುಗದೂರಲ್ಲಿ ಮ್ಯೂಸಿಯಂ ನಿರ್ಮಾಣ

ಶಿವಕುಮಾರ ಶ್ರೀಗಳು ಕಾವ್ಯ ಪ್ರತಿಭೆಯ ಗಣಿ: ತರಳಬಾಳು ಶ್ರೀ ಬಣ್ಣನೆ

Team Udayavani, Sep 24, 2021, 6:45 PM IST

sirigere-03

 ಸಿರಿಗೆರೆ: ನಮ್ಮ ಪರಮಾರಾಧ್ಯ ಗುರುಗಳಾಗಿದ್ದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯಮಹಾಸ್ವಾಮಿಗಳವರು ಕಾಳಿದಾಸನನ್ನು ಸರಿಗಟ್ಟುವ ಕಾವ್ಯಪ್ರತಿಭೆಯನ್ನು ಹೊಂದಿದ್ದ ಗಣಿಯಾಗಿದ್ದರು ಎಂದು ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಬಣ್ಣಿಸಿದರು. ಲಿಂಗೈಕ್ಯ ಶಿವಕುಮಾರ ಶ್ರೀಗಳ ಶ್ರದ್ಧಾಂಜಲಿ ಕಾರ್ಯಕ್ರಮದ ಅಂಗವಾಗಿ ಮುತ್ತಗದೂರು ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.

ನಮ್ಮ ಗುರುಗಳು ಕಾಶಿಯಲ್ಲಿ ಹಲವು ವರ್ಷಗಳ ಕಾಲ ಸಂಸ್ಕೃತವನ್ನು ಶಾಸ್ತ್ರೀಯವಾಗಿ ಅಧ್ಯಯನ ಮಾಡಿದ್ದರು. ವಿದ್ಯಾರ್ಥಿಯಾಗಿರುವಾಗಲೇ ಅಪ್ರತಿಮ ಸಂಸ್ಕೃತ ಕಾವ್ಯವನ್ನು ಬರೆದಿದ್ದರು. ಅವರ ಕಾವ್ಯ ಕಾಶಿಯ ಹಲವು ಪ್ರಮುಖ ಸಂಸ್ಕೃತ ಪತ್ರಿಕೆಗಳಲ್ಲಿ ಆಗಲೇ ಪ್ರಕಟವಾಗಿದ್ದವು ಎಂದು ಸ್ಮರಿಸಿದರು. ಲಿಂಗೈಕ್ಯ ಗುರುಗಳು ತಮ್ಮ ಬದುಕಿನ ಅಂತಿಮ ದಿನಗಳನ್ನು ಕಳೆದ ಮುತ್ತುಗದೂರು ಬಿಡಾರಕ್ಕೆ ಮ್ಯೂಸಿಯಂ ಸ್ವರೂಪ ನೀಡಲಾಗುವುದು. ಹಿರಿಯ ಗುರುಗಳ ಬದುಕಿನ ಸಮಗ್ರ ಚಿತ್ರಣ ಸಿಗುವಂತೆ ಚಿತ್ರಪಟಗಳನ್ನು ಅಳವಡಿಸಲಾಗುವುದು. ತಾವು ಚಿಕ್ಕವಯಸ್ಸಿನಲ್ಲಿದ್ದಾಗ ತೆಂಗಿನಚಿಪ್ಪಿನ ವಾಯಲಿನ್‌ ಮಾಡಿ ನುಡಿಸುತ್ತಿದ್ದನ್ನು ಗಮನಿಸಿದ ಹಿರಿಯ ಶ್ರೀಗಳು ಮಠದಲ್ಲಿದ್ದ ಪಿಟೀಲೊಂದನ್ನು ತಮಗೆ ಕೊಡುಗೆಯಾಗಿ ನೀಡಿ ಹಾರೈಸಿದ್ದರು. ತಾವು ಕಾಶಿಯಲ್ಲಿ ಓದುತ್ತಿದ್ದಾಗ ತಮ್ಮನ್ನು ಚಿಕ್ಕಜಾಜೂರು ರೇಲ್ವೆ ನಿಲ್ದಾಣಕ್ಕೆ ಕರೆ ತಂದು ರೈಲಿಗೆ ಹತ್ತಿಸುತ್ತಿದ್ದರು. ಹೆಣ್ಣುಮಕ್ಕಳ ಶಿಕ್ಷಣಕ್ಕೂ ದೊಡ್ಡ ಕಾಣಕೆ ನೀಡಿದ್ದಾರೆ ಎಂದರು.

ಆರೋಗ್ಯ ರಕ್ಷಣೆಗೆ ಗಮನ ಕೊಡಿ:

ಕೊರೊನಾ ತಡೆಗಟ್ಟಲು ಲಸಿಕೆ ಬಂದಿದೆಯೆಂದು ಮೈಮರೆಯಬಾರದು. ಲಸಿಕೆಯನ್ನು ಪಡೆದ ಹಲವರು ಕೋವಿಡ್‌ಗೆ ತುತ್ತಾಗಿರುವ ಘಟನೆಗಳು ನಡೆದಿವೆ. ಆದ್ದರಿಂದ ಎಲ್ಲರೂ ಸ್ವತ್ಛತೆ, ಸಾಮಾಜಿಕ ಅಂತರದ ಬಗ್ಗೆ ಎಚ್ಚರ ವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಮಾಜಿ ಸಚಿವ ಎಚ್‌. ಆಂಜನೇಯ, ನಮ್ಮ ಕಾಲದ ಆಧುನಿಕ ಬಸವಣ್ಣ ಶಿವಕುಮಾರ ಶ್ರೀಗಳು. ಅವರ ಸಂಕಲ್ಪವನ್ನು ಡಾ| ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಸಮಾಜವನ್ನು ಮುನ್ನಡೆಸುತ್ತಾ ಬೃಹನ್ಮಠದ ಕೀರ್ತಿ ಹಬ್ಬುವಂತೆ ಮಾಡಿದ್ದಾರೆ ಎಂದರು.

ಶ್ರದ್ಧಾಭಕ್ತಿಯ ಮೆರವಣಿಗೆ

ಸಿರಿಗೆರೆ: ಲಿಂಗೈಕ್ಯ ಶ್ರೀಗಳಾದ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 29ನೇ ಶ್ರದ್ಧಾಂಜಲಿ ಸಮಾರಂಭದ ಅಂಗವಾಗಿ ಸಿರಿಗೆರೆಯ ಪ್ರಮುಖ ಬೀದಿಗಳಲ್ಲಿ ಲಿಂಗೈಕ್ಯ ಗುರುಗಳ ಪುತ್ಥಳಿ ಮೆರವಣಿಗೆ ನಡೆಯಿತು. ಅಲಂಕೃತ ಟ್ರ್ಯಾಕ್ಟರ್ ನಲ್ಲಿ ಬೃಹನ್ಮಠದ ಸಾಂಪ್ರದಾಯಿಕ ಪಲ್ಲಕ್ಕಿಯನ್ನಿರಿಸಿ ಪುಷ್ಪಾಲಂಕಾರ ಮಾಡಲಾಗಿತ್ತು. ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಲಿಂಗೈಕ್ಯ ಗುರುಗಳ ಪುತ್ಥಳಿಗೆ ನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಪುತ್ಥಳಿಯನ್ನು ಇರಿಸಿದ್ದ ಪಲ್ಲಕ್ಕಿಯ ವಾಹನದ ಮುಂದೆ ಬೃಹನ್ಮಠದ ಬಿರುದಾವಳಿಗಳನ್ನು ಹಿಡಿದ ಯುವಕರು ಸಾಲಾಗಿ ಸಾಗಿದರು. ಮೆರವಣಿಗೆಯಲ್ಲಿ ಸಿರಿಗೆರೆಯ ನಾಗರಿಕರಲ್ಲದೆ ಹೊರ ಊರುಗಳಿಂದ ಬಂದಿದ್ದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ನಂದಿಕೋಲು, ಬ್ಯಾಂಡ್‌ಸೆಟ್‌, ನಾಸಿಕ್‌ ಬ್ಯಾಂಡ್‌, ವೀರಗಾಸೆ, ಡೋಲು, ಭಜನಾ ತಂಡಗಳು ಗಮನ ಸೆಳೆದವು.

ಮುಸ್ಲಿಂ ಬಾಂಧವರಿಂದ ತರಕಾರಿ ಕೊಡುಗೆ

ಸಿರಿಗೆರೆ: ತರಳಬಾಳು ಜಗದ್ಗುರು ಬೃಹನ್ಮಠಕ್ಕೂ ಮುಸ್ಲಿಂ ಸಮುದಾಯದವರು ಮಾತ್ರ ವಾಸ ಮಾಡುವ ಗೌರಮ್ಮನಹಳ್ಳಿ ಗ್ರಾಮಕ್ಕೂ ಅವಿನಾಭಾವ ಸಂಬಂಧವಿದೆ. ಅದಕ್ಕೆ ಕಾರಣ ಲಿಂಗೈಕ್ಯ ಶ್ರೀಗಳಾದ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ಜಾತ್ಯತೀತ ನಿಲುವು. ಈ ಬಾಂಧವ್ಯ ಈಗಲೂ ಮುಂದುವರೆದಿದೆ. ಇದರ ಪ್ರತೀಕವಾಗಿ ಗೌರಮ್ಮನಹಳ್ಳಿಯ ಮುಸ್ಲಿಂ ಬಾಂಧವರು ಲಿಂಗೈಕ್ಯ ಗುರುಗಳ ಶ್ರದ್ಧಾಂಜಲಿ ಸಮಾರಂಭದ ದಾಸೋಹಕ್ಕೆ ಒಂದು ಲೋಡ್‌ನ‌ಷ್ಟು ವಿವಿಧ ತರಕಾರಿಗಳನ್ನು ತಂದು ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಇಬ್ರಾಹಿಂ ಬೇಗ್‌, ಐಸಾಕ್‌ ಬೇಗ್‌, ಮಹಮ್ಮದ್‌ ಇಸಾಕ್‌, ಸಮೀಉಲ್ಲಾ ಖಾನ್‌, ಮುಸ್ತಾರ್‌ ಬೇಗ್‌, ಅಜೀಜ್‌ ಬೇಗ್‌ ಇತರರು ಇದ್ದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.