ಬ್ಯಾಂಕ್‌ ವಹಿವಾಟಿನಲ್ಲಿ ಪಾಲ್ಗೊಳ್ಳಿ


Team Udayavani, May 18, 2018, 3:48 PM IST

cta-2.jpg

ಚಳ್ಳಕೆರೆ: ರಾಷ್ಟ್ರದಲ್ಲಿರುವ ಪ್ರತಿಯೊಂದು ಕುಟುಂಬ ಬ್ಯಾಂಕ್‌ನೊಂದಿಗೆ ವ್ಯವಹಾರವನ್ನು ಹೊಂದಬೇಕು. ಬ್ಯಾಂಕ್‌ನಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಎಸ್‌ಬಿಎಂ ಹಿರಿಯ ವ್ಯವಸ್ಥಾಪಕ ಎಂ. ಪ್ರಕಾಶ್‌ ಹೇಳಿದರು.

ಗುರುವಾರ ಬ್ಯಾಂಕ್‌ ಆವರಣದಲ್ಲಿ ನಡೆದ “ಬ್ಯಾಂಕ್‌ ಮಿತ್ರ’ ಯೋಜನೆಯ ಸೇವಾ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರು ಬ್ಯಾಂಕ್‌ ನಿಯಮಾನುಸಾರ ಸಾಲ ಪಡೆದು ಕುಟುಂಬದ ಆರ್ಥಿಕ ಶಕ್ತಿಯನ್ನು ವೃದ್ಧಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ “ಬ್ಯಾಂಕ್‌ ಮಿತ್ರ’ ಎಂಬ ಸೇವೆಯನ್ನು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ಪರಿಚಯಿಸಲಾಗಿದೆ ಎಂದರು.

ದೇಶದಲ್ಲಿ ಪ್ರಸ್ತುತ ಕೇವಲ ಶೇ. 55ರಷ್ಟು ಜನರು ಮಾತ್ರ ಬ್ಯಾಂಕ್‌ ವ್ಯವಹಾರವನ್ನು ಬಲ್ಲವರಾಗಿದ್ಧಾರೆ. ಇನ್ನುಳಿದ ಶೇ. 45ರಷ್ಟು ಜನರು ಬ್ಯಾಂಕ್‌ ವ್ಯವಹಾರದ ವ್ಯಾಪ್ತಿಗೆ ಸೇರಿಲ್ಲ. ಹಲವಾರು ಕಾರಣಗಳಿಂದಾಗಿ ಬ್ಯಾಂಕ್‌ ವ್ಯವಹಾರಗಳಿಂದ ದೂರ ಉಳಿದಿದ್ದಾರೆ. 

ಇದು ನಮ್ಮ ಒಟ್ಟಾರೆ ಆರ್ಥಿಕ ವ್ಯವಸ್ಥೆಗೆ ಧಕ್ಕೆ ತರುವ ಸಂಭವವಿದೆ. ಆದ್ದರಿಂದ ಗ್ರಾಮಾಂತರ ಪ್ರದೇಶದ ಪ್ರತಿ ಮನೆಗೆ ಬ್ಯಾಂಕ್‌ನ ಸಿಬ್ಬಂದಿ ಭೇಟಿ ನೀಡಿ ಅವರಿಂದ ಮಾಹಿತಿ ಪಡೆದು ಬ್ಯಾಂಕ್‌ ಖಾತೆ ಪ್ರಾರಂಭಿಸುವಂತೆ ಮನವರಿಕೆ ಮಾಡಲಲಿದ್ದಾರೆ. ಅಲ್ಲದೆ ಬ್ಯಾಂಕ್‌ನಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.

ಪ್ರತಿಯೊಬ್ಬರಿಗೂ ಬ್ಯಾಂಕ್‌ ಸೇವೆ ದೊರೆಯುವಂತಾಗಲಿ ಇತ್ತೀಚಿನ ದಿನಗಳಲ್ಲಿ ಬ್ಯಾಂಕ್‌ನ ವಹಿವಾಟುಗಳಲ್ಲಿ ಗ್ರಾಮೀಣ ಜನರು ಹೆಚ್ಚು ಭಾಗವಹಿಸದೇ ಇರುವುದು ಕಂಡು ಬಂದಿದೆ. ಕೆಲವರು ಆರ್ಥಿಕವಾಗಿ ಸಬಲರಾಗಿದ್ದರೂ ಬ್ಯಾಂಕ್‌ ಸೇವೆಯನ್ನು ಬಯಸುವುದಿಲ್ಲ. ಆದರೆ ಬಡತನ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಬ್ಯಾಂಕ್‌ನ ನೆರವು ಅತ್ಯಗತ್ಯ. ಕೆಲವರು ಬ್ಯಾಂಕ್‌ಗೆ ಆಗಮಿಸಿ ತಮ್ಮ ವಿಚಾರಗಳನ್ನು ತಿಳಿಸಲು ಹಿಂದೇಟು ಹಾಕುತ್ತಾರೆ. ಈ ನಿಟ್ಟಿನಲ್ಲಿ “ಬ್ಯಾಂಕ್‌ ಮಿತ್ರ’ ಯೋಜನೆ ಮೂಲಕ ನಮ್ಮ ಸಿಬ್ಬಂದಿ ಪ್ರತಿಯೊಬ್ಬರ ಮನೆಗೂ ಭೇಟಿ ನೀಡಿ ಅವರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು “ಬ್ಯಾಂಕ್‌ ಮಿತ್ರ’ ಜಿಲ್ಲಾ ಕೋ ಆರ್ಡಿನೇಟರ್‌ ಕೆ. ಪ್ರಭುದೇವ್‌ ತಿಳಿಸಿದರು. 

ಕಾರ್ಯಕ್ರಮದಲ್ಲಿ ಶ್ರೀಧರ ನಾಯಕ, ಸಿ.ಎಂ. ಪ್ರಕಾಶ್‌, ಭಾರತಿ, ಅನಿತಾ, ಮುರಳಿ, ಮಂಜುನಾಥ, ಫಾಲಾಕ್ಷ, “ಬ್ಯಾಂಕ್‌ ಮಿತ್ರ’ ತಾಲೂಕು ಕೋ ಆರ್ಡಿನೇಟರ್‌ ಮಹಲಿಂಗಪ್ಪ, ಅಶೋಕ್‌, ಜಯಣ್ಣ, ಹನುಮಂತಪ್ಪ, ವೆಂಕಟೇಶ್‌, ರೇಖಾ ಮೊದಲಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.