ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ
Team Udayavani, Aug 9, 2020, 3:59 PM IST
ಮಾಯಕೊಂಡ: ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ರೈತ ಸಂಘದ ರಾಜ್ಯ ಕಾರ್ಯದರ್ಶಿ ಬಲ್ಲೂರು ರವಿಕುಮಾರ್ ಮಾತನಾಡಿ, ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆ, ವಿದ್ಯುತ್ ಖಾಸಗೀಕರಣ ಬೀಜ ಕಾಯ್ದೆಗಳನ್ನು ತಿದ್ದುಪಡಿ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಿವೆ. ಕೋವಿಡ್ ನೆಪವೊಡ್ಡಿ ದೇಶದಲ್ಲಿ 144ನೇ ಸೆಕ್ಷನ್ ಜಾರಿ ಮಾಡಲು ಹುನ್ನಾರ ನಡೆಸಿವೆ ಎಂದು ಆರೋಪಿಸಿದರು. ಅಗತ್ಯ ವಸ್ತುಗಳ ಕಾಯ್ದೆಯಡಿ ಖರೀದಿ ದಾಸ್ತಾನು ಮಾರಾಟ ದರಗಳ ಮೇಲಿನ ಸರ್ಕಾರದ ನಿಯಂತ್ರಣವನ್ನು ತೆಗೆದು ಹಾಕುವುದರಿಂದ ಡಿಮಾರ್ಟ್, ರಿಲಯನ್ಸ್, ಮೋರ್, ಬಿಗ್ ಬಾಸ್ಕೆಟ್ ಮುಂತಾದ ದೈತ್ಯ ಕಂಪನಿಗಳ ಹಿಡಿತಕ್ಕೆ ಅನೂಕೂಲ ಮಾಡಿಕೊಟ್ಟಂತಾಗುತ್ತದೆ. ಆದ್ದರಿಂದ ತಿದ್ದುಪಡಿಯನ್ನು ರದ್ದು ಮಾಡಬೇಕು ಹಾಗೂ ಕೃಷಿ ಸೇವೆಗಳ ರೈತರ ಒಪ್ಪಂದದ ಸುಗ್ರೀವಾಜ್ಞೆ ರದ್ದು ಮಾಡಿ ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.
ಮಾಯಕೊಂಡ ಠಾಣೆ ಪಿಎಸ್ಐ ಮೂಲಕ ಸರ್ಕಾರಕ್ಕೆ
ಮನವಿ ಸಲ್ಲಿಸಲಾಯಿತು. ರೈತ ಮುಖಂಡರಾದ ಚಿಕ್ಕನಹಳ್ಳಿ ರೇವಣ್ಣ, ಪ್ರಸಾದ್, ಪಾಮೇನಹಳ್ಳಿ ಲಿಂಗರಾಜು, ಅಣಬೇರು ಕುಮಾರಸ್ವಾಮಿ, ಆನಗೋಡು ಭೀಮಣ್ಣ, ಸಿ.ಟಿ. ನಿಂಗಪ್ಪ, ಪ್ರತಾಪ, ಗೌಡ್ರ ಅಶೋಕ, ರೇವಣ್ಣ, ಮುಂಡರಗಿ ರಾಮಣ್ಣ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪೂಜಾರ್ ಮೋಹನ್, ಮಾಜಿ ಅಧ್ಯಕ್ಷ ಪ್ರಕಾಶ್, ಮುಖಂಡರಾದ ಒಳಗಡ್ಡಿ ಲಕ್ಷ್ಮಣ್ಣ, ಪುಟ್ಟರಂಗಸ್ವಾಮಿ, ಗಂಗಾಧರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ