ಈಗ 13.39 ಲಕ್ಷ ಮತದಾರರು


Team Udayavani, Jan 17, 2019, 9:08 AM IST

cta-4.jpg

ಚಿತ್ರದುರ್ಗ: ಜಿಲ್ಲೆಯ ಎಲ್ಲ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ವಿಶೇಷವಾಗಿ ಪರಿಷ್ಕರಣೆ ಮಾಡಲಾಗಿದೆ. ಅಂತಿಮವಾಗಿ ಜಿಲ್ಲೆಯಲ್ಲಿ 13,39,248 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, 2018ರ ಅಕ್ಟೋಬರ್‌ 10 ರಂದು ಪ್ರಕಟಿಸಿದ ಕರಡು ಪಟ್ಟಿ ಅನ್ವಯ 13,32,168 ಮತದಾರರಿದ್ದರು. ಪರಿಷ್ಕರಣೆ ಅವಧಿಯಲ್ಲಿ ಒಟ್ಟು 1648 ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ 26,433 ಮತದಾರರನ್ನು ಸೇರ್ಪಡೆ ಮಾಡಲಾಗಿದ್ದು, 20,594 ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದರು.

ಪರಿಷ್ಕರಣೆ ನಂತರ ವಿಧಾನಸಭಾ ಕ್ಷೇತ್ರವಾರು ಮತದಾರರ ವಿವರದ ಅನ್ವಯ ಮೊಳಕಾಲ್ಮೂರು 2,30,560, ಚಳ್ಳಕೆರೆ 2,09,814, ಚಿತ್ರದುರ್ಗ 2,51,312, ಹಿರಿಯೂರು 2,33,775, ಹೊಸದುರ್ಗ 1,87,654, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2,26,133 ಮತದಾರರಿದ್ದಾರೆ. ಪರಿಷ್ಕರಣೆ ಅವಧಿಯಲ್ಲಿ ಹೊಸದಾಗಿ ನೋಂದಾಯಿಸಲು ನಮೂನೆ-6ರ ಅಡಿ 26,511 ಅರ್ಜಿಗಳು ಸ್ವೀಕೃತವಾಗಿದ್ದವು. ಇದರಲ್ಲಿ 26,433 ಅನುಮೋದನೆಯಾಗಿ 78 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ನಮೂನೆ 7ರಲ್ಲಿ ಪಟ್ಟಿಯಿಂದ ಕೈಬಿಡಲು ಸಲ್ಲಿಸಿದ 21,201 ಅರ್ಜಿಗಳಲ್ಲಿ 20,594 ಅರ್ಜಿಗಳಿಗೆ ಅನುಮೋದನೆ ನೀಡಿ 607 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ನಮೂನೆ-8ರ ಅಡಿ ತಿದ್ದುಪಡಿಗಾಗಿ 8855 ಅರ್ಜಿಗಳು ಸಲ್ಲಿಕೆಯಾಗಿದ್ದು, 8830 ಅನುಮೋದನೆಯಾಗಿ 25 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ನಮೂನೆ-8 ಎ ಅಡಿ 1114 ಅರ್ಜಿಗಳನ್ನು ಸ್ವೀಕರಿಸಿ 1111 ಅನುಮೋದನೆಯಾಗಿ 3 ತಿರಸ್ಕರಿಸಲ್ಪಟ್ಟಿವೆ ಎಂದು ವಿವರಿಸಿದರು.

ಇಂಟರ್‌ನೆಟ್ ಮೂಲಕ ನಮೂನೆ-6 (1) ಅಡಿ 31, ನಮೂನೆ-7 (1) ಅಡಿ 22, ನಮೂನೆ-8 (1) ಅಡಿ 12 ಅರ್ಜಿಗಳು ಸ್ವೀಕೃತವಾಗಿ ಅನುಮೋದಿಸಲಾಗಿದೆ. ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್‌ ಮೂಲಕ ನಮೂನೆ-6 ರಲ್ಲಿ 94, ನಮೂನೆ-7 ರಲ್ಲಿ 18, 7ಎ ದಲ್ಲಿ 113 ಹಾಗೂ ನಮೂನೆ-8 ಎ ಅಡಿ 2 ಅರ್ಜಿಗಳು ಸ್ವೀಕೃತವಾಗಿದ್ದು ಅವೆಲ್ಲವನ್ನೂ ಅನುಮೋದಿಸಲಾಗಿದೆ. ಜಿಲ್ಲೆಯಲ್ಲಿ 17,87,580 ಜನಸಂಖ್ಯೆ ಇದ್ದು, ಇದರಲ್ಲಿ 13,39,248 ಮತದಾರರಿದ್ದಾರೆ.

ಇದು ಒಟ್ಟು ಜನಸಂಖ್ಯೆಯಲ್ಲಿ ಸರಾಸರಿ ಶೇ. 74.89 ಆಗುತ್ತದೆ. ಕರಡು ಪಟ್ಟಿಯಂತೆ 15,016 ಯುವ ಮತದಾರರಿದ್ದು ಪರಿಷ್ಕರಣೆ ಅವಧಿಯಲ್ಲಿ 12,817 ಯುವ ಮತದಾರರು ನೋಂದಾಯಿಸಿದ್ದರು. 18-19 ವರ್ಷದ ವಯೋಮಾನವುಳ್ಳ 27,833 ಯುವ ಮತದಾರರಿದ್ದಾರೆ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದುಕೊರತೆಯನ್ನು ಆಲಿಸಲು 1950 ಟೋಲ್‌ ಫ್ರೀ ಸಹಾಯವಾಣಿ ಸ್ಥಾಪಿಸಲಾಗಿದೆ. ಏನಾದರೂ ದೂರುಗಳಿದ್ದಲ್ಲಿ ಈ ಸಂಖ್ಯೆಗೆ ಕರೆ ಮಾಡಿ ದೂರು, ಮಾಹಿತಿ ನೀಡಬಹುದಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ವಿಜಯಕುಮಾರ್‌, ಚುನಾವಣಾ ತಹಶೀಲ್ದಾರ್‌ ಪ್ರತಿಭಾ ಇದ್ದರು.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.