ಶಿಕ್ಷಕರ ನೇಮಕಾತಿಗೆ ಗಮನ ಕೊಡಿ


Team Udayavani, Sep 17, 2017, 5:33 PM IST

17-Chitraduragha-1.jpg

ಸಿರಿಗೆರೆ: ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ ಇದ್ದು, ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ವಿಳಂಬ ಮಾಡುತ್ತಿರುವುದರಿಂದ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತಿದೆ ಎಂದು ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು.

ಇಲ್ಲಿನ ಶ್ರೀ ಗುರುಶಾಂತೇಶ್ವರ ದಾಸೋಹಮಂಟಪದಲ್ಲಿ ನಡೆದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ವಾರ್ಷಿಕ ಮಹಾಸಭೆಯ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.

ಶಿಕ್ಷಕರ ನೇಮಕಾತಿ ವಿಳಂಬದಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೂ ತೊಂದರೆಯಾಗಿದೆ. ಆದ್ದರಿಂದ ಮಕ್ಕಳಿಗೆ ತೊಂದರೆಯಾಗದಂತೆ ನೆರೆಯ ಶಾಲೆಗಳ ಶಿಕ್ಷಕರನ್ನು ಎರವಲು ಸೇವೆಗೆ ಬಳಸಿಕೊಳ್ಳುವುದು ಇಲ್ಲವೇ ಸ್ಥಳೀಯವಾಗಿ ತಾತ್ಕಾಲೀನ ನೇಮಕಾತಿ ಮಾಡಿಕೊಳ್ಳುವುದರಿಂದ ಸಮಸ್ಯೆ ಸರಿಪಡಿಸಬಹುದು ಎಂದು ಸಲಹೆ ನೀಡಿದರು.

ಬೆಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ| ಕೆ. ಸಿದ್ದಪ್ಪನವರ ಮಾರ್ಗದರ್ಶನದಲ್ಲಿ ಪ್ರೌಢಶಾಲಾ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ರೂಪಿಸಿರುವ ಗಣಿತ ಮತ್ತು ವಿಜ್ಞಾನ ವಿಷಯಗಳ ಎಲೆಕ್ಟ್ರಾನಿಕ್‌ ಬೋಧನಾ ತಂತ್ರಾಂಶಗಳು ಪರಿಣಾಮಕಾರಿಯಾಗಿವೆ. ಅವುಗಳನ್ನು ಇ-ಟೀಚಿಂಗ್‌ ಬೋಧನಾ ರೂಪದಲ್ಲಿ ತರಳಬಾಳು ಸಂಸ್ಥೆಯ 91 ಪ್ರೌಢಶಾಲೆಗಳಲ್ಲಿ ಬಳಸಲಾಗುತ್ತಿದೆ. ಎಲ್ಲ ಪ್ರೌಢಶಾಲೆಗಳಿಗೆ ಕಂಪ್ಯೂಟರ್‌, ಯುಪಿಎಸ್‌ ಮತ್ತು ಪ್ರೊಜೆಕ್ಟರ್‌ಗಳನ್ನು ಒದಗಿಸಲಾಗಿದೆ. ಇವುಗಳನ್ನು ಬಳಸಿಕೊಂಡು ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಬೇಕು. ಶಿಕ್ಷಕರು ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸದೇ ಇದ್ದಲ್ಲಿ ಯಾವ ಯೋಜನೆಗಳು ಪರಿಣಾಮಕಾರಿಯಾಗುವುದಿಲ್ಲ. ಶಿಕ್ಷಕರು ಆಸಕ್ತಿಯಿಂದ ಮಕ್ಕಳನ್ನು ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು ಎಂದರು. ಹಲವು ಇಲಾಖೆಗಳಲ್ಲಿ ಹೆಚ್ಚುವರಿಯಾಗಿದ್ದ ನೌಕರರನ್ನು ನಮ್ಮ ಸಂಸ್ಥೆಯ ಪ್ರೌಢಶಾಲೆಗಳಿಗೆ ಸರ್ಕಾರ ನಿಯೋಜಿಸಿದೆ. ಅವರಲ್ಲಿ ಬಹುತೇಕ ನೌಕರರಿಗೆ ಕಂಪ್ಯೂಟರ್‌ ಜ್ಞಾನವಿಲ್ಲ. ಲೆಕ್ಕಪತ್ರಗಳ ನಿರ್ವಹಣೆಯೂ ಗೊತ್ತಿಲ್ಲ. ಆಸಕ್ತಿಯಿಂದ ಕೆಲಸ ಕಲಿತುಕೊಳ್ಳುವಂತೆ ಅವರಿಗೆ ಸೂಚಿಸಲಾಗಿದೆ. ಕೆಲಸದಲ್ಲಿ ಆಸಕ್ತಿ ತೋರಿಸದೇ ಇದ್ದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದೆಂದು ತಿಳಿಸಿದರು.

ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ನೀಡಬೇಕೆಂಬ ಆಶಯದಿಂದ ರಾಜ್ಯದ ಹಲವೆಡೆ ಸುಮಾರು 50 ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿದೆ. ಅವುಗಳಿಗೆ ನಿವೇಶನ, ಕಟ್ಟಡ, ಬಸ್‌ ಸೌಲಭ್ಯ ಒದಗಿಸಲು ಕೋಟ್ಯಂತರ ರೂ. ವ್ಯಯಿಸಲಾಗಿದೆ. ಬಹುತೇಕ ಶಾಲೆಗಳು ಗ್ರಾಮಾಂತರ ಪ್ರದೇಶಗಳಲ್ಲಿದ್ದು ಪೋಷಕರಿಂದ ಸಕಾಲದಲ್ಲಿ ಶುಲ್ಕ ಸಂಗ್ರಹವಾಗುತ್ತಿಲ್ಲ. ನೌಕರರಿಗೆ ವೇತನ ನೀಡಲೂ ಸಂಪನ್ಮೂಲ ಕಡಿಮೆ ಇದೆ. ಈ ಶಾಲೆಗಳಿಂದ ಸುಮಾರು ಎಂಟೂವರೆ ಕೋಟಿ ರೂ. ಶುಲ್ಕ ಸಂಗ್ರಹವಾಗಬೇಕಾಗಿದೆ. ಹೀಗಿದ್ದರೂ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಸಂಸ್ಥೆಯಿಂದಲೇ ವೇತನ ನೀಡಲಾಗುತ್ತಿದೆ ಎಂದರು.

ಸಂಸ್ಥೆಯ ಕಾರ್ಯಕಾರಿ ಮಂಡಳಿ ಸದಸ್ಯ, ವಿಶ್ರಾಂತ ಕುಲಪತಿ ಡಾ| ಕೆ. ಸಿದ್ದಪ್ಪ ಮಾತನಾಡಿ, ಪೈಪೋಟಿಗಿಳಿದಿರುವ ಕಾನ್ವೆಂಟ್‌ ಶಾಲೆಗಳಿಂದ ರಾಜ್ಯದಲ್ಲಿ ಕನ್ನಡ ಮಾಧ್ಯಮದ ಶಾಲೆಗಳು ನಿರ್ಲಕ್ಷ್ಯಕ್ಕೊಳಗಾಗಿವೆ. ಪೋಷಕರು ಇಂಗ್ಲಿಷ್‌ ಮಾಧ್ಯಮದ ಶಾಲೆಗಳತ್ತ ಆಕರ್ಷಿತರಾಗಿದ್ದಾರೆ. ಕನ್ನಡ ಮಾಧ್ಯಮದ ಶಾಲೆಗಳಲ್ಲೂ ಪ್ರತಿಭಾವಂತ ಶಿಕ್ಷಕರಿದ್ದು ಗುಣಮಟ್ಟದ ಶಿಕ್ಷಣ ಲಭ್ಯವಾಗುತ್ತಿದೆ ಎಂಬುದನ್ನು ಮರೆಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಡಾ| ಎಸ್‌. ಸಿದ್ದಯ್ಯ, ಹನುಮಲಿ ಷಣ್ಮುಖಪ್ಪ, ಪ್ರೊ| ಸಿದ್ದಲಿಂಗಯ್ಯ, ಸಿ. ಸಿದ್ದಪ್ಪ, ಬಿ.ಟಿ. ಪುಟ್ಟಪ್ಪ, ಮಲ್ಲಿಕಾರ್ಜುನಪ್ಪ, ಎಚ್‌.ಜಿ. ರೇವಣ್ಣ ಉಪಸ್ಥಿತರಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಎಸ್‌.ಬಿ. ರಂಗನಾಥ್‌ ಸ್ವಾಗತಿಸಿದರು. ಶಿವಕುಮಾರ್‌ ಲೆಕ್ಕಪತ್ರ ಮಂಡಿಸಿದರು. ಅಧ್ಯಾಪಕ ರಾಜಶೇಖರ್‌ ನಿರೂಪಿಸಿದರು. ಡಾ| ಟಿ.ಎನ್‌. ದೇವರಾಜ್‌ ವಂದಿಸಿದರು.

ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಶಾಲಾ-ಕಾಲೇಜುಗಳಲ್ಲಿ ಪ್ರಸ್ತುತ 51 ಸಾವಿರ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರ ಮಾಹಿತಿಯನ್ನು ಕ್ರೋಢೀಕರಿಸುವ ಉದ್ದೇಶದಿಂದ ತಂತ್ರಾಂಶವೊಂದನ್ನು ಸಿದ್ಧಪಡಿಸಲಾಗುತ್ತಿದೆ. ಈ ತಂತ್ರಾಂಶದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಗಮನಿಸಬಹುದು. ಅಲ್ಲದೆ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಪ್ರೋತ್ಸಾಹಿಸಲು ಸಹಕಾರಿಯಾಗಲಿದೆ.
ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.