ತೋಟಗಾರಿಕೆ-ಪುಷ್ಪ ಬೆಳೆಗಾರರಿಗೆ ಪರಿಹಾರ ಕೊಡಿ
Team Udayavani, Apr 18, 2020, 6:10 PM IST
ನಾಯಕನಹಟ್ಟಿ: ತುರುವನೂರು ಹೋಬಳಿಯಲ್ಲಿ ತೋಟಗಾರಿಕಾ ಬೆಳೆ ನಷ್ಟವಾದ ಹೊಲಗಳಿಗೆ ಶಾಸಕ ಟಿ. ರಘುಮೂರ್ತಿ ಭೇಟಿ ನೀಡಿ ಪರಿಶೀಲಿಸಿದರು.
ನಾಯಕನಹಟ್ಟಿ: ಕೊರೊನಾದಿಂದ ನಷ್ಟಕ್ಕೆ ಒಳಗಾದ ತೋಟಗಾರಿಕೆ ಹಾಗೂ ಪುಷ್ಪ ಬೆಳೆಗಾರರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಒತ್ತಾಯಿಸಿದ್ದಾರೆ.
ಶುಕ್ರವಾರ ತುರುವನೂರು ಹೋಬಳಿಯಲ್ಲಿ ಕೊರೊನಾ ಸಂಕಷ್ಟದಿಂದ ನಷ್ಟಕ್ಕೊಳಗಾಗಿರುವ ರೈತರ ಹೊಲಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು. ಬೇಸಿಗೆಯಲ್ಲಿ ಪುಷ್ಪಕೃಷಿಯಿಂದ ಉತ್ತಮ ಲಾಭ ಪಡೆಯಬಹುದು ಎನ್ನುವ ಯೋಚನೆಯಿಂದ ಹೂವು ಬೆಳೆಯಲಾಗಿತ್ತು. ಹುಣಸೇಕಟ್ಟೆ,ಬಾಗೇನಹಾಳ್ ಸೇರಿದಂತೆ ನಾನಾ ಗ್ರಾಮಗಳಲ್ಲಿನ ಕೊಳವೆಬಾವಿ ಇರುವ ರೈತರು ಪುಷ್ಪಕೃಷಿ ಮಾಡಿದ್ದರು. ಜತೆಗೆ ಕಲ್ಲಂಗಡಿ, ಕರಬೂಜ, ಈರುಳ್ಳಿ, ಬಾಳೆ ಬೆಳೆಗಳನ್ನೂ ಬೆಳೆದಿದ್ದರು. ಆದರೆ ಲಾಕ್ ಡೌನ್ ಪರಿಣಾಮ ಸಾಗಾಟ ಹಾಗೂ ಬೇಡಿಕೆ ಕುಸಿತದಿಂದ ರೈತರಿಗೆ ನಷ್ಟವಾಗಿದೆ. ಮದುವೆ, ಜಾತ್ರೆ, ಸಮಾರಂಭಗಳಿಲ್ಲದೆ ಹೂವಿನ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿದೆ. ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ನಷ್ಟದ ವರದಿ ಸಿದ್ಧಪಡಿಸುವಂತೆ ಸೂಚಿಸಲಾಗಿದೆ. ತೋಟಗಾರಿಕ ಹಾಗೂ ಕೃಷಿ ಸಚಿವರಿಗೆ ಬೆಳೆ ನಷ್ಟ ನೀಡುವಂತೆ ಒತ್ತಾಯಿಸಲಾಗುವುದು ಎಂದರು.
ಜಿಪಂ ಮಾಜಿ ಸದಸ್ಯ ಜಿ.ಟಿ. ಬಾಬು ರೆಡ್ಡಿ, ತಾಪಂ ಅಧ್ಯಕ್ಷ ಲಿಂಗರಾಜ್, ಕೃಷಿ ಇಲಾಖೆ ಅಧಿಕಾರಿ ಭಾರತಿ, ತೋಟಗಾರಿಕಾ ಇಲಾಖೆ ಅಧಿಕಾರಿ ಸುಧಾಕರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?