ಗುಣಮಟ್ಟದ ಮನೆ ನಿರ್ಮಾಣಕ್ಕೆ ಆದ್ಯತೆ: ಪದ್ಮನಾಭ
Team Udayavani, Oct 12, 2020, 6:15 PM IST
ಹೊಳಲ್ಕೆರೆ: ಸರಕಾರ ವಸತಿ ರಹಿತರಿಗೆ ಸೂರುಕಲ್ಪಿಸುವ ನಿಟ್ಟಿನಲ್ಲಿ ಮನೆ ನಿರ್ಮಾಣಕ್ಕೆ ಸಾಕಷ್ಟು ಪ್ರೋತ್ಸಾಹ ನೀಡುತ್ತಿದೆ. ಈ ನಿಟ್ಟಿನಲ್ಲಿ ಕೊಳಚೆ ಅಭಿವೃದ್ಧಿ ಮಂಡಳಿ ಪಟ್ಟಣದ ಒಂದನೇ ವಾರ್ಡ್ ಸೇರಿದಂತೆ ವಿವಿಧ ಕಡೆಗಳಲ್ಲಿ ಗುಣಮಟ್ಟದ ಮನೆಗಳನ್ನು ನಿರ್ಮಿಸುತ್ತಿದೆ ಎಂದು ಕೊಳಚೆ ಅಭಿವೃದ್ಧಿ ಮಂಡಳಿಯ ದಾವಣಗೆರೆ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಸ್.ಜಿ. ಪದ್ಮನಾಭ ಹೇಳಿದರು.
ಪಟ್ಟಣದ ಒಂದನೇ ವಾರ್ಡ್ನ ಕೊಳಚೆ ಪ್ರದೇಶದಲ್ಲಿ ವಸತಿ ರಹಿತರಿಗೆ ನಿರ್ಮಾಣ ಮಾಡುತ್ತಿರುವ ಮನೆಗಳ ಕಾಮಗಾರಿ ಪರಿಶೀಲಿಸಿದ ಬಳಿಕ ಪಟ್ಟಣದವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಸರಕಾರ ಪ್ರತಿಯೊಬ್ಬರಿಗೂ ಸೂರು ಎನ್ನುವ ಕಲ್ಪನೆಯೊಂದಿಗೆ ಮನೆಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ. ಸಾರ್ವಜನಿಕರು ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು. ಮನೆಗಳ ಕಾಮಗಾರಿಗಳು ಸಾಕಷ್ಟು ಗುಣಮಟ್ಟದಿಂದ ಕೂಡಿವೆ ಎಂದರು.
ಪಟ್ಟಣ ಪಂಚಾಯಿಯಿ ಸದಸ್ಯೆ ಎಚ್.ಆರ್.ನಾಗರತ್ನ ವೇದಮೂರ್ತಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ದೇಶದಲ್ಲಿರುವ ಪ್ರತಿಯೊಬ್ಬ ಸೂರು ರಹಿತರಿಗೆ ಮನೆ ಕಟ್ಟಿಕೊಡುವ ಮಹತ್ವಾಕಾಂಕ್ಷೆ ಹೊಂದಿವೆ. ಈ ನಿಟ್ಟಿನಲ್ಲಿ ಪಟ್ಟಣದಲ್ಲಿರುವ ಕೊಳಚೆ ಪ್ರದೇಶದಲ್ಲಿ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸರಕಾರದ ಯೋಜನೆಗಳನ್ನು ಅರಿತುಕೊಂಡಿರುವ ಶಾಸಕ ಎಂ. ಚಂದ್ರಪ್ಪ ಮೊದಲ ಹಂತದಲ್ಲಿ 315 ಮನೆಗಳನ್ನು ಹಾಗೂ ಎರಡನೇ ಹಂತದಲ್ಲಿ 210 ಮನೆಗಳನ್ನು ಮಂಜೂರು ಮಾಡಿಸಿಕೊಟ್ಟಿದ್ದಾರೆ. ಹಾಗಾಗಿ ಒಂದನೇ ವಾರ್ಡ್ನ ಕುಂಬಾರಹಟ್ಟಿ, ಮುಸ್ಟಿಗರ ಹಟ್ಟಿ, ಬೆಳೆಗಾರ ಹಟ್ಟಿ ಸೇರಿದಂತೆ ಪಟ್ಟಣದ ವ್ಯಾಪ್ತಿಯಲ್ಲಿರುವ ಕೊಳಚೆ ಪ್ರದೇಶದ ಬಡವರಿಗೆ ಮನೆ ಕಟ್ಟಿಸಿ ಕೊಡಲು ಶ್ರಮಿಸಲಾಗುತ್ತಿದೆ. ಒಂದನೇ ವಾರ್ಡ್ನಲ್ಲಿ 60 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಇಂಜಿನಿಯರ್ ವೀರೇಶ್ಬಾಬು, ಪಪಂ ಮಾಜಿ ಸದಸ್ಯ ಎಸ್.ಬಿ. ಶಿವರುದ್ರಪ್ಪ, ವಕೀಲ ಎಸ್.ವೇದಮೂರ್ತಿ, ಗುತ್ತಿಗೆದಾರ ಪ್ರಕಾಶ್, ರವಿಕುಮಾರ್ ಮತ್ತಿತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ