ರಾಜಕೀಯ ಶಕ್ತಿಯಿಂದ ಸಮಾಜ ಪರಿವರ್ತನೆ


Team Udayavani, Nov 3, 2020, 7:42 PM IST

cd-tdy-1

ಹೊಸದುರ್ಗ: ಸಮಾಜ ಪರಿವರ್ತನೆಗೆ ರಾಜಕೀಯ ಶಕ್ತಿಯ ಕೊಡುಗೆ ಬಹಳ ಮುಖ್ಯ. ರಾಜಕೀಯ ಸಿದ್ಧಾಂತಗಳ ಬದಲಾವಣೆಯಲ್ಲಿ ಸಾಮಾಜಿಕ, ಧಾರ್ಮಿಕ ನೇತಾರರ ಆಶೋತ್ತರಗಳೂ ಸೇರಿರುತ್ತವೆ. ಅವು ಸಮಾನಾಂತರ ರೇಖೆಯಲ್ಲಿ ಸಾಗಿದಾಗ ಸಮಾಜದಲ್ಲಿ ಅದ್ಭುತ ಬದಲಾವಣೆ ಕಾಣಬಹುದು ಎಂದು ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲೂಕಿನ ಸಾಣೇಹಳ್ಳಿಯ ತರಳಬಾಳು ಜಗದ್ಗುರು ಮಠದ ಶಾಖಾ ಮಠದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಅಂತರ್ಜಾಲ ನಾಟಕೋತ್ಸವದ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು. ಪ್ರಸ್ತುತ ಪಕ್ಷಾಧಾರಿತ ಆಡಳಿತದ ಕಾರಣದಿಂದ ಒಂದು ಪಕ್ಷ ಅಧಿಕಾರಕ್ಕೆ ಬಂದಾಗ ತೆಗೆದುಕೊಂಡ ನಿಲುವುಗಳು ಅದು ಜಾರಿಯಾಗುವ ಮೊದಲೇ ಮತ್ತೂಂದು ಪಕ್ಷದ ಸರ್ಕಾರ ಆಡಳಿತಕ್ಕೆ ಬಂದಿರುತ್ತದೆ. ಆಗ ಹಿಂದಿನ ಸರ್ಕಾರದ ನಿಲುವನ್ನು ಒಪ್ಪಬಹುದು ಅಥವಾ ತಿರಸ್ಕರಿಸಬಹುದು. ಹೀಗಾಗಿ ಪಕ್ಷ ರಾಜಕಾರಣದಿಂದಾಗಿ ಸಮಾಜದಲ್ಲಿ ಪ್ರಗತಿ ನಿಂತ ನೀರಿನಂತಾಗುತ್ತಿದೆ. ಸಮಾಜದಲ್ಲಿನ ಸಂಘಟನಾ ಶಕ್ತಿ ಕೊರತೆಯಿಂದ ರಾಜಕೀಯ ಶಕ್ತಿಯ ಕೈ ಮೇಲಾಗಿದೆ. ಇವತ್ತು ಸಾಮಾಜಿಕ ಹೊಣೆಗಾರಿಕೆ ಯಾರಿಗೆ ಇದೆ ಎನ್ನುವುದು ಪ್ರಶ್ನಾರ್ಹ. ಅದನ್ನು ಕಟ್ಟಿಕೊಂಡು ನನಗೇನಾಗಬೇಕಾಗಿದೆ, ನಾನು ಹೇಗೋ ಬದುಕಿದರಾಯ್ತು ಎನ್ನುವ ಪಲಾಯನವಾದ ಸಮಾಜದಲ್ಲಿ ಹೆಚ್ಚುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇಂದು ಪಕ್ಷಾಧಾರಿತ ರಾಜಕಾರಣ ಸಮಾಜವನ್ನು ನಿಯಂತ್ರಿಸುತ್ತಿದೆ. ಎಲ್ಲ ಪಕ್ಷಗಳು ಧರ್ಮಾತೀತ,ಜಾತ್ಯತೀತ ಎಂದು ಹೇಳಿದರೂ ಮೂಲದಲ್ಲಿ ಅವು ಹಾಗಿಲ್ಲ. ಅವೆಲ್ಲ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಪ್ರಚಲಿತ ರಾಜಕಾರಣದಿಂದಾಗಿ ಸಮಾಜ ನಿಷ್ಕ್ರಿಯವಾಗಿದೆ ಎಂದರು.

“ರಾಜಕೀಯ ಮತ್ತು ಸಾಮಾಜಿಕ ಸ್ಥಿತ್ಯಂತರ’ ವಿಷಯದ ಕುರಿತು ನವದೆಹಲಿಯ ಜವಾಹರಲಾಲ್‌ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ| ವೆಂಕಟಾಚಲ ಹೆಗಡೆ ಮಾತನಾಡಿದರು. ಪಂಡಿತಾರಾಧ್ಯ ಶ್ರೀಗಳ “ಸಂಸ್ಕಾರ’ ಕೃತಿಯನ್ನು ಬೆಂಗಳೂರಿನ ಮುಕ್ತಾ ಬಿ. ಕಾಗಲಿ ಲೋಕಾರ್ಪಣೆ ಮಾಡಿದರು.

ಅಸಹಾಯಕರಿಗೆ ಸಹಾಯವಾಗಲಿ ಎಂದು ಸರ್ಕಾರ ಸೌಲಭ್ಯಗಳನ್ನು ನೀಡಿದರೆ ಆ ಸೌಲಭ್ಯ ನಮಗೂ ಬೇಕು ಎಂದು ಕೈ ಒಡ್ಡುವ, ಪ್ರತಿಭಟಿಸುವ ಜನರೂ ಇದ್ದಾರೆ. ಇವತ್ತಿನ ರಾಜಕೀಯ ವ್ಯವಸ್ಥೆಯಲ್ಲೇ ಅನೇಕ ದೋಷಗಳಿವೆ. ರಾಜಕೀಯ ಪ್ರವೇಶದಲ್ಲಿ ಜನಸೇವೆಗಿಂತ ಸ್ವಾರ್ಥ ಭಾವನೆಯೇ ಹೆಚ್ಚಾಗಿದೆ. -ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.