ವಿಜೃಂಭಣೆಯ ಚಿಲುಮೆ ರುದ್ರಸ್ವಾಮಿ ರಥೋತ್ಸವ
Team Udayavani, Feb 5, 2020, 5:39 PM IST
ಪರಶುರಾಂಪುರ: ಸಮೀಪದ ನಾಗಗೊಂಡನಹಳ್ಳಿ ಗ್ರಾಮದ ಬಳಿಯ ವೇದಾವತಿ ನದಿ ದಡದಲ್ಲಿನ ಶ್ರೀ ಚಿಲುಮೆ ರುದ್ರಸ್ವಾಮಿ ಮಠದಲ್ಲಿ ಮಂಗಳವಾರ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಸಾನ್ನಿಧ್ಯ ವಹಿಸಿದ್ದರು. ಗದ್ದುಗೆ ಮಠದ ಚರಮೂರ್ತಿಗಳಾದ ಶ್ರೀ ಬಸವಕಿರಣ ಸ್ವಾಮೀಜಿ ಹಾಗೂ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ರಥೋತ್ಸವಕ್ಕೆ ಚಾಲನೆ ನೀಡಿದರು.
ನಾಗಗೊಂಡನಹಳ್ಳಿಯ ಹನ್ನೆರಡು ಕೈವಾಡಸ್ಥರು, ರೈತ ಮುಖಂಡ ಕೆ.ಪಿ. ಭೂತಯ್ಯ, ತಾಪಂ ಮಾಜಿ ಅಧ್ಯಕ್ಷ ಜಿ. ವೀರೇಶ್, ಶ್ರೀ ಗುರು ಚಿಲುಮೆ ರುದ್ರಸ್ವಾಮಿ ಗದ್ದುಗೆ ಮಠ ಸಮಿತಿ ಉಪಾಧ್ಯಕ್ಷ ಎಚ್. ಓಬಳೇಶಪ್ಪ, ಕಾರ್ಯದರ್ಶಿ ಜೆ.ಎಚ್. ಬೊಮ್ಮಯ್ಯ, ಸಹ ಕಾರ್ಯದರ್ಶಿ ಜಿ.ಟಿ. ರವಿಕುಮಾರ್, ಎಂ. ಉಮಾಮಹೇಶ್ವರಯ್ಯ, ರವಿಚಂದ್ರ, ಬಸವರಾಜು, ಪಾಲನೇತ್ರಪ್ಪ, ನರಸಿಂಹಪ್ಪ ಮೊದಲಾದವರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ರಥವನ್ನು ವಿವಿಧ ಹೂವುಗಳು, ಬಾಳೆಗೊನೆ, ಎಳನೀರಿನ ಗೊಂಚಲಿನಿಂದ ಅಲಂಕರಿಸಲಾಗಿತ್ತು. ರಥದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ರಥಕ್ಕೆ ಹಣ್ಣು-ಕಾಯಿ ಸಮರ್ಪಿಸಿ ಭಕ್ತರು ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು. ರಥೋತ್ಸವಕ್ಕೂ ಮುನ್ನ ಮುಕ್ತಿ ಬಾವುಟ ಹರಾಜು ನಡೆಯಿತು. ಮೂರನೇ ಬಾರಿಯೂ ಜಾಜೂರು ಗ್ರಾಪಂ ಅಧ್ಯಕ್ಷೆ ಭೀಮಕ್ಕ 21 ಸಾವಿರ ರೂ.ಗಳಿಗೆ ಮುಕ್ತಿ ಬಾವುಟವನ್ನು ತಮ್ಮದಾಗಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು