ಯಾವುದೇ ಪಕ್ಷದ ಪ್ರಚಾರಕ ಅಲ್ಲ: ಸುದೀಪ್
Team Udayavani, May 8, 2018, 7:00 AM IST
ಕೊಂಡ್ಲಹಳ್ಳಿ: “ಈ ಬಾರಿ ಚುನಾವಣೆಯಲ್ಲಿ ಯಾವ ಪಕ್ಷದ ಪರವೂ ತಾವು ಪ್ರಚಾರ ನಡೆಸುತ್ತಿಲ್ಲ. ಆದರೆ ಮೊಳಕಾಲ್ಮೂರು ಕ್ಷೇತ್ರದ ಅಭ್ಯರ್ಥಿ ಶ್ರೀರಾಮುಲು ಸ್ನೇಹಿತರಾಗಿದ್ದು, ಅವರ ಪರ ಪ್ರಚಾರ ಮಾಡುತ್ತಿರುವೆ’ ಎಂದು ಚಿತ್ರನಟ ಸುದೀಪ್ ಹೇಳಿದರು.
ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಪರವಾಗಿ ಸೋಮವಾರ ಗ್ರಾಮದಲ್ಲಿ ರೋಡ್ ಶೋ ನಡೆಸಿ ಮತ ಯಾಚಿಸಿದ ಅವರು, “ಕಳೆದ 25 ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ನಾನು ಯಾವ ಪಕ್ಷದ ಪರವಾಗಿಯೂ ಪ್ರಚಾರದಲ್ಲಿ ತೊಡಗಿಲ್ಲ. ಶ್ರೀರಾಮುಲು ನನ್ನ ಸ್ನೇಹಿತರಾಗಿದ್ದು, ಅವರಿಂದ ಮೊಳಕಾಲ್ಮೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯವಿದೆ. ಈ ಕಾರಣಕ್ಕೆ ಅವರ ಪರವಾಗಿ ಪ್ರಚಾರ ಮಾಡಲು ಬಂದಿದ್ದೇನೆಯೇ ವಿನಃ ನಾನು ಯಾವುದೇ ಪಕ್ಷದ ಕ್ಯಾಂಪೇನರ್ ಅಲ್ಲ’ ಎಂದು ಸ್ಪಷ್ಟಪಡಿಸಿದರು.
ಕೊಂಡ್ಲಹಳ್ಳಿ ಹಾಗೂ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಕಾತರದಿಂದ ಕಾದಿದ್ದರು. 3 ಗಂಟೆಗೂ ಹೆಚ್ಚು ಕಾಲ ಬಿರುಬಿಸಿಲಿನಲ್ಲಿ ನಿಂತಿದ್ದರು. ಸಾವಿರಾರು ಅಭಿಮಾನಗಳ ನಡುವೆ ದಿವ್ಯಾಂಗ ಮಹಿಳೆ ಕೂಡ ಇದ್ದರು. ಇದನ್ನು ಗಮನಿಸಿದ ಸುದೀಪ್ ಅವರತ್ತ ಕೈಬೀಸಿ ನಮಸ್ಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ