ಪೈಪ್‌ಲೈನ್‌ ಕಾಮಗಾರಿ ಮೇಲ್ದರ್ಜೆಗೆ


Team Udayavani, Jun 11, 2018, 3:17 PM IST

chitra1.jpg

ಚಿತ್ರದುರ್ಗ: ಚಿತ್ರದುರ್ಗ ಮತ್ತು ಹಿರಿಯೂರು ನಗರಗಳಿಗೆ ಕುಡಿಯುವ ನೀರು ಪೂರೈಕೆ ಮೂಲದ ಹಿರಿಯೂರಿನ ವಾಣಿವಿಲಾಸ ಸಾಗರದ ಪೈಪ್‌ಲೈನ್‌ ಕಾಮಗಾರಿಯನ್ನು ಮೇಲ್ದರ್ಜೆಗೇರಿಸಲಾಗಿದೆ. ಅಕ್ಟೋಬರ್‌ ತಿಂಗಳಿನಲ್ಲಿ ಕಾಮಗಾರಿಗೆ ಚಾಲನೆ ದೊರೆಯಲಿದೆ.

ಚಿತ್ರದುರ್ಗ ನಗರದ ಜನತೆಗೆ ನೀರು ಸರಬರಾಜು ಮಾಡಲು 1972-73ನೇ ಸಾಲಿನಲ್ಲಿ ಮೊದಲ ಹಂತದ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿತ್ತು. ಸುಮಾರು 45 ವರ್ಷಗಳ ಹಳೆ ಯೋಜನೆ ಇದಾಗಿದ್ದು, 9.08 ಎಂಎಲ್‌ಡಿ ಸಾಮರ್ಥ್ಯ ಇತ್ತು. ಗರಿಷ್ಠ ನೀರು ಸರಬರಾಜು ಪ್ರಮಾಣ 5-6 ಎಂಎಲ್‌ ಡಿ ಸಾಮರ್ಥ್ಯವಾಗಿದೆ.

ಹಿರಿಯೂರಿನಿಂದ ಚಿತ್ರದುರ್ಗದವರೆಗೆ 34 ಕಿಮೀ ಉದ್ದದ ಏರುಕೊಳವೆ ಮಾರ್ಗದಲ್ಲಿ ನೀರು ಪೂರೈಕೆ
ಮಾಡಲಾಗುತ್ತಿತ್ತು. 9 ಎಂಎಲ್‌ಡಿ ಸಾಮರ್ಥಯದ ಜಲಶುದ್ಧೀಕರಣ ಘಟಕಕ್ಕೆ ಕಾಯಕಲ್ಪ ನೀಡಲಾಗುತ್ತಿದೆ. ಮೂಲ ಜಲ ಶುದ್ಧೀಕರಣ ಘಟಕ ಮತ್ತು ಬುರುಜನರೊಪ್ಪ ಪಂಪ್‌ಹೌಸ್‌ ಗಳು ಮೇಲ್ದರ್ಜೆಗೇರಲಿವೆ. ಬುರುಜನರೊಪ್ಪ ಐಪಿಎಸ್‌ನಲ್ಲಿ ಹೊಸದಾಗಿ ಸಂಪ್‌ ಮತ್ತು ಪಂಪ್‌ಹೌಸ್‌ ನಿರ್ಮಾಣ, ಚಿತ್ರದುರ್ಗ ನಗರದ ನಾಮಕಲ್‌ ಗ್ಯಾರೇಜ್‌ ಹತ್ತತಿರದ ಗುಡ್ಡದ ಮೇಲೆ 5 ಲಕ್ಷ ಲೀಟರ್‌ ಸಾಮರ್ಥ್ಯದ ನೆಲಮಟ್ಟದ ಜಲ ಸಂಗ್ರಹಾಗಾರ ನಿರ್ಮಾಣ ಮಾಡಲು ಅರಣ್ಯ ಇಲಾಖೆಯಿಂದ 0.31 ಹೆಕ್ಟೇರ್‌ ಜಮೀನು ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದೆ. 34.66 ಕಿಮೀ ಮಾರ್ಗದಲ್ಲಿ 400 ಮಿಮೀ ವ್ಯಾಸದ ಡಿಐ ಏರು ಕೊಳವೆ ಅಳವಡಿಕೆ ಕಾರ್ಯದಲ್ಲಿ 25 ಕಿಮೀಯಷ್ಟು ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ.

ಚಿತ್ರದುರ್ಗ ನಗರದಲ್ಲಿನ ಹಾಲಿ 5 ಟ್ಯಾಂಕ್‌ ಮತ್ತು 2 ಹೊಸ ಟ್ಯಾಂಕ್‌ಗಳಿಗೆ 8.5 ಕಿಮೀ ಉದ್ದದ ಕೊಳವೆಗಳ ಪೈಕಿ 7.8 ಕಿಮೀ ಉದ್ದದ ಕೊಳವೆಗಳನ್ನು ಅಳವಡಿಸಲಾಗಿದೆ. ಫೀಡರ್‌ ಕೊಳವೆ ಮಾರ್ಗಗಳ ಬದಲಾವಣೆ ಮಾಡಿ 9.3 ಕಿಮೀ ಉದ್ದದ ಪೈಪ್‌ ಅಳವಡಿಕೆ ಮಾಡಲಾಗುತ್ತದೆ. ಆಯುರ್ವೇದಿಕ್ ಕಾಲೇಜು ಹತ್ತಿರದ ಆದಿಶಕ್ತಿ ನಗರದಲ್ಲಿ 10 ಲಕ್ಷ ಲೀಟರ್‌ ಸಾಮರ್ಥ್ಯದ ಎರಡು ಮೇಲ್ಮಟ್ಟದ ಜಲಸಂಗ್ರಹಾಗಾರ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ.

ಯೋಜನೆಗೆ 47.65 ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ 2.80 ಕೋಟಿ ರೂ. ವೆಚ್ಚದಲ್ಲಿ 320 ಎಚ್‌ಪಿ ಸಾಮರ್ಥ್ಯದ 2 ಸೆಂಟ್ರಿ ಪ್ಯೂಗಲ್‌ ಪಂಪ್‌ ಸೆಟ್‌, 2.83 ಕೋಟಿ ರೂ. ವೆಚ್ಚದಲ್ಲಿ 300 ಎಚ್‌ಪಿ ಸಾಮರ್ಥ್ಯದ ಸೆಂಟ್ರಿಪ್ಯೂಗಲ್‌ ಪಂಪ್‌ಸೆಟ್‌ ಬದಲಾವಣೆ ಮಾಡಲಾಗುತ್ತಿದೆ. 30.90 ಕೋಟಿ ರೂ. ವೆಚ್ಚದಲ್ಲಿ 400 ಮಿಮೀ ವ್ಯಾಸದ ಡಿಐ ಏರುಕೊಳವೆ ಮಾರ್ಗವನ್ನು 30 ಕಿಮೀ ತನಕ ಅಳವಡಿಕೆ ಮಾಡಲಾಗುತ್ತದೆ. 

61 ಲಕ್ಷ ರೂ. ವೆಚ್ಚದಲ್ಲಿ 9.08 ಎಂಎಲ್‌ ಡಿ ಸಾಮರ್ಥ್ಯದ ಜಲ ಶುದ್ಧೀಕರಣ ಘಟಕಕ್ಕೆ ಕಾಯಕಲ್ಪ ನೀಡಲಾಗುತ್ತಿದೆ. 4.40 ಕೋಟಿ ರೂ. ವೆಚ್ಚದಲ್ಲಿ 7 ಜಲಸಂಗ್ರಹಾಗಾರಗಳಿಗೆ 10 ಕಿಮೀ ಫೀಡರ್‌ ಕೊಳವೆಮಾರ್ಗಗಳ ಬದಲಾವಣೆ ಮಾಡಲಾಗುತ್ತಿದ್ದು, ಭೂಸ್ವಾ ಧೀನ ವೆಚ್ಚವೂ ಇದರಲ್ಲಿ ಸೇರಿದೆ.

10 ಲಕ್ಷ ಲೀಟರ್‌ ಸಾಮರ್ಥ್ಯದ ಎರಡು ಟ್ಯಾಂಕ್‌ ನಿರ್ಮಿಸಲು 2.78 ಕೋಟಿ ರೂ. ವ್ಯಯಿಸಲಾಗುತ್ತದೆ. 1.45 ಕೋಟಿ ರೂ.ಗಳಲ್ಲಿ ಕಾಮನಬಾವಿ ಮತ್ತು ಬುರುಜನಹಟ್ಟಿಯಲ್ಲಿ ನೆಲಮಟ್ಟದ ಜಲ ಸಂಗ್ರಹಾಗಾರದಲ್ಲಿನ ಟ್ಯಾಂಕ್‌ಗಳ ಪುನಶ್ಚೇತನ ಮಾಡಲಾಗುವುದು. 94 ಲಕ್ಷ ರೂ.ಗಳಲ್ಲಿ ವೆಚ್ಚದಲ್ಲಿ ಸರ್ಚ್‌ ಪ್ರೊಟೆಕ್ಷನ್‌ ಡಿವೈಸ್‌ ಅಳವಡಿಸಲಾಗುತ್ತದೆ.

ಅಟಲ್‌ ನಗರ ಪರಿವರ್ತನಾ ಪುನರುಜ್ಜೀವನ ಅಭಿಯಾನ (ಅಮೃತ್‌) ಯೋಜನೆಯಡಿ 47.65 ಕೋಟಿ ರೂ.
ಗಳ ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆ ಪೈಪ್‌ಲೈನ್‌ ಕಾಮಗಾರಿಯನ್ನು ಮೇಲ್ದರ್ಜೆಗೇರಿಸಲಾಗಿದೆ. ಈ
ಅನುದಾನದಲ್ಲಿ ಶೇ. 50ರಷ್ಟು ಕೇಂದ್ರ ಸರ್ಕಾರದ ಪಾಲು, ಶೇ. 20ರಷ್ಟು ರಾಜ್ಯ ಸರ್ಕಾರದ ಪಾಲು. ಇನ್ನುಳಿದ ಶೇ. 30ರಷ್ಟು ಪಾಲನ್ನು ನಗರಸಭೆ ಭರಿಸಬೇಕಿದೆ. ನೀರು ಸರಬರಾಜು ಮಾಡುವ ಪೈಪ್‌ ಲೈನ್‌ ಕಾಮಗಾರಿ ಮೇಲ್ದರ್ಜೆಗೇರಿಸಲಾಗಿದೆ. ಇದರಿಂದ ನೀರು ಪೂರೈಕೆ ಅಡೆತಡೆಗಳು ನಿವಾರಣೆಯಾಗಬಹುದು ಎಂಬ ನಿರೀಕ್ಷೆ ಹೊಂದಲಾಗಿದೆ

ಹಿರಿಯೂರು-ಚಿತ್ರದುರ್ಗ ಮಧ್ಯೆ ಪೈಪ್‌ಲೈನ್‌ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಶೀಘ್ರದಲ್ಲೇ ಪೂರ್ಣಗೊಳಿಸಿ ನಿರಂತರವಾಗಿ ನೀರು ಪೂರೈಕೆ ಮಾಡಲಾಗುತ್ತದೆ.
 ಹನುಮಂತಪ್ಪ, ಇಇ, ಕ.ನ.ನೀ. ಸ ಮತ್ತು ಒಳ ಚರಂಡಿ ಮಂಡಳಿ ವಿಭಾಗ

„ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.