ಕೋಟೆ ನಗರಿಗೆ ಸಂಗೀತ ಕಾರಂಜಿ ಮೆರುಗು


Team Udayavani, Nov 20, 2020, 3:46 PM IST

ಕೋಟೆ ನಗರಿಗೆ ಸಂಗೀತ ಕಾರಂಜಿ ಮೆರುಗು

ಚಿತ್ರದುರ್ಗ: ಐತಿಹಾಸಿಕ ಜಿಲ್ಲೆ ಚಿತ್ರದುರ್ಗ ನಗರ ಹೊಸ ಮೆರುಗು ಪಡೆಯಲು ಅಣಿಯಾಗಿದೆ. ಹಲವುವರ್ಷಹಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆಗಳ ವಿಸ್ತೀರ್ಣ, ಅಭಿವೃದ್ಧಿ ಒಂದು ಕಡೆಯಾದರೆ, ನಗರಕ್ಕೆ ಹೊಸ ನೋಟ ಸಿಗುವಂತೆ ಮಾಡಲು ಹಲವು ವೃತ್ತಗಳು ಪುನರುಜ್ಜೀವನಗೊಳ್ಳುತ್ತಿವೆ.

ವಿವಿಧ ಅನುದಾನಗಳಲ್ಲಿ ನಗರದ ಪ್ರಮುಖ ರಸ್ತೆಗಳು ವಿಸ್ತೀರ್ಣಗೊಂದು ಇಂದಿನ ಜನಸಂಖ್ಯೆಗೆ ಅನುಗುಣವಾಗಿ ನಿರ್ಮಾಣವಾಗುತ್ತಿರುವುದು ನಗರ ಹಾಗೂ ಜಿಲ್ಲೆಯ ಜನರಿಗೆ ಸಂತಸದ ಸಂಗತಿಯಾಗಿದೆ. ಇದರೊಟ್ಟಿಗೆ ಮಹಾ ಪುರುಷರ ಹೆಸರಿನವೃತ್ತಗಳಿಗಳನ್ನು ಅಲಂಕರಿಸುವ ಮೂಲಕ ನಗರಕ್ಕೆಹೊಸ ಮೆರುಗು ನೀಡಲು ನಗರಸಭೆ ಮುಂದಾಗಿದೆ.

ಜಿಲ್ಲಾಧಿಕಾರಿ ಕಚೇರಿ ಸಮೀಪದಲ್ಲೇ ಇರುವ ಒನಕೆ ಓಬವ್ವ ವೃತ್ತವನ್ನು ವಿಶೇಷವಾಗಿ ನಿರ್ಮಿಸುತ್ತಿದ್ದು, ಆಕರ್ಷಕವಾಗಿ ಕಾಣುವಂತೆ ನೋಡಿಕೊಳ್ಳಲಾಗುತ್ತಿದೆ. 22 ಲಕ್ಷ ರೂ. ವೆಚ್ಚದಲ್ಲಿ ಸಂಗೀತ ಕಾರಂಜಿನಿರ್ಮಿಸಲಾಗುತ್ತಿದೆ. ವೃತ್ತದ ಪಕ್ಕದಲ್ಲೇ ಇರುವ ಉದ್ಯಾನವನ ಕೂಡಾ ಅಭಿವೃದ್ಧಿ ಮಾಡಿ ಹೊಸ ಲುಕ್‌ ನೀಡಲು ತಯಾರಿ ನಡೆದಿದೆ.

ಇನ್ನೂ ಚಿತ್ರದುರ್ಗ ಅಂದಾಕ್ಷಣ ಥಟ್ಟನೆ ನೆನಪಾಗುವ ರಾಜವೀರ ಮದಕರಿ ನಾಯಕರ ಹೆಸರಿಗೆ ತಕ್ಕಂತೆ ಹಳೆಯ ನಗರಸಭೆ ಕಚೇರಿ ಬಳಿ ಬಿ.ಡಿ. ರಸ್ತೆಯಲ್ಲಿ ಮದಕರಿ ನಾಯಕರ ದೊಡ್ಡ ಪ್ರತಿಮೆ ಇದ್ದು, ಇಲ್ಲಿಯೂ ವೃತ್ತವನ್ನು ವಿಸ್ತರಿಸಿ ಕಾರಂಜಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ 27 ಲಕ್ಷ ರೂ.ಗಳನ್ನು ಮೀಸಲಿಡಲಾಗಿದೆ. ಶಿವಮೊಗ್ಗ ಅಥವಾ ಹೊಳಲ್ಕೆರೆ ಭಾಗದಿಂದ  ಸಿಗುವ ಕನಕದಾಸರ ಸುಂದರ ಪ್ರತಿಮೆ ಇರುವ ಕನಕ ವೃತ್ತದಲ್ಲಿ ಕೂಡಾ 4 ಲಕ್ಷ ರೂ. ವೆಚ್ಚದಲ್ಲಿ ಕಾರಂಜಿ ನಿರ್ಮಾಣವಾಗಲಿದೆ.

ಇನ್ನೂ ನಗರ ಪೊಲೀಸ್‌ ಠಾಣೆ ಬಳಿ ಇರುವ ಅಂಬೇಡ್ಕರ್‌ ವೃತ್ತದ ಆವರಣ ಸಾಕಷ್ಟು ಕಿರಿದಾಗಿದ್ದು, ಇಲ್ಲಿಯೂ ಕೂಡಾ ವೃತ್ತವನ್ನು ವಿಸ್ತರಿಸಿ ಹೊಸದಾಗಿ ಗ್ರಿಲ್‌ ಅಳವಡಿಸಲು 5 ಲಕ್ಷ ರೂ. ಮೀಸಲಿಡಲಾಗಿದೆ ಎಂದು ನಗರಸಭೆ ಇಂಜಿನಿಯರ್‌ ಮನೋಹರ್‌ ತಿಳಿಸಿದ್ದಾರೆ.

ಈಗಾಗಲೇ ಚಳ್ಳಕೆರೆ ಗೇಟ್‌ನಿಂದ ಪ್ರವಾಸಿ ಮಂದಿರದವರೆಗೆ ಬಿ.ಡಿ. ರಸ್ತೆ ಅಗಲೀಕರಣ ಹಾಗೂಅಭಿವೃದ್ಧಿ ನಡೆಯುತ್ತಿದ್ದು, ಹೊಳಲ್ಕೆರೆ ರಸ್ತೆಯಲ್ಲಿ ಕೂಡಾ ಕಾಮಗಾರಿ ಆಗಿದೆ. ತುರುವನೂರು ರಸ್ತೆಯ ಅಗಲೀಕರಣ ಕಾಮಗಾರಿ ಕೂಡಾ ಭರದಿಂದ ಸಾಗುತ್ತಿದೆ. ಎಲ್ಲ ಕಾಮಗಾರಿಗಳು ಆದಷ್ಟು ಬೇಗ ಮುಗಿದರೆ ಐತಿಹಾಸಿಕ ಜಿಲ್ಲೆ ಚಿತ್ರದುರ್ಗಕ್ಕೆ ಹೊಸ ರೂಪ ಸಿಗುವುದರಲ್ಲಿ ಅನುಮಾನವಿಲ್ಲ

ಚಿತ್ರದುರ್ಗದ ಇತಿಹಾಸದಲ್ಲಿ ಛಾಪು ಮೂಡಿಸಿರುವ ವೀರ ಮದಕರಿ ನಾಯಕರು, ವೀರ ವನಿತೆ ಒನಕೆ ಓಬವ್ವ, ಸಂತ ಕನಕದಾಸರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತಗಳನ್ನುವಿಶೇಷವಾಗಿ ಕಾರಂಜಿಗಳ ಮೂಲಕಅಲಂಕರಿಸುವ ಮೂಲಕ ಮಹಾತ್ಮರಿಗೆ ಗೌರವ ಸಲ್ಲಿಸುವುದು ಹಾಗೂ ನಗರಕ್ಕೆ ಹೊಸ ರೂಪ ಕೊಡುವ ಉದ್ದೇಶವಿದೆ. – ಜಿ.ಎಚ್‌. ತಿಪ್ಪಾರೆಡ್ಡಿ, ಚಿತ್ರದುರ್ಗ.

 

-ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.