ಕೇಂದ್ರ ಸರ್ಕಾರ ಹತೋಟಿ ಸಾಧಿಸುವ ಸಂಚು ಮಾಡಿದ್ರೆ..: ಪಂಡಿತಾರಾಧ್ಯ ಶ್ರೀ


Team Udayavani, Jul 21, 2021, 11:08 AM IST

ಕೇಂದ್ರ ಸರ್ಕಾರ ಹತೋಟಿ ಸಾಧಿಸುವ ಸಂಚು ಮಾಡಿದ್ರೆ..: ಪಂಡಿತಾರಾಧ್ಯ ಶ್ರೀ

ಚಿತ್ರದುರ್ಗ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತಷ್ಟು ಬಲವಾಗುತ್ತಿದ್ದಂತೆ ವಿವಿಧ ಸಮುದಾಯಗಳ ಸ್ವಾಮೀಜಿಗಳು ಮುಖ್ಯಮಂತ್ರಿಯವರ ಬೆಂಬಲಕ್ಕೆ ನಿಂತಿದ್ದಾರೆ. ಇದೀಗ ಸಾಣೇಹಳ್ಳಿಯ ತರಳಬಾಳು ಶಾಖಾ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಯಾವುದೇ ಸರ್ಕಾರಕ್ಕೆ ಪೂರ್ಣ ಸ್ವಾತಂತ್ರ್ಯವಿದ್ದಾಗ ಉತ್ತಮ ಆಡಳಿತ ಸಾಧ್ಯ. ಕೇಂದ್ರ ಸರ್ಕಾರ ಹತೋಟಿ ಸಾಧಿಸುವ ಸಂಚು ಮಾಡಿದರೆ ಎಂಥಹ ಮುಖ್ಯಮಂತ್ರಿ ಇದ್ದರೂ ಪರಿಪೂರ್ಣ ಆಡಳಿತ ಅಸಾಧ್ಯ. ಅವರ ಕೈ ಕಟ್ಟಿ ಹಾಕುತ್ತಾರೆ, ಬಿಎಸ್ ವೈ ವಿಚಾರದಲ್ಲಿ ಹೀಗಾಗಿದೆ. ಉತ್ತಮ ಆಡಳಿತಕ್ಕೆ ಎಲ್ಲರ ಸಹಕಾರ ಮುಖ್ಯ ಎಂದು ಕೇಂದ್ರ ಮತ್ತು ರಾಜ್ಯದ ನಾಯಕರಿಗೆ ಪಂಡಿತಾರಾಧ್ಯಶ್ರೀಗಳು ಕಿವಿಮಾತು ಹೇಳಿದರು.

ಯಾವುದೇ ಪಕ್ಷದ ವ್ಯಕ್ತಿ ಕನಿಷ್ಠ‌ 5 ವರ್ಷ ಮುಂದುವರೆದರೆ ಒಳ್ಳೆಯ ಕಾರ್ಯ ಸಾಧ್ಯ. ಕೇಂದ್ರ, ರಾಜ್ಯ ಪ್ರತಿನಿಧಿಗಳು ಸಿಎಂಗೆ ಸಂಪೂರ್ಣ ಸ್ವತಂತ್ರ್ಯ ನೀಡಬೇಕು. ಒಳ್ಳೆಯ ಆಡಳಿತ ನಡೆಸಲು ಅವಕಾಶ ಕಲ್ಪಿಸಬೇಕು. ಆಡಳಿತದಲ್ಲಿ ದೋಷ ಕಂಡರೆ ಆಗ ಕ್ರಮ ಕೈಗೊಳ್ಳಬೇಕು. ಎರಡು ವರ್ಷಕ್ಕೆ ಮುಖ್ಯಮಂತ್ರಿ ಬದಲಿಸಬಾರದು ಎಂದಿದ್ದಾರೆ.

ಇದನ್ನೂ ಓದಿ:ಕೊನೆಯ ಹಂತದ ಪ್ರಯತ್ನ?: ಏಕಾಂಗಿಯಾಗಿ ದೆಹಲಿಗೆ ಹೊರಟ ರೇಣುಕಾಚಾರ್ಯ!

ಸಿಎಂ ಬದಲಾವಣೆಯಿಂದ ಅಧಿಕಾರಿಗಳು ಕೆಲಸ ಮಾಡಲು ಅಸಾಧ್ಯವಾಗುತ್ತದೆ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಲಿ. ಹಾಲಿ ಸಿಎಂಗೆ ಪೂರ್ಣಾವಧಿ ಕೆಲಸ ಮಾಡಲು ಬಿಡಬೇಕು. ಸಿಎಂ ಬಿಎಸ್ ವೈ ಯಶಸ್ವಿಯಾಗಿ ಕೋವಿಡ್ ನಿರ್ವಹಿಸಿದ್ದಾರೆ. ಈ ವೇಳೆ ನೆಪ ಮಾಡಿಕೊಂಡು ಸಿಎಂ ಬದಲಾವಣೆ ಕೃತ್ಯ ನಡೆಸುವುದು ಒಳ್ಳೆಯ ರಾಜಕಾರಣದ ಸಂಕೇತ ಅಲ್ಲ. ಈಗಲಾದರೂ ಕೇಂದ್ರ ಸರ್ಕಾರ ಅನಾವಶ್ಯಕ ಮೂಗು ತೂರಿಸುವುದು ಬಿಡಲಿ ಎಂದು ಬಿಎಸ್ ವೈ ಪರವಾಗಿ ಮಾತನಾಡಿದ್ದಾರೆ.

ಕರ್ನಾಟಕ ಸರ್ಕಾರಕ್ಕೆ ಹೆಚ್ಚು ಆರ್ಥಿಕ ನೆರವು ನೀಡಬೇಕು. ಆರ್ಥಿಕ ನೆರವು ನೀಡದೆ ಪದೇ ಪದೇ ಕಿರುಕುಳ ನೀಡಿದರೆ ಉತ್ತಮ‌ ಆಡಳಿತ ಅಸಾಧ್ಯ. ಮತ್ತೆ ಅವರನ್ನು ತೆಗೆದು ಮತ್ತೊಬ್ಬರನ್ನು ನೇಮಿಸುವುದರಿಂದ ಕರ್ನಾಟಕದಲ್ಲಿ ಅವ್ಯವಸ್ಥೆ ಸೃಷ್ಠಿ ಆಗುತ್ತದೆ. ಅವ್ಯವಸ್ಥೆ ಆಗಲು ಕೇಂದ್ರ ಸರ್ಕಾರ ಅವಕಾಶ ನೀಡಬಾರದು ಎಂದು ಪಂಡಿತಾರಾಧ್ಯ ಶ್ರೀ ಹೇಳಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.