ಬಚ್ಚಿಟ್ಟಿದ್ದ 6 ಬಾಂಗ್ಲಾ ಮಹಿಳೆಯರ ರಕ್ಷಣೆ
Team Udayavani, Aug 11, 2018, 7:00 AM IST
ಚಿತ್ರದುರ್ಗ: ಅಕ್ರಮ ಬಾಂಗ್ಲಾ ವಲಸಿಗರನ್ನು ದೇಶದಿಂದ ಹೊರ ಹಾಕಬೇಕೆಂಬ ಒತ್ತಾಯ ಹೆಚ್ಚುತ್ತಿರುವ ಬೆನ್ನಲ್ಲೇ ನಗರದ ಹೋಟೆಲ್ ಮತ್ತು ಲಾಡ್ಜ್ಗಳ ನೆಲಮಾಳಿಗೆಯಲ್ಲಿ ಸುರಂಗ ಕೊರೆದು ಬಚ್ಚಿಟ್ಟಿದ್ದ ಬಾಂಗ್ಲಾದೇಶದ ಆರು ಮಹಿಳೆಯರನ್ನು ಪೊಲೀಸರು ಗುರುವಾರ ಪತ್ತೆ ಮಾಡಿದ್ದಾರೆ.
ಹೋಟೆಲ್ ಮತ್ತು ಲಾಡ್ಜ್ಗಳ ನೆಲಮಾಳಿಗೆಯಲ್ಲಿ ಸುರಂಗ ಕೊರೆದು ಅದರಲ್ಲಿ ಮಹಿಳೆಯರನ್ನು ಬಚ್ಚಿಟ್ಟು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು ಎಂಬ ಮಾಹಿತಿ ಆಧರಿಸಿ ರಾಷ್ಟ್ರೀಯ ಹೆದ್ದಾರಿ -4ರ ಹೋಟೆಲ್ಗಳ ಮೇಲೆ ದಾಳಿ ನಡೆಸಿದ ಪೊಲೀಸರು,ಬಾಂಗ್ಲಾದೇಶದ ಆರು ಮಹಿಳೆಯರನ್ನು ರಕ್ಷಿಸಿ ಒಂಭತ್ತು ಪುರುಷರನ್ನು ಬಂಧಿಸಿದ್ದಾರೆ.
ಚಿತ್ರದುರ್ಗದ ಅನಾಮಿಕ ಮಾಹಿತಿದಾರನೊಬ್ಬ ಮೈಸೂರಿನ ಒಡನಾಡಿ ಸಂಸ್ಥೆಗೆ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದ. ಒಡನಾಡಿ ಸಂಸ್ಥೆಯ ಸ್ಟಾನ್ಲಿ ಮತ್ತು ಪರಶುರಾಮ್ ಈ ವಿಷಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಗಮನಕ್ಕೆ ತಂದಿದ್ದರು. ಇದಕ್ಕೆ ಸ್ಪಂದಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೋಟೆಲ್ಗಳ ಮೇಲೆ ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು