ಕೆರೆ-ಹಳ್ಳ ಪುನಶ್ಚೇತನಕ್ಕೆ ಅಗತ್ಯ ಕ್ರಮ: ಗೂಳಿಹಟ್ಟಿ


Team Udayavani, Jun 17, 2020, 9:08 AM IST

ಕೆರೆ-ಹಳ್ಳ ಪುನಶ್ಚೇತನಕ್ಕೆ ಅಗತ್ಯ ಕ್ರಮ: ಗೂಳಿಹಟ್ಟಿ

ಹೊಸದುರ್ಗ: ತಾಲೂಕಿನ ಕೆಲವು ಕೆರೆ ಕಟ್ಟೆ, ಹಳ್ಳಗಳ ಪುನಶ್ಚೇತನಕ್ಕೆ ಜಿಲ್ಲಾ ಖನಿಜ ಪ್ರತಿಷ್ಠಾನ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲು ಸೂಚಿಸಲಾಗಿದೆ ಎಂದು ಶಾಸಕ ಗೂಳಿಹಟ್ಟಿ ಶೇಖರ್‌ ತಿಳಿಸಿದರು.

ತಾಲೂಕಿನ ದೇವಪುರ ಸಮೀಪದ ಹಿರೇಹಳ್ಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನ ಎಲ್ಲ ಹೋಬಳಿಗಳಲ್ಲೂ ಹಳ್ಳಗಳನ್ನು ಗುರುತಿಸಿ ಪುನಶ್ಚೇತನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ ಸುಮಾರು 15 ಕಿಮೀ ಉದ್ದದ ಹಿರೇಹಳ್ಳದಲ್ಲಿದ್ದ ಕಲ್ಲು ಮುಳ್ಳು ತೆಗೆಸಿ ಜೆಸಿಬಿ ಬಳಸಿ ದುರಸ್ತಿ ಮಾಡಿಸಿದ್ದರಿಂದ ಕಾಲುವೆಯ ಸ್ಪಷ್ಟ ಚಿತ್ರಣ ಕಂಡು ಬಂದಿದೆ. ಮುಂದೆ ಹಳ್ಳದ ಹೂಳೆತ್ತುವ, ಎರಡು ಬದುಗಳ ನಿರ್ಮಾಣ, ಕಲ್ಲು ಪಿಚ್ಚಿಂಗ್‌ ಸೇರಿದಂತೆ ಸುಮಾರು 10 ಚೆಕ್‌ ಡ್ಯಾಂಗಳ ನಿರ್ಮಾಣ ಕಾಮಗಾರಿಯನ್ನು ವಿವಿಧ ಇಲಾಖೆ ಹಾಗೂ ಉದ್ಯೋಗ ಖಾತ್ರಿ ಅಡಿಯಲ್ಲಿ ಕೈಗೊಳ್ಳಲಾಗುವುದು ಎಂದರು.

ದೇವರಹಟ್ಟಿ ಸಮೀಪದ ನೇರಲ ಹಳ್ಳ, ಬಾಗೂರು ಸಮೀಪದ ನ್ಯಾಕಿಕೆರೆ (ಶೃಂಗೇರಿ ಹಳ್ಳ), ಮಾಡದಕೆರೆ ಹೋ‌ಬಳಿಯ ಹಳ್ಳಗಳ ಪುನಶ್ಚೇತನ ಮಾಡಲಾಗುತ್ತಿದೆ. ಹಳ್ಳಗಳ ಪುನಶ್ಚೇತನದಿಂದ ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಹರಿಯುವ ಭದ್ರಾ ನೀರಿನಿಂದ ಕೆರೆ ಕಟ್ಟೆ ತುಂಬಿಸಲು ಹಾಗೂ ಅಂತರ್ಜಲ ವೃದ್ಧಿಗೆ ಸಹಕಾರಿ. ಭದ್ರಾ ಮೇಲ್ದಂಡೆ ಕಾಲುವೆಯ ಬಲ ಭಾಗದ ರೈತರಿಗೆ ಭದ್ರಾ ಯೋಜನೆಯ ಫಲ ಸಿಗಲಿದ್ದು, ಹಳ್ಳಗಳಲ್ಲಿ ನಿರ್ಮಿಸುವ ಚೆಕ್‌ಡ್ಯಾಂಗಳಲ್ಲಿ ನೀರು ಸಂಗ್ರಹಿಸಿ ಭದ್ರಾ ಮೇಲ್ದಂಡೆ ಕಾಲುವೆಯ ಎಡ ಭಾಗದಲ್ಲಿರುವ ಕೆರೆ ಕಟ್ಟೆ, ಚೆಕ್‌ ಡ್ಯಾಂಗಳಿಗೆ ಲಿಫ್ಟ್‌ ಮೂಲಕ ನೀರುಣಿಸಲು ಯೋಜನೆ ರೂಪಿಸಲಾಗುವುದು. ಆ ಮೂಲಕ ಭದ್ರಾ ನೀರು ವಂಚಿತ ಗ್ರಾಮಗಳಿಗೆ ನೀರು ತಲುಪಿಸಲಾಗುವುದು ಎಂದರು.

ಮಹಾರಾಷ್ಟ್ರ ಸೇರಿದಂತೆ ಅನ್ಯರಾಜ್ಯಗಳಿಗೆ ವಲಸೆ ಹೋಗಿದ್ದ ಸ್ಥಳೀಯರು ವಾಪಸಾಗಿದ್ದು, ಎಲ್ಲರಿಗೂ ಉದ್ಯೋಗಕೊಡಲು ಕಡ್ಡಾಯವಾಗಿ ಜಾಬ್‌ಕಾರ್ಡ್‌ ನೀಡುವಂತೆ ಸೂಚಿಸಲಾಗಿದೆ ಎಂದ ಗೂಳಿಹಟ್ಟಿ, ಹಿರೇಹಳ್ಳ ಕಾಮಗಾರಿಯನ್ನು ಯಂತ್ರ ಬಳಸಿ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕರು ವಿನಾಕಾರಣ ಆರೋಪಿಸಿದ್ದರು. ಈಗ ಅವರೇ ಬಂದು ಖಾತ್ರಿ ಕಾಮಗಾರಿಯನ್ನು ವೀಕ್ಷಿಸಬಹುದು ಎಂದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.