ಭೌತಿಕ ಬೆಳವಣಿಗೆಯೇ ನೈಜ ಸ್ವಾತಂತ್ರ್ಯಾ
Team Udayavani, Dec 9, 2018, 4:28 PM IST
ಹೊಳಲ್ಕೆರೆ: ಭಾರತದ ಎಲ್ಲಾ ಪ್ರಜೆಗಳಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ದೊರಕಿಸಿಕೊಡುವುದೇ ಸಂವಿಧಾನದ ಗುರಿ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್. ಬಿಲ್ಲಪ್ಪ ಹೇಳಿದರು.
ಪಟ್ಟಣದ ವಕೀಲರ ಸಂಘದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ಕಾನೂನು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜವಾದಿ ಸಮಾಜದಲ್ಲಿ ಸ್ವಾತಂತ್ರ್ಯಾ ಎಂಬ ಪದ ಕೇವಲ ಘೋಷಣೆಯಾಗಿ ಉಳಿಯಬಾರದು. ಸ್ವಾತಂತ್ರ್ಯಾವೆಂದರೆ ಸಮೃದ್ಧ ಜೀವನಾವಕಾಶ ಎಂದರ್ಥ. ಪ್ರತಿಯೊಬ್ಬರ ಸಾಂಸ್ಕೃತಿಕ, ಬೌದ್ಧಿಕ ಹಾಗೂ ಭೌತಿಕ ಬೆಳವಣಿಗೆಯೇ ನಿಜವಾದ ಸ್ವಾತಂತ್ರ್ಯಾ. ವಕೀಲರು ಸತತ ಆಧ್ಯಯನದಲ್ಲಿ ತೊಡಗಬೇಕು. ಸಾಕ್ಷ್ಯಾ ಅಧಿನಿಯಮದಲ್ಲಿರುವ ಮಹತ್ವವನ್ನು ಅರಿತುಕೊಳ್ಳಬೇಕು. ಆಗ ಮಾತ್ರ ಉತ್ತಮ ವಕೀಲರಾಗಿ ಹೊರಹೊಮ್ಮಲು ಸಾಧ್ಯ ಎಂದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ. ವಸ್ತ್ರಮಠ ಮಾತನಾಡಿ, ನ್ಯಾಯಮೂರ್ತಿ ಬಿಲ್ಲಪ್ಪ ಅವರು ನ್ಯಾಯಾಂಗದ ಮಹತ್ವವನ್ನು ತಿಳಿಸಿಕೊಡುತ್ತಿದ್ದಾರೆ. ನಿವೃತ್ತಿ ಹೊಂದಿದ್ದರೂ ಜಿಲ್ಲೆಯಲ್ಲಿ ನಡೆಯುವ ಕಾನೂನು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾರ್ಗದರ್ಶನ
ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ವಕೀಲರ ಸಂಘದ ಅಧ್ಯಕ್ಷ ಜಿ.ಈ. ರಂಗಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಪ್ರೇಮಾ ವಸಂತ ರಾವ್ ಪವಾರ್, ಕಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ವಿ. ರವಿಕುಮಾರ್, ಹಿರಿಯ ವಕೀಲರಾದ ಎಸ್.ಎಂ. ಆನಂದಮೂರ್ತಿ, ಜಿ.
ಗೋವಿಂದರಾಜ್, ಎಂ. ಶಿವಶಂಕರ್, ವಕೀಲರ ಸಂಘದ ಉಪಾಧ್ಯಕ್ಷ ಆರ್. ಜಗದೀಶ್, ಕಾರ್ಯದರ್ಶಿ ಪ್ರದೀಪ್ ಕುಮಾರ್ ಹಾಗೂ ವಕೀಲರ ಸಂಘದ ಸದಸ್ಯರು ಇದ್ದರು. ಬಿ.ಎನ್. ಪ್ರಶಾಂತ್ ಸ್ವಾಗತಿಸಿದರು. ಎಸ್. ವೇದಮೂರ್ತಿ ನಿರೂಪಿಸಿದರು. ಇದೇ ಸಂದರ್ಭದಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಬರೆದಿರುವ “ಸಂವಿಧಾನ ಓದು’ ಪುಸ್ತಕವನ್ನು ಉಚಿತವಾಗಿ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ