ತೆರಿಗೆ ಪಾವತಿಸದ ಸೋಲಾರ್‌ ಕಂಪನಿಗಳ ವಿರುದ್ದ ಆಕ್ರೋಶ


Team Udayavani, Dec 15, 2018, 5:05 PM IST

chikk-1.jpg

ನಾಯಕನಹಟ್ಟಿ: ತೆರಿಗೆ ಪಾವತಿಸದ ಕಾರಣ ಸಮೀಪದ ಎನ್‌. ದೇವರಹಳ್ಳಿ ಗ್ರಾಪಂ ಸದಸ್ಯರು, ಗ್ರಾಮಸ್ಥರು ಸೋಲಾರ್‌ ಕಂಪನಿಗಳ ಬಳಿ ಅಡುಗೆ ತಯಾರಿಸಿ ಅನಿರ್ದಿಷ್ಟಾವಧಿ ಧರಣಿಯನ್ನು ಶುಕ್ರವಾರದಿಂದ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಪಂ ಸದಸ್ಯ ದಿವಾಕರರೆಡ್ಡಿ, ನಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ನಾಲ್ಕು ಸೋಲಾರ್‌ ಕಂಪನಿಗಳಿದ್ದು, ಕಳೆದ ನಾಲ್ಕು ವರ್ಷಗಳಿಂದ ಒಂದು ಪೈಸೆಯನ್ನೂ ಸಹ ಪಂಚಾಯತ್‌ಗೆ ತೆರಿಗೆ ಪಾವತಿಸಿಲ್ಲ. ಪಂಚಾಯ್ತಿಯಿಂದ ಆರು ಬಾರಿ ತಿಳಿವಳಿಕೆ ನೋಟಿಸ್‌ ನೀಡಿದರೂ ಪ್ರತಿಕ್ರಿಯಿಸದ ಕಾರಣ ಇಂದಿನಿಂದ ಅನಿರ್ದಿಷ್ಟಾವಧಿ ಧರಣಿಯನ್ನು ಕಂಪನಿ ಬಳಿ ಆರಂಭಿಸಿದ್ದೇವೆ ಎಂದರು.

ಕಂಪನಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ತೆರಿಗೆ ತುಂಬುವವರೆಗೂ ಇಲ್ಲಿಯೇ ಇರುತ್ತೇವೆ. ಅಡುಗೆ ಮಾಡಲು ಎಲ್ಲ ಪರಿಕರಗಳನ್ನು ತಂದು ಇಲ್ಲಿಯೇ ಅಡುಗೆ ತಯಾರಿಸಿಕೊಂಡು ಧರಣಿ ನಡೆಸುತ್ತೇವೆ ಎಂದು ಎಚ್ಚರಿಸಿದರು.  ಇಲ್ಲಿ ಸ್ಯಾಜೆಟೆರಿ, ಗ್ರೀನ್‌ಕೋ, ಎಂಪ್ಲಸ್‌, ಪೋರ್ಟಾನ್‌ ಎಂಬ ನಾಲ್ಕು ಕಂಪನಿಗಳಿದ್ದು, ನೂರಾರು ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡಿಕೊಳ್ಳುತ್ತಿವೆ. ಇವರಿಗೆ ಪಂಚಾಯ್ತಿ ನೋಟಿಸ್‌ ಕಾಲ ಕಸವಾಗಿದೆ. ಯಾವುದೇ ಉತ್ತರವನ್ನು ಇವರು ನೀಡಿಲ್ಲ. ಪ್ರತಿಬಾರಿಯೂ ನಾಲ್ಕೈದು ದಿನದಲ್ಲಿ ಪಾವತಿಸುತ್ತೇವೆ ಎಂದು ಸಬೂಬು ಹೇಳುತ್ತಾರೆ. ಈ ಬಾರಿ ಸರ್ಕಾರ ನಿಗದಿ ಪಡಿಸಿರುವ ತೆರಿಗೆಯನ್ನು ಪಂಚಾಯಿತಿಗೆ ಪಾವತಿಸುವವರೆಗೂ ಧರಣಿ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದರು.

ಎನ್‌.ದೇವರಹಳ್ಳಿ ಗ್ರಾಪಂ ವ್ಯಾಪ್ತಿಗೊಳಪಡುವ ವರವು ಕಾವಲಿನಲ್ಲಿ 993 ಎಕರೆ ವಿಸ್ತೀರ್ಣದಲ್ಲಿ ನಾಲ್ಕು ಸೋಲಾರ್‌
ಕಂಪನಿಗಳು ವಿದ್ಯುತ್‌ ಉತ್ಪಾದಿಸುತ್ತಿವೆ. ಸರ್ಕಾರದ ನಿಯಮಾವಳಿಯಂತೆ ನಿಗದಿತ ತೆರಿಗೆ ಪಾವತಿಸಿಲ್ಲ. ಕಂಪನಿಗಳು ತಮ್ಮ ಲಾಭಾಂಶದಲ್ಲಿ ಹಳ್ಳಿಗಳ ಮೂಲ ಸೌಕರ್ಯ, ಶಾಲೆಗಳ ಅಭಿವೃದ್ಧಿಗೆ ಸಹಕರಿಸಬೇಕು. ಈ ಸೋಲಾರ್‌ ಕಂಪನಿಯವರು ತೆರಿಗೆ ಪಾವತಿಸದೇ ವಂಚಿಸುತ್ತಿದ್ದಾರೆ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದು ಗ್ರಾಪಂ ಉಪಾಧ್ಯಕ್ಷ ದಾದಯ್ಯ ಆರೋಪಿಸಿದರು. 

ಸ್ಯಾಜೆಟರಿ ಕಂಪನಿಯ ವ್ಯವಸ್ಥಾಪಕ ಸೂರ್ಯನಾರಾಯಣ ಮಾತನಾಡಿ, ನಾಲ್ಕು ಕಂಪನಿಗಳಿಂದ ಒಟ್ಟು ಒಂದು ದಿನಕ್ಕೆ 165 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗುತ್ತಿದೆ. ಮೇಲಿನ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ನಾಲ್ಕೈದು ದಿನಗಳಲ್ಲಿ ಪಂಚಾಯತಿಗೆ ಕರ ಪಾವತಿಸಲಾಗುತ್ತದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.