ಧರ್ಮ ಸಂರಕ್ಷ ಣೆಗೆ ಗಮನ ಕೊಡಿ
Team Udayavani, Apr 19, 2021, 9:30 PM IST
ಚಿತ್ರದುರ್ಗ: ಧರ್ಮವನ್ನು ನಾವು ರಕ್ಷಣೆ ಮಾಡಿದರೆ, ಆಪತ್ಕಾಲದಲ್ಲಿ ಅದು ನಮ್ಮ ರಕ್ಷಣೆಗೆ ಬರುತ್ತದೆ. ಎಲ್ಲರೂ ಧರ್ಮವನ್ನು ಅರಿತು ಪಾಲನೆ ಮಾಡಬೇಕು ಎಂದು ವೇಣುಕಲ್ಲುಗುಡ್ಡದ ಹಾಲಪ್ಪಯ್ಯ ಸ್ವಾಮಿ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ರಂಗಯ್ಯನಬಾಗಿಲು ಬಳಿ ಇರುವ ಉಜ್ಜಯಿನಿ ಮಠದಲ್ಲಿ ನಡೆದ ಲಿಂಗೈಕ್ಯ ಮರುಳಾರಾಧ್ಯ ಶಿವಾಚಾರ್ಯ ಭಗವತ್ಪಾದರ 26ನೇ ವರ್ಷದ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಜನ ಜಾಗೃತಿ ಕಾರ್ಯಕ್ರಮ ಹಾಗೂ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.
ರಾಜ್ಯದಲ್ಲಿ ಸರ್ಕಾರ ಮಾಡದಂತಹ ಕೆಲಸಗಳನ್ನು ನಾಡಿನ ವಿವಿಧ ಮಠಗಳು ಮಾಡುತ್ತಿವೆ. ವಿದ್ಯೆ, ಅನ್ನದಾನ ಮಾಡುವ ಮೂಲಕ ಸರ್ಕಾರದ ಹೊರೆಯನ್ನು ಕಡಿಮೆ ಮಾಡಿವೆ ಎಂದರು. ಹಿಂದೆ ರಾಜ-ಮಹಾರಾಜರು ಗುರುಗಳ ಆಜ್ಞೆಯನ್ನು ಮೀರುತ್ತಿರಲಿಲ್ಲ. ಗುರುಗಳ ಅನುಮತಿ ಸಿಕ್ಕಿದ ನಂತರವೇ ಕೆಲಸಕ್ಕೆ ಮುಂದಾಗುತ್ತಿದ್ದರು. ಚಿತ್ರದುರ್ಗದ ಮಹಾರಾಜರು ಸಹ ಮುರುಘಾ ಮಠದ ಶ್ರೀಗಳ ಆಣತಿಯಂತೆ ನಡೆಯುವ ಮೂಲಕ ಉತ್ತಮ ಆಡಳಿತ ನೀಡಿದ್ದಾರೆ.
ಇಂದಿಗೂ ಗುರುವಿನ ಕಾರುಣ್ಯ ಅತ್ಯಗತ್ಯವಾಗಿದೆ. ಅದಕ್ಕೆ ಈಗಿನ ಸರ್ಕಾರಗಳೂ ಹೊರತಾಗಿಲ್ಲ ಎಂದು ತಿಳಿಸಿದರು. ಮಾನವನಿಗೆ ಭಗವಂತ ಎಲ್ಲಾ ರೀತಿಯಾದ ಸೌಲಭ್ಯ ನೀಡಿದ್ದಾನೆ. ಗಾಳಿ, ಮಳೆ, ನೀರು, ಬೆಂಕಿಯಂತಹ ವಸ್ತುಗಳನ್ನು ನೀಡಿದ್ದಾನೆ. ಇವುಗಳ ಉಪಯೋಗ ಪಡೆದುಕೊಂಡ ಮಾನವ ದೇವರು ನಮಗೇನು ಕೊಟ್ಟಿದ್ದಾನೆ ಎಂದು ಪ್ರಶ್ನೆ ಮಾಡುವ ಮಟ್ಟಕ್ಕೆ ಬೆಳೆದಿದ್ದಾನೆ ಎಂದು ವಿಷಾದಿಸಿದರು. ಕಾರ್ಯಕ್ರಮದಲ್ಲಿ ಲಕ್ಷ್ಮೇಶ್ವರದ ಕರೆವಾಡಿ ಮಠದ ಶ್ರೀ ಮಳೆ ಮಲ್ಲಿಕಾರ್ಜನ ಸ್ವಾಮೀಜಿ, ಮುಸ್ಟೂರಿನ ಓಂಕಾರೇಶ್ವರ ಮಠದ ಶ್ರೀ ರುದ್ರಮುನಿ ಸ್ವಾಮಿಜಿ, ಉಜ್ಜಯನಿ ಮಠದ ನಿಯೋಜತ ಉತ್ತರಾಧಿಕಾರಿಗಳಾದ ಅಭಿಷೇಕ ದೇವರು, ಕಾರ್ಯದರ್ಶಿ ಈಶ್ವರಪ್ರಸಾದ್ ಪಾಲ್ಗೊಂಡಿದ್ದರು. ಎಂಟು ವಟುಗಳಿಗೆ ಲಿಂಗದೀಕ್ಷೆ ನೀಡಲಾಯಿತು. ಶ್ರೀ ಮಠದಲ್ಲಿನ ಬಿಲ್ವವೃಕ್ಷಕ್ಕೆ ಶಿವದೀಕ್ಷೆ, ಲಿಂಗೈಕ್ಯ ಜಗದ್ಗುರುಗಳ ಕತೃì ಗದ್ದುಗೆಗೆ ಹಾಗೂ ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ಮಹಾ ರುದ್ರಾಭೀಷೇಕ, ಸಹಸ್ರ ಬಿಲ್ವಾರ್ಚನೆ ಮಹಾಮಂಗಳಾರತಿ ನೆರವೇರವೇರಿದವು. ಲೋಕ ಕಲ್ಯಾಣಕ್ಕಾಗಿ ಗಣಹೋಮ, ನವಗ್ರಹ ಹೋಮ, ಧನ್ವಂತರಿ ಹೋಮ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ