ವಿದ್ಯುತ್ ಕ್ಷೇತ್ರದ ಖಾಸಗೀಕರಣ ಬೇಡ
Team Udayavani, Jun 3, 2020, 6:56 AM IST
ಹೊಸದುರ್ಗ: ವಿದ್ಯುತ್ ಕಾಯ್ದೆಗೆ ಪ್ರಸ್ತಾಪಿತ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಇಲ್ಲಿನ ಹೊಸದುರ್ಗ ತಾಲೂಕಿನ ಶ್ರೀರಾಂಪುರ ಬೆಸ್ಕಾಂ ಇಲಾಖೆಯ ನೌಕರರು ಬೆಸ್ಕಾಂ ಕಚೇರಿ ಎದುರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನೆಡೆಸಿದರು.
ಕೇಂದ್ರ ಸರ್ಕಾರ 2003 ಪ್ರಸ್ತಾಪಿತ ತಿದ್ದುಪಡಿ ತರಲು ಹೊರಟಿರುವ ಕಾಯ್ದೆಯು ಕಾರ್ಮಿಕ ವಿರೋಧಿ ನೀತಿಯಾಗಿದೆ ಹಾಗೂ ಈ ತಿದ್ದುಪಡಿ ಕಾಯ್ದೆಯಿಂದ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣ ಹಾಗೂ ಹೊರಗುತ್ತಿಗೆ ತರಲು ಮುಂದಾಗಿದೆ. ಇದರಿಂದ ನೌಕರರು, ಜನಸಾಮಾನ್ಯರು ಹಾಗೂ ರೈತರಿಗೂ ಹೊರೆಯಾಗಿದೆ. ಕಾರ್ಮಿಕರು, ಜನಸಾಮಾನ್ಯರು ಹಾಗೂ ರೈತರ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಈ ಕಾಯ್ದೆಗೆ ತಿದ್ದುಪಡಿ ತರುವುದು ಬೇಡ ಎಂದು ಪ್ರತಿಭಟನಾಕರರು ಸರ್ಕಾರವನ್ನು ಒತ್ತಾಯಿಸಿದರು.
ಬೆಸ್ಕಾಂ ನೌಕರರ ಸಂಘದ ಅಧ್ಯಕ್ಷ ಮುನಾವರ್, ಕಾರ್ಯದರ್ಶಿ ಎ.ಓಂಕಾರಮೂರ್ತಿ ಹಾಗೂ ಬೆಸ್ಕಾಂ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ