ಶೇಂಗಾ ಬಿತ್ತನೆ ಬೀಜ ಕಳಪೆ: ರೈತರ ಆಕ್ರೋಶ


Team Udayavani, Jun 26, 2021, 1:14 PM IST

ಶೇಂಗಾ ಬಿತ್ತನೆ ಬೀಜ ಕಳಪೆ: ರೈತರ ಆಕ್ರೋಶ

ನಾಯಕನಹಟ್ಟಿ: ಕೃಷಿ ಇಲಾಖೆ ವಿತರಿಸಿದ ಬಿತ್ತನೆ ಶೇಂಗಾ ಕಾಯಿ ತುಂಬ ಹುಳುಗಳ ತುಂಬಿದ್ದು ಕಳಪೆಯಾಗಿವೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾರುಕಟ್ಟೆ ಬೆಲೆಗಿಂತ ಹೆಚ್ಚು ಬೆಲೆಗೆ ಕೃಷಿ ಇಲಾಖೆ ಶೇಂಗಾ ಕಾಯಿ ಮಾರಾಟ ಮಾಡುತ್ತಿದ್ದಾರೆ.  ಹೀಗಿದ್ದರೂ ಸರಕಾರ ಒದಗಿಸುವ ಬಿತ್ತನೆ ಬೀಜಗಳು ಉತ್ತಮ ಗುಣಮಟ್ಟದಿಂದ ಕೂಡಿದ್ದು, ಪ್ರಮಾಣೀಕೃತ ಬಿತ್ತನೆ ಬೀಜಗಳಾಗಿರುತ್ತವೆ ಎಂಬ ಏಕೈಕ ಕಾರಣದಿಂದ ಹೆಚ್ಚು ಬೆಲೆ ನೀಡಿ ಬಿತ್ತನೆ ಬೀಜ ಖರೀದಿಸಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಸಾಲ ಮಾಡಿ ತಂದ ಬಿತ್ತನೆ ಬೀಜದಲ್ಲಿ ಭಾರೀ ಪ್ರಮಾಣದಲ್ಲಿ ಹುಳುಗಳಿಂದ ರೈತರ ಆಕ್ರೋಶ ಹೆಚ್ಚಾಗಿದೆ.

ಸಮೀಪದ ಬಲ್ಲನಾಯಕನಹಟ್ಟಿ ಗ್ರಾಮದ ಕೆ.ಎಂ.  ಜಯಣ್ಣ ನಾಯಕನಹಟ್ಟಿ ರೈತ ಸಂಪರ್ಕ ಕೇಂದ್ರದಿಂದ 5 ಪ್ಯಾಕೆಟ್‌ ಬಿತ್ತನೆ ಶೇಂಗಾ ಕಾಯಿ ಖರೀದಿಸಿದ್ದಾರೆ. 30 ಕೆ.ಜಿ ತೂಕದ ಪ್ರತಿ ಪ್ಯಾಕೆಟ್‌ಗೆ 1,800 ರೂ.ಗಳಂತೆ 9 ಸಾವಿರ ತೆತ್ತು ಬಿತ್ತನೆ ಬೀಜ ತಂದಿದ್ದಾರೆ. ಖರೀದಿಸಿದ  ಶೇಂಗಾ ಕಾಯಿಗಳನ್ನು ಸುಲಿಯುವ ಸಂದರ್ಭದಲ್ಲಿ ಭಾರೀ ಪ್ರಮಾಣದ ಹುಳುಗಳ ಕಂಡುಬಂದಿವೆ.

ಖರೀದಿಸಿದ ಐದು ಪ್ಯಾಕೆಟ್‌ಗಳಲ್ಲಿ ನಾಲ್ಕು ಪ್ಯಾಕೆಟ್‌ಗಳ ಕಾಯಿಗಳಲ್ಲಿ ಹುಳುಗಳು ತುಂಬಿವೆ. ಬೀಜಗಳ ಒಳಗಿಂದ ಕಂದು ಬಣ್ಣದ ಹುಳುಗಳು ಹೊರಬರುತ್ತಿವೆ. ಹುಳುಗಳು ಬೀಜಗಳನ್ನು ಕೊರೆದು, ತಿಂದು ಜೊಳ್ಳಾಗಿಸಿವೆ. ಬೀಜಗಳು ಪೂರ್ತಿಯಾಗಿ ಹಾಳಾಗಿದ್ದು, ಬಿತ್ತನೆಗೆ ಸಾಧ್ಯವಿಲ್ಲದ ಪ್ರಮಾಣದಲ್ಲಿ ಹಾಳಾಗಿವೆ. ಇದೀಗ ಮತ್ತೂಮ್ಮೆ ಶೇಂಗಾ ಕಾಯಿ ಖರೀದಿಸಿ ಬೇರ್ಪಡಿಸಬೇಕಾದ ಅನಿವಾರ್ಯತೆ ಉಂಟಾಗಿದೆ. ಹಲವಾರು ರೀತಿಯ ರೈತರು ಇದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಸರಕಾರಿ ಸಂಸ್ಥೆಯಾದ ಕರ್ನಾಟಕ ರಾಜ್ಯ ಎಣ್ಣೆ ಕಾಳು ಬೀಜ ನಿಗಮದಿಂದ (ಕೆಓಎಪ್‌) ದಿಂದ ಬಿತ್ತನೆ ಶೇಂಗಾ ಮಾರಾಟ ಮಾಡಲಾಗುತ್ತಿತ್ತು. ಕೆ.ಓ.ಎಫ್‌ ವಿತರಿಸಿದ ಬಿತ್ತನೆ

ಬೀಜಗಳ ಹಲವಾರು ಲೋಡ್‌ಗಳಲ್ಲಿ ಬಿತ್ತನೆ ಬೀಜಗಳು ಜೊಳ್ಳಾಗಿರುವುದು ಕಂಡುಬಂದಿತ್ತು. ಈ ಬಗ್ಗೆ ರೈತರು ಹಾಗೂ ರೈತ ಸಂಘಟನೆಗಳು ಸರಕಾರಿ ಸಂಸ್ಥೆಗೆ ಬದಲಾಗಿ ಖಾಸಗಿ ಸಂಸ್ಥೆಗಳಿಂದ ಖರೀದಿಸುವಂತೆ ಒತ್ತಾಯಿಸಿದ್ದರು. ಈ ಬಾರಿ ಖಾಸಗಿ ಸಂಸ್ಥೆಯಿಂದ ಇಲಾಖೆಬಿತ್ತನೆ ಬೀಜ ಖರೀದಿಸಿದೆ. ರಾಷ್ಟ್ರೀಯಬೀಜ ನಿಗಮ ಹಾಗೂ ವಿಜಯಪುರ ಜಿಲ್ಲೆಯ ತಾಳಿಕೋಟೆಯ ಸಾಯಿ ಅಗ್ರೋ ಸೀಡ್ಸ್‌ ಕಂಪನಿ ಬಿತ್ತನೆ ಬೀಜ ಪೂರೈಸಿದೆ.

ಬೀಜಗಳನ್ನು ಪರಿಶೀಲಿಸಿದರೆ ಒಂದೆರಡು ವರ್ಷ ಹಳೆಯದಾದ ಶೇಂಗಾ ಕಾಯಿಗಳನ್ನು ಕಂಪನಿಯುಹಳೆಯ ಸ್ಟಾಕ್‌ಗಳನ್ನು ವಿತರಿಸಿರುವುದು ಕಂಡುಬಂದಿದೆ.ಮಾರಾಟದ ಬಿತ್ತನೆ ಬೀಜಗಳ ಗುಣಮಟ್ಟ ಕಾಪಾಡಿಕೊಳ್ಳುವುದು ಅಗತ್ಯ. ಕಳಪೆ ಬಿತ್ತನೆ ಬೀಜ ಪೂರೈಸುವ ಕಂಪನಿಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳಬೇಕು ಎನ್ನುವುದು ರೈತರ ಒತ್ತಾಯವಾಗಿದೆ.

ಕೆಲವೊಂದು ಸ್ಟಾಕ್‌ಗಳಲ್ಲಿ ಈ ದೂರುಗಳು ಕೇಳಿ ಬಂದಿವೆ. ಈ ಪ್ರಕರಣಗಳು ಕಂಡುಬಂದರೆ ಅಂಥ ಬೀಜಗಳನ್ನುರೈತರಿಂದ ಹಿಂಪಡೆದು, ಗುಣಮಟ್ಟದ ಬಿತ್ತನೆ ಬೀಜ ವಿತರಿಸಲಾಗುವುದು. ಗುಣಮಟ್ಟದಲ್ಲಿ ಯಾವುದೇ ಹೊಂದಾಣಿಕೆಮಾಡಿಕೊಳ್ಳುವುದಿಲ್ಲ. ರೈತರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ. ಇದರ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. –ಡಾ.ಮೋಹನ್‌ ಕುಮಾರ್‌,ಸಹಾಯಕ ನಿರ್ದೇಶಕರು, ಕೃಷಿ ಇಲಾಖೆ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.